ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್‍ ಕೀ ಬಾತ್‍’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ […]

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.   ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೆವಾಡಿಯಾ ಅ. 31: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.       ಬಳಿಕ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವಿಕ್ಷೀಸಿದ್ದಾರೆ.ಇಂದು

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.!

(ನ್ಯೂಸ್ ಕಡಬ) newskadaba.com ಲಕ್ನೋ ಅ. 30: 15 ವರ್ಷದ ಬಾಲಕನೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.15 ವರ್ಷದ ಬಾಲಕ ಗ್ರಾಮದ 7ವರ್ಷದ ಬಾಲಕಿಯನ್ನು ಮೇಲೆ ಗುರುವಾರ ಸಂಜೆ ಅತ್ಯಾಚಾರ ಎಸಗಿದ್ದಾನೆ. ಅತ್ಯಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅತ್ಯಾಚಾರ ನಡೆಸಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಪರ್ಣ ಗೌತಮ್ ಶುಕ್ರವಾರ ತಿಳಿಸಿದ್ದಾರೆ.ಶಹಜಹಾನ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್

(ನ್ಯೂಸ್ ಕಡಬ) newskadaba.com ಮುಂಬೈ ಅ. 30: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇಂದು ಹಸೆಮಣೆ ಏರಲಿದ್ದಾರೆ. ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.   ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿರುವ ಕಾಜಲ್​, ಉದ್ಯಮಿ ಗೌತಮ್​ ಕಿಚ್ಲು ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಅನೌನ್ಸ್​ ಮಾಡಿದ್ರು. ಈಗಾಗಲೇ ಮೆಹೆಂದಿ ಹಾಗೂ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!? Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.     ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.!

(ನ್ಯೂಸ್ ಕಡಬ) newskadaba.com ತ್ರಿಪುರಾ ಅ. 29: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 27 ವರ್ಷದ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನ್ನ ಬಾಯ್‍ಫ್ರೆಂಡ್ ಬೇರೊಬ್ಬಳ ಜೊತೆ ಸಂಬಂಧ ಹೊಂದಿದ್ದ ಸಿಟ್ಟಿನಿಂದ ಆಕೆ ಈ ಕೃತ್ಯ ಎಸಗಿದ್ದಾಳೆ. ಆ್ಯಸಿಡ್ ದಾಳಿಗೊಳಗಾದ ಯುವಕನನ್ನು ಅಗರ್ತಲಾ ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ಮೂಗು ಹಾಗೂ ಕಣ್ಣುಗಳಿಗೆ

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.!

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 29: ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ಕ್ಷಯ ರೋಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಹರ್ಯಾಣದ ಗುರುಗ್ರಾಮ್ ನಗರದಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಯುವತಿಯೊಬ್ಬಳು ಚಿಕಿತ್ಸೆ ಪಡೆಯುತ್ತಿದ್ದಳು. ಶ್ವಾಸಕೋಶದ ಕ್ಷಯರೋಗದಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಯುವತಿ ಕಳೆದ ಆರು ದಿನಗಳಿಂದ ಅರೆಪ್ರಜ್ಞಾವಸ್ಥೆಯಲ್ಲಿದ್ದಳು. ಈ ವೇಳೆ ಮನೆಯವರು ನೋಡಲು ಹೋದಾಗ ಚೀಟಿಯೊಂದರಲ್ಲಿ ‘ಅತ್ಯಾಚಾರಿ ವಿಕಾಸ್’ ಎಂದು ಬರೆದು ಮನೆಯವರ ಕೈಗಿಟ್ಟಿದ್ದಾಳೆ. ಆಗ ಆಕೆಯ

ಐಸಿಯುನಲ್ಲಿದ್ದ ರೋಗಿಯನ್ನೂ ಬಿಡದ ಕಾಮುಕರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜರಾತಿನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 29: ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಎರಡು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವರಿಗೆ 92 ವರ್ಷ ವಯಸ್ಸಾಗಿತ್ತು.     ಎದೆನೋವಿನಿಂದ ದೂರಿದ ನಂತರ ಅವರನ್ನು ಅಹಮದಾಬಾದ್‌ನ ಸ್ಟರ್ಲಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾದರು. ಕೇಶುಭಾಯ್ ಪಟೇಲ್ 1995 ಮತ್ತು 1998 ರಿಂದ 2001 ರವರೆಗೆ ಗುಜರಾತ್ ಸಿಎಂ ಆಗಿ ಸೇವೆ ಸಲ್ಲಿಸಿದರು.ಗುಜರಾತ್ ವಿಧಾನಸಭೆಯ ಸದಸ್ಯರಾಗಿ ಆರು ಬಾರಿ

ಗುಜರಾತಿನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top