ರಾಷ್ಟ್ರೀಯ ನ್ಯೂಸ್

ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ.   ರಾಜ್ಯಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಮತ್ತು […]

ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ ನ. 25: ರಾಜ್ಯಸಭಾ ಸದಸ್ಯ, ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.       ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಜೊತೆಗೆ ತಿಂಗಳ ಹಿಂದೆ ಕೋವಿಡ್ 19 ಪಾಸಿಟಿವ್ ಬಂದಾಗ ಅವರನ್ನು ಹೆಗಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗುರು ಗ್ರಾಮದ ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಸೆಣಸಾಡಿದ ಅಹಮದ್

ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ Read More »

ರಾಷ್ಟ್ರೀಯ ನ್ಯೂಸ್

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್”

(ನ್ಯೂಸ್ ಕಡಬ) newskadaba.com ದೆಹಲಿ ನ. 24: WWE ಕುಸ್ತಿ ನೋಡಿಕೊಂಡೇ ಬೆಳೆದ ದೊಡ್ಡವರಾದವರಿಗೆ ಬೇಸರವಾಗುವ ಬೆಳವಣಿಗೆಯೊಂದರಲ್ಲಿ, ‘ದಿ ಅಂಡರ್‌ಟೇಕರ್‌’ ಕುಸ್ತಿ ಅಂಗಳಕ್ಕೆ ನಿವೃತ್ತಿ ಘೋಷಿಸಿದ್ದಾರೆ. ‘ದಿ ಅಂಡರ್‌ಟೇಕರ್‌’ ಹೆಸರಿನ ಸ್ಟೇಜ್‌ನೇಮ್‌ನಿಂದಲೇ ಜನಪ್ರಿಯರಾದ ಮಾರ್ಕ್ ವಿಲಿಯಮ್ ಕಾಲವೇ, “ನೆಮ್ಮದಿಯಿಂದ ನಿವೃತ್ತ ಜೀವನ ನಡೆಸುವ ಕಾಲ ಬಂದಿದೆ” ಎಂದು ತಮ್ಮ ಟ್ವೀಟರ್‌ ಮೂಲಕ ಹೇಳಿಕೊಂಡಿದ್ದಾರೆ.   55ರ ಹರೆಯದ ಈ ವೃತ್ತಿಪರ ಕುಸ್ತಿಪಟುವಿನ ವಿದಾಯಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.  55 ವರ್ಷದ ಈ ಕುಸ್ತಿಪಟು, ತಮ್ಮ 30

WWE ಪ್ರಿಯರಿಗೆ ಟೇಕರ್ ಶಾಕ್ ➤ ಕುಸ್ತಿ ಅಂಗಳಕ್ಕೆ ವಿದಾಯ ಹೇಳಿದ “ಅಂಡರ್ ಟೇಕರ್” Read More »

ರಾಷ್ಟ್ರೀಯ ನ್ಯೂಸ್

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ ನ. 24: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.  84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.     ಕಾಂಗ್ರೆಸ್ ಮುಖಂಡರು ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನವೆಂಬರ್ 2ರಿಂದ ಕೊರೋನಾ ನಂತರದ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಎರಡು ತಿಂಗಳ ಚಿಕಿತ್ಸೆ ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದ

ಅಸ್ಸಾಂನಲ್ಲಿ ದಾಖಲೆ ಬರೆದಿದ್ದ ಮಾಜಿ ಸಿಎಂ ತರುಣ್ ಗೊಗೋಯಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಡಿಸೆಂಬರ್‌ವರೆಗೆ ಶಾಲೆ ಇಲ್ಲ ➤ ಸಿಎಂ ಬಿಎಸ್‍ವೈ ಅಧಿಕೃತ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 23: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಾಲಾ-ಕಾಲೇಜು ಪ್ರಾರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ. ಸಭೆ

ಡಿಸೆಂಬರ್‌ವರೆಗೆ ಶಾಲೆ ಇಲ್ಲ ➤ ಸಿಎಂ ಬಿಎಸ್‍ವೈ ಅಧಿಕೃತ ಘೋಷಣೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿ “ಮಾಲಾ ಅಡಿಗ” ಕುಂದಾಪುರ ಮೂಲದವರು

(ನ್ಯೂಸ್ ಕಡಬ) newskadaba.com ಉಡುಪಿ ನ. 23: ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬಿಡೆನ್‌ ಅವರ ಪತ್ನಿ ಜಿಲ್ ಬಿಡೆನ್‌ ನೀತಿ ನಿರ್ದೇಶಕರಾಗಿ ಭಾರತ ಮೂಲದ ಮಾಲಾ ಅಡಿಗ (47) ನೇಮಕ ಗೊಂಡಿದ್ದಾರೆ.ಮಾಲಾ ಅಡಿಗ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಕಕ್ಕುಂಜೆ ಅಡಿಗ ಕುಟುಂಬಕ್ಕೆ ಸೇರಿದ್ದಾರೆ.   ಮಾಲಾ ಅಡಿಗರ ಪತಿ ಚಾರ್ಲ್ಸ್‌ ಬೀರೋ ಕೂಡಾ ವಕೀಲರಾಗಿದ್ದು, 15 ರ ಹರೆಯದ ಮಗಳಿದ್ದಾಳೆ. ಅಮೆರಿಕದಲ್ಲೇ ಹುಟ್ಟಿ ಬೆಳೆದಿರುವ ಮಾಲಾ ಅಡಿಗ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡು ಅಮೆರಿಕದ

ಜೋ ಬಿಡೆನ್ ಪತ್ನಿಯ ನೀತಿ ನಿರ್ದೇಶಕಿ “ಮಾಲಾ ಅಡಿಗ” ಕುಂದಾಪುರ ಮೂಲದವರು Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ

(ನ್ಯೂಸ್ ಕಡಬ) newskadaba.com ಜೋಹಾನ್ಸಬರ್ಗ್ ನ. 23: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು.

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ Read More »

ರಾಷ್ಟ್ರೀಯ ನ್ಯೂಸ್

ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ.

(ನ್ಯೂಸ್ ಕಡಬ) newskadaba.com ಮಥುರಾ ನ. 23: ಇಬ್ಬರು ಸಾಧುಗಳು ಚಹಾ ಕುಡಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಸಾಧುಗಳು ಚಹಾ ಸೇವಿಸಿದ್ದು, ಈ ಪೈಕಿ ಇಬ್ಬರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಸಾವಿಗೀಡಾಗಿದ್ದು, ಇನ್ನೋರ್ವ ಸಾಧು ರಾಮ್ ಬಾಬು ಎಂಬವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವು ತಂಗಿದ್ದ ಪ್ರದೇಶಕ್ಕೆ ಚಹಾ ತರಿಸಿಕೊಂಡು ಇವರು ಸೇವಿಸಿದ್ದರು. ಚಹಾದಲ್ಲಿ ವಿಷ ಬೆರೆಸಿದ್ದಾರೆ ಎಂಬ ಅನುಮಾನಗಳು ಸೃಷ್ಟಿಯಾಗಿವೆ.

ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ. Read More »

ರಾಷ್ಟ್ರೀಯ ನ್ಯೂಸ್

24 ಗಂಟೆಗಳಲ್ಲಿ ಒಂದರ ಹಿಂದೊಂದರಂತೆ 78 ಗೋವುಗಳು ಮೃತ್ಯು

(ನ್ಯೂಸ್ ಕಡಬ) newskadaba.com ಜೈಪುರ ನ. 23: ತೋಟವೊಂದರಲ್ಲಿ 24 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೊಂದರಂತೆ ಕನಿಷ್ಠ 78 ಹಸುಗಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಹಸುಗಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಚುರು ಜಿಲ್ಲೆಯ ತೋಟವೊಂದರಲ್ಲಿ ಈ ಘಟನೆ ನಡೆದಿದೆ. ಸರ್ದರ್ಶಹರ್‌ ಬಿಲ್ಲುಪಸ್ ರಾಂಪುರ ಗ್ರಾಮದ ಖಾಸಗಿ ಜಮೀನಿನಲ್ಲಿ ಈ ಘಟನೆ ನಡೆದಿದೆ. ಆಹಾರದಲ್ಲಿ ವಿಷ ವಸ್ತುಗಳನ್ನು ಸೇವಿಸಿ ಹಸುಗಳು ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ಹಸುಗಳಿಗೆ ನೀಡಲಾಗಿರುವ ಆಹಾರದ ಮಾದರಿಗಳನ್ನು

24 ಗಂಟೆಗಳಲ್ಲಿ ಒಂದರ ಹಿಂದೊಂದರಂತೆ 78 ಗೋವುಗಳು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮೂತ್ರಪಿಂಡ ವೈಫಲ್ಯದಿಂದ ಕಿರುತೆರೆ ನಟಿ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ ನ. 23 :ಕ್ಲಾಸ್ ಆಫ್ 2020 ಮತ್ತು ಸೇಠ್ ಜಿ ಮುಂತಾದ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಲೀನಾ ಆಚಾರ್ಯ ಅವರು ಮೂತ್ರಪಿಂಡ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ನಟಿ ಲೀನಾ ಆಚಾರ್ಯ ಅವರ ಜೊತೆ ನಟಿಸಿದ್ದ ನಟ ರೋಹನ್‌ ಮೆಹ್ರಾ ಮಾಹಿತಿ ನೀಡಿದ್ದಾರೆ. ಮೆಹ್ರಾ ಅವರು “ಕ್ಲಾಸ್‌ ಆಫ್ 2020′ ನಲ್ಲಿ ಆಚಾರ್ಯ ಜತೆಗೆ ನಟಿಸಿದ್ದರು. ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಆಯುಷ್‌ ಆನಂದ್‌ ಲೀನಾ ತನಗೆ ಇದ್ದ

ಮೂತ್ರಪಿಂಡ ವೈಫಲ್ಯದಿಂದ ಕಿರುತೆರೆ ನಟಿ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top