ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 07. ಬೆಳ್ಳಂಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರ  ಎಂಬಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 6.57 ರ ಸುಮಾರಿಗೆ ಭೂಕಂಪನ ಉಂಟಾಗಿದ್ದು, ಕ್ಯಾಂಪ್ ಬೆಲ್ ಕೊಲ್ಲಿಯ ಆಗ್ನೇಯಕ್ಕೆ 2 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಬೆಳ್ಳಂಬೆಳಗ್ಗೆ ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನವರಿ 29ರಂದು ಕೇಂದ್ರ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಜನವರಿ 29ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು,  ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ. ರಾಷ್ಟ್ರಪತಿ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜ. 29ರಿಂದ ಫೆಬ್ರವರಿ 15ರವರೆಗೂ ನಡೆಸಬೇಕು, ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ.

ಜನವರಿ 29ರಂದು ಕೇಂದ್ರ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪಲ್ಗಾರ್, ಜ. 05. ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ವಶಪಡಿಸಿಕೊಂಡ ಘಟನೆ ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ. ಕಿರಾತಕನು ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ. ತದನಂತರ ಆಕೆಯನ್ನು ಹೊಲದಲ್ಲಿ ಕಂಡ ಪೋಷಕರು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ  ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಹೆಲ್ಮೆಟ್ ಧರಿಸದೇ ಪ್ರಯಾಣಿಸುವವರ ಬೈಕ್ ಗಳನ್ನು ವಶಪಡಿಸಿಕೊಳ್ಳಲು ಸೈಬರಾಬಾದ್ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಹೆಲ್ಮೆಟ್ ಇಲ್ಲದವರಿಗೆ ಭಾರೀ ದಂಡ ಹಾಕುವ ಬದಲು ಅವರ ಬೈಕ್‌ ಗಳನ್ನೇ ವಶಕ್ಕೆ ಪಡೆದು, ಹೆಲ್ಮೆಟ್ ‌ಅನ್ನು ತಂದ ಬಳಿಕವಷ್ಟೇ ಬೈಕ್‌ಗಳನ್ನು ಮರಳಿ ಕೊಡಲಿದ್ದಾರೆ. ಇದಕ್ಕೆಂದೇ ನಗರದ ಏಳು ಕಡೆಗಳಲ್ಲಿ ವಿಶೇಷ ಚೆಕ್‌ ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು, 24 ಗಂಟೆಗಳ ಕಾಲ ಪಹರೆ ಕಾಯುವ ವ್ಯವಸ್ಥೆ ಮಾಡಲಾಗಿದೆ.

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ಸಂಸತ್ ನಿರ್ಮಾಣಕ್ಕೆ ಸಂಪುಟ ಅಸ್ತು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 05. ಇಂಡಿಯಾ ಗೇಟ್ ಬಳಿ ಹೊಸ ಸಂಸತ್ ಸಂಕೀರ್ಣ ನಿರ್ಮಾಣ ಕಾರ್ಯ ನಡೆಸಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ. ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ಟಾ ಯೋಜನೆಗೆ ನೀಡಲಾದ ಪರಿಸರ ಅನುಮತಿ ಸೇರಿದಂತೆ ಹಲವಾರು ಅಂಶಗಳನ್ನು ಪ್ರಶ್ನಿಸಿರುವ ಒಂದು ಗುಂಪಿನ ಮನವಿಯನ್ನು ಆಲಿಸುವಾಗ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.

ಹೊಸ ಸಂಸತ್ ನಿರ್ಮಾಣಕ್ಕೆ ಸಂಪುಟ ಅಸ್ತು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೇನುಹುಳಗಳ ದಾಳಿಗೆ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 05. ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಭರತ್ (14) ಎಂದು ಗುರುತಿಸಲಾಗಿದೆ. ವಿಜಯನಗರದ ಸರಕಾರಿ ಕಾಲೇಜಿನ ಮೈದಾನದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ್ದು, ವಿದ್ಯಾರ್ಥಿಗಳು ದಿಕ್ಕಾಪಾಲಗಿ ಓಡಿದರೂ ತಪ್ಪಿಸಲು ಸಾಧ್ಯವಾಗಿಲ್ಲ.

ಜೇನುಹುಳಗಳ ದಾಳಿಗೆ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಹಿರಿಯ ನಾಯಕ ಬಸವಂತರೆಡ್ಡಿ ಪಾಟೀಲ ವಿಧಿವಶ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಜ. 05. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ (88) ಅವರು ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ.

ಬಿಜೆಪಿ ಹಿರಿಯ ನಾಯಕ ಬಸವಂತರೆಡ್ಡಿ ಪಾಟೀಲ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top