ರಾಷ್ಟ್ರೀಯ ನ್ಯೂಸ್

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಭೀಮಾ‌ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವೃದ್ದೆಯೋರ್ವರನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಕಟ್ಟಿಸಂಗಾವಿ ಬಳಿಯ ಭೀಮಾ ನದಿ ಸೇತುವೆಯಲ್ಲಿ ನಡೆದಿದೆ. ಆಳಂದ ಮೂಲದ ಗುರುಬಾಯಿ (60) ಎಂಬ ವೃದ್ದೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ತಿಸುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಜೇವರ್ಗಿ ಪೊಲೀಸ್ ಠಾಣೆ ಪೇದೆ ಅನಿಲ್‌ ಕುಮಾರ್ ಆಕೆಯನ್ನು ಗಮನಿಸಿ ರಕ್ಷಣೆ ಮಾಡಿದ್ದಾರೆ.    

ಸೇತುವೆಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯ ರಕ್ಷಿಸಿದ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ

(ನ್ಯೂಸ್ ಕಡಬ) newskadaba.com ಜ. 03. ತಮಿಳಿನ ಖ್ಯಾತ ಸಿನಿಮಾ ನಿರ್ಮಾಪಕ ಕೆ. ಬಾಲು ಇಂದು ನಿಧನರಾಗಿದ್ದಾರೆ. ಇವರ ನಿಧನಕ್ಕೆ ತಮಿಳು ಚಿತ್ರರಂಗದ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಮಿಳು ಸಿನೆಮಾದ ಖ್ಯಾತ ನಿರ್ಮಾಪಕ ಕೆ.ಬಾಲು ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 03. ಅಂತರ್ ಜಾತಿ ವಿವಾಹವಾದ ಯುವಕನೋರ್ವನನ್ನು, ಉಗ್ರರು ಇರಿದು ಹತ್ಯೆ ಮಾಡಿದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ನೀರಜ್ ಎಂದು ಗುರುತಿಸಲಾಗಿದೆ. ನೀರಜ್ ಮದುವೆಯಾದ ಹುಡುಗಿಯ ಸಹೋದರರೇ ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಆರೋಪಿಗಳು ಯುವಕನಿಗೆ ಇರಿದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಮತ್ತೊಂದು ಆಸ್ತಿ ಮಾರಾಟಕ್ಕೆ ಕೇಂದ್ರ ಪ್ಲಾನ್..! ➤ 90 ಸಾವಿರ ಕೋಟಿಗೆ ಮಾರಾಟವಾಗಲಿದೆಯೇ ಪೆಟ್ರೋಲ್ ಕಂಪನಿ..?

(ನ್ಯೂಸ್ ಕಡಬ) newskadaba.com ದೆಹಲಿ, ಜ. 02. ಕೇಂದ್ರ ಸರ್ಕಾರವು ಸರ್ಕಾರಿ ಒಡೆತನದ ಆಸ್ತಿಗಳನ್ನೆಲ್ಲಾ ಖಾಸಗಿಯವರಿಗೆ ಮಾರುತ್ತಿದ್ದಾರೆ‌ ಎಂಬ ಆರೋಪದ ಬೆನ್ನಲ್ಲೇ ದೇಶದ ಮತ್ತೊಂದು ದೊಡ್ಡ ಆಸ್ತಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಸರ್ಕಾರವು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡನ್ನು ಖಾಸಗೀಕರಣ ಮಾಡಿ ಸುಮಾರು 90 ಸಾವಿರ ಕೋಟಿ ಸಂಗ್ರಹಿಸಲು ಎದುರು ನೋಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಮತ್ತೊಂದು ಆಸ್ತಿ ಮಾರಾಟಕ್ಕೆ ಕೇಂದ್ರ ಪ್ಲಾನ್..! ➤ 90 ಸಾವಿರ ಕೋಟಿಗೆ ಮಾರಾಟವಾಗಲಿದೆಯೇ ಪೆಟ್ರೋಲ್ ಕಂಪನಿ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ..❗ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜ. 02. ಭಾರತೀಯ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಕುರಿತು ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ..❗ ➤ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ…!

(ನ್ಯೂಸ್ ಕಡಬ) newskadaba.com ದೆಹಲಿ, ಜ. 01. ಹಾರ್ಲೆ ಡೇವಿಡ್ ಸನ್ ಬೈಕ್ ಶೋರೂಂ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಮುಂಜಾನೆ ಹೊತ್ತಿಗೆ ಆಗ್ನಿ ಆವರಿಸಿದ್ದು, ಘಟನೆಯಲ್ಲಿ ಅಪಾರ ಹಾನಿಯುಂಟಾಗಿದೆ. 25 ಅಗ್ನಿ ಶಾಮಕ ವಾಹನಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ಪಂಜಾಬ್, ಜ. 02. ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಂಜಾಬ್ ಮೂಲದವರಾದ ಬೂಟಾ ಸಿಂಗ್ (86) ಇಂದು ನಿಧನರಾಗಿದ್ದಾರೆ. ಇವರು ಇಂದಿರಾ ಗಾಂಧಿಯವರ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಲ್ಲದೇ, ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. 2007ರಿಂದ 2010 ರವರೆಗೆ ಪರಿಶಿಷ್ಟ ವರ್ಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು.

ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಡಿವೈಎಫ್.ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಘಟನಾ ಸ್ಥಳಕ್ಕೆ ಆರೋಪಿಯನ್ನು ಕರೆ ತಂದು ಮಾಹಿತಿ ಕಲೆ ಹಾಕಿದ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ಡಿವೈಎಫ್‌.ಐ ಕಾರ್ಯಕರ್ತ ಕಲ್ಲೂರಾವಿ ಅಬ್ದುಲ್‌‌ ರಹಮಾನ್‌ (30)‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕ್ರೈಂ ಬ್ರಾಂಚ್‌ ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಇರ್ಷಾದ್‌‌‌ನನ್ನು ಕೃತ್ಯ ನಡೆಸಿದ ಸ್ಥಳಕ್ಕೆ ಕರೆದು ಮಾಹಿತಿ ಕಲೆ ಹಾಕಿದ್ದು, ಕೃತ್ಯಕ್ಕೆ ಬಳಸಿದ್ದ ಮಾರಕಾಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಡಿ.23ರಂದು ಈ ಹತ್ಯೆ ನಡೆದಿದ್ದು, ಕಾಞಾಂಗಾಡ್ ಕಲ್ಲೂರಾವಿಯಲ್ಲಿ ತಂಡವೊಂದು ಅಬ್ದುಲ್‌‌‌ ರಹಮಾನ್‌‌ ಅವರನ್ನು ಇರಿದು ಹತ್ಯೆಗೈದಿತ್ತು. ಘಟನೆಗೆ ಸಂಬಂಧಿಸಿದಂತೆ ಇರ್ಷಾದ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಕಾಸರಗೋಡು: ಡಿವೈಎಫ್.ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಘಟನಾ ಸ್ಥಳಕ್ಕೆ ಆರೋಪಿಯನ್ನು ಕರೆ ತಂದು ಮಾಹಿತಿ ಕಲೆ ಹಾಕಿದ ತನಿಖಾ ತಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷಿ ಕಾಯ್ದೆ ವಿರೋಧಿಸಿ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ಸುರಿದು ಪ್ರತಿಭಟನೆ ಮಾಡಿದ ರೈತರು

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 02. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪೊಂದು ಪಂಜಾಬ್‌ ನ ಹೊಶಿಯಾರ್‌ ಪುರದಲ್ಲಿರುವ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ತಂದು ಸುರಿದಿದ್ದಾರೆ ಎಂದು ಆಪಾದಿಸಲಾಗಿದೆ.   ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅಮರೀಂದರ್ ಸಿಂಗ್, “ಪ್ರತಿಭಟನಾ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ಸುರಿದು ಪ್ರತಿಭಟನೆ ಮಾಡಿದ ರೈತರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡುಗೆ ಅನಿಲ ಬಳಕೆದಾರರಿಗೆ ಮತ್ತೆ ಶಾಕ್ ➤ ಗಾಯದ ಮೇಲೆ ಬರೆ ಎಳೆಯಲಿದ್ಯಾ ಬೆಲೆ ಹೆಚ್ಚಳ..?

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.28. ಪೆಟ್ರೋಲ್ ಬೆಲೆ ದಿನೇ ದಿನೇ ಪರಿಷ್ಕರಣೆ ಮಾಡುವ ರೀತಿಯಲ್ಲಿಯೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಗಳನ್ನು ಪರಿಷ್ಕರಣೆ ಮಾಡಲು ಯೋಚಿಸುತ್ತಿದ್ದು, ತೈಲ ಕಂಪನಿಗಳಿಗೆ ಆಗುವ ನಷ್ಟವನ್ನು ಕಡಿಮೆ ಮಾಡಲು ಈ ಯೋಜನೆ ರೂಪಿಸಿರುವುದಾಗಿ ತಿಳಿದುಬಂದಿದೆ. ಅಡುಗೆ ಅನಿಲಕ್ಕೆ ಕೊಡಲಾಗುತ್ತಿದ್ದ ಸಬ್ಸಿಡಿಯನ್ನು ಸರ್ಕಾರವು ಈ ವರ್ಷದ ಸೆಪ್ಟೆಂಬರ್ ನಲ್ಲಿ ತೆಗೆದುಹಾಕಿತ್ತು. ತಜ್ಞರ ಪ್ರಕಾರ, ಪೆಟ್ರೋಲಿಯಂ ಕಂಪನಿಗಳು ಕೂಡ ಬೆಲೆ ಏರಿಕೆ ಮಾಡುವ ಹೊಸ

ಅಡುಗೆ ಅನಿಲ ಬಳಕೆದಾರರಿಗೆ ಮತ್ತೆ ಶಾಕ್ ➤ ಗಾಯದ ಮೇಲೆ ಬರೆ ಎಳೆಯಲಿದ್ಯಾ ಬೆಲೆ ಹೆಚ್ಚಳ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top