ರಾಷ್ಟ್ರೀಯ ನ್ಯೂಸ್

ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ದರ ➤ ಆಭರಣ ಪ್ರಿಯರಲ್ಲಿ ಮತ್ತೆ ಮಂದಹಾಸ

(ನ್ಯೂಸ್ ಕಡಬ) newskadaba.comಬೆಂಗಳೂರು, ಅ. 24.  ಲಾಕ್‌ ಡೌನ್‌ ಸಮಯದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಇಳಿಕೆಯಾಗಿದ್ದು, ಸದ್ಯ ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡಿದ್ದು,ಗ್ರಾಹಕರನ್ನ ಸಂತುಷ್ಠರನ್ನಾಗಿಸಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ. ಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 210 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ ಬೆಲೆ 47,000 ರೂಪಾಯಿಯಾಗಿದೆ. ಇನ್ನು, 24 ಕ್ಯಾರೆಟ್​ ನ 10 ಗ್ರಾಂ. ಚಿನ್ನದ ದರವೂ 130 ರೂಪಾಯಿ ಇಳಿಕೆ ಕಂಡು, 51,270 ರೂಪಾಯಿ ಆಗಿದೆ. ಇನ್ನು […]

ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ದರ ➤ ಆಭರಣ ಪ್ರಿಯರಲ್ಲಿ ಮತ್ತೆ ಮಂದಹಾಸ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…!

(ನ್ಯೂಸ್ ಕಡಬ) newskadaba.com ಅ. 24. ಮನೆ ಕಟ್ಟುವವರಿಗೆ, ವಾಹನ ಖರೀದಿ, ವಿದ್ಯಾಭ್ಯಾಸ ಸೇರಿದಂತೆ ಹಲವು ಕಾರಣಕ್ಕೆ ಬ್ಯಾಂಕುಗಳು ಸಾಲ ನೀಡುತ್ತವೆ. ಆದರೆ ಮದುವೆಗೆ ಸಾಲ ನೀಡೋದಕ್ಕೆ ಮಾತ್ರ ಬಹುತೇಕ ಬ್ಯಾಂಕ್ ಗಳು ಹಿಂದೇಟು ಹಾಕುತ್ತದೆ. ಆದರೆ ಸರಕಾರಿ ಸ್ವಾಮ್ಯದ ಬ್ಯಾಂಕ್‌ ವೊಂದು ಎರಡನೇ ಮದುವೆ ಆಗುವವರಿಗೆ ಲಕ್ಷಾಂತರ ರೂಪಾಯಿ ಸಾಲ ನೀಡುವ ಯೋಜನೆಯೊಂದನ್ನು ಘೋಷಿಸಿದೆ.     ಈ ಬ್ಯಾಂಕ್‌ ಎರಡನೇ ಮದುವೆಗೆಂದು 8389 ಡಾಲರ್‌ ಅಂದ್ರೆ 6,19,382 ರೂಪಾಯಿಯನ್ನ ಸಾಲ ರೂಪದಲ್ಲಿ ನೀಡಲಿದೆ. ಆದರೆ

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…! Read More »

ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 24: ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ನಿನ್ನೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರದಿಂದ ಉಚಿತ ಕೊರೋನಾ ಲಸಿಕೆಗೆ ಯೋಜನೆ ➤ ಆಧಾರ್ ಕಾರ್ಡ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆ ದೇಶದ 130 ಕೋಟಿ ಜನರಿಗೆ ಲಸಿಕೆ ವಿತರಿಸಲು ವಿಶೇಷ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತದೆ. ಕೇಂದ್ರ ಸರ್ಕಾರವೇ ನೇರವಾಗಿ ಲಸಿಕೆ ಖರೀದಿಸಿ ಆದ್ಯತಾ ವಲಯಗಳಿಗೆ ಉಚಿತವಾಗಿ ಹಂಚಿಕೆ ಮಾಡಲಾಗುವುದು. ರಾಜ್ಯ, ಜಿಲ್ಲೆಗಳಲ್ಲಿರುವ ವ್ಯವಸ್ಥೆಗಳ ಮೂಲಕ ಲಸಿಕೆಯನ್ನು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.     ಕೊರೋನಾ ಲಸಿಕೆ ವಿತರಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ರೂಪಿಸುತ್ತಿದ್ದು, ಪ್ರತ್ಯೇಕ ಯೋಜನೆ ರೂಪಿಸಬಾರದೆಂದು ರಾಜ್ಯಸರ್ಕಾರಗಳಿಗೆ ಮಾಹಿತಿ ನೀಡಲಾಗಿದೆ.

ಕೇಂದ್ರದಿಂದ ಉಚಿತ ಕೊರೋನಾ ಲಸಿಕೆಗೆ ಯೋಜನೆ ➤ ಆಧಾರ್ ಕಾರ್ಡ್ ಕಡ್ಡಾಯ..! Read More »

ರಾಷ್ಟ್ರೀಯ ನ್ಯೂಸ್

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ ರಿಲಯನ್ಸ್ ಜಿಯೋ ವತಿಯಿಂದ ಮೇಡ್ ಇನ್ ಇಂಡಿಯಾ ಎಂಬ ವಿಶೇಷತೆಯನ್ನು ಬ್ರೌಸರ್ ಹೊಂದಿದ್ದು ವೆಬ್ ಸುರಕ್ಷತೆ, ಡೇಟಾ, ಗೌಪ್ಯತೆಗೆ ಒತ್ತು ನೀಡಲು ಹೊಸ ಜಿಯೋ ಪೇಜಸ್ ಎನ್ನುವ ಬ್ರೌಸರ್ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.   ಗುಣಮಟ್ಟ ವರ್ಧಿತ ಬ್ರೌಸಿಂಗ್ ಅನುಭವವನ್ನು ಜಿಯೋ ಬ್ರೌಸಿಂಗ್ ಬಳಕೆದಾರರಿಗೆ ಒದಗಿಸುತ್ತದೆ. ಭಾರತ ನಿರ್ಮಿತ ಬ್ರೌಸರ್ ಇರಲಿಲ್ಲ ಎನ್ನುವ ಕೊರತೆಯನ್ನು ಇದು ನೀಗಿಸಿದೆ. ವೇಗವಾದ ಸರ್ಚ್ ಇಂಜಿನ್,

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..! Read More »

ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು

(ನ್ಯೂಸ್ ಕಡಬ) ಮದುರೈ, ಅ. 24. ಇಲ್ಲಿನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಮಧುರೈ ಯಲ್ಲಿ ನಡೆದಿದೆ.   ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭವಿಸಿತ್ತು, ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಢ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

(ನ್ಯೂಸ್ ಕಡಬ) newskadaba.com ಅಬುಧಾಬಿ, ಅ.24: ಕಳೆದ ದಿನ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ಮುಂಬೈ 12 ಓವರ್ ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಜಯಭೇರಿ ಬಾರಿಸಿತು.     ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 10 ವಿಕೆಟ್ ಗಳಿಂದ ರನ್ನರ್ ಅಪ್

ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಅ. 24: ಆನ್‍ಲೈನ್ ತರಗತಿ ವೇಳೆ ಸರಿಯಾಗಿ ಗಮನ ಹರಿಸಿಲ್ಲ, ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂದು ಕೋಪಗೊಂಡ ತಾಯಿ ತನ್ನ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪೆನ್ಸಿಲ್‍ನಿಂದ ತನ್ನ 12 ವರ್ಷದ ಮಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸ್ಯಾಂಟಾಕ್ರಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್‍ಲೈನ್ ತರಗತಿ ವೇಳೆ ಗಮನಹರಿಸಿಲ್ಲ ಹಾಗೂ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂಬ ಉದ್ದೇಶದಿಂದ ತಾಯಿ ಮಗಳ

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಪ್ರಸಿದ್ದ ಕ್ರಿಕೆಟಿಗ “ಕಪಿಲ್ ದೇವ್ “ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 23:  ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಭಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. 61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  

ಪ್ರಸಿದ್ದ ಕ್ರಿಕೆಟಿಗ “ಕಪಿಲ್ ದೇವ್ “ಗೆ ಹೃದಯಾಘಾತ Read More »

ರಾಷ್ಟ್ರೀಯ ನ್ಯೂಸ್
Scroll to Top