ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ

(ನ್ಯೂಸ್‌ ಕಡಬ) newskadaba.com ಸೆ.06 ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ. ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ […]

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

(ನ್ಯೂಸ್‌ ಕಡಬ) newskadaba.com ಸೆ.06 ಲಖನೌ : ಉತ್ತರ ಪ್ರದೇಶದ ಗೋರಖ್‌ಪುರದ ಶಾಹ್‌ಪುರದಲ್ಲಿ ಬುಧವಾರ ಸಂಜೆ ವಿಚ್ಛೇದನ (Divorce) ವಿವಾದದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿಯನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಶ್ವಕರ್ಮಾ ಚೌಹಾಣ್ ಎಂದು ಗುರುತಿಸಲಾಗಿದ್ದು, ಘಟನೆಯ ತಕ್ಷಣವೇ ಆತನನ್ನು ಸ್ಥಳದಲ್ಲಿಯೇ ಬಂಧಿಸಲಾಗಿದೆ. ಮೃತ ಮಮತಾ ಚೌಹಾಣ್ (35) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ 13 ವರ್ಷದ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ವಿಚ್ಛೇದನಕ್ಕೆ ಮುನ್ನ ಮಗುವಿನ ಆರೈಕೆಗಾಗಿ ಹಣ ಮತ್ತು

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಸೆ.06 ವಾಷಿಂಗ್ಟನ್: ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ. ಅವರಿಗೆ ಸುದೀರ್ಘ ಹಾಗೂ ಸಮೃದ್ಧ ಭವಿಷ್ಯ ಸಿಗುವಂತಾಗಲಿ ಎಂದು ಹೇಳಿದ್ದರು. ಇದರ ಜತೆಗೆ ಅವರು ಇತ್ತೀಚೆಗೆ ನಡೆದ ಶಾಂಫ್ಟ್ ಕೋ ಆಪರೇಷನ್ ಆರ್ಗನೈಸೇಷನ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ದೇಶದ ಅರ್ಥ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯಲ್ಲಿ, ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ. ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. “ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌರ ವಿದ್ಯುತ್ ಸ್ಥಾವರ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಮುಂಬೈ: ನಾಗ್ಪುರದ ಕಲ್ಮೇಶ್ವರ ತೆಹಸಿಲ್‌ನ ಬಜಾರ್ ಗ್ರಾಮದ ಬಳಿಯ ಚಂದೂರ್ ಗ್ರಾಮದ ಬಳಿ ಇರುವ ಸೌರ ಸ್ಥಾವರದಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ. ಸೆಪ್ಟೆಂಬರ್ 4 (ಗುರುವಾರ) ಬೆಳಗಿನ ಜಾವ 1:00 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ ಬಜಾರ್‌ಗಾಂವ್‌ನಲ್ಲಿರುವ ಸೌರ ಸ್ಫೋಟಕಗಳ ಆರ್‌ಡಿಎಕ್ಸ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಕಂಪನಿಯಲ್ಲಿ 900 ರಿಂದ 6,000

ಸೌರ ವಿದ್ಯುತ್ ಸ್ಥಾವರ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.4 ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ನಕ್ಸಲರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರುಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌ಪಿಸಿ)ಗೆ ಸೇರಿದ ನಕ್ಸಲರ ನಡುವೆ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.  ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೋರ್ವರು

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ, ಪೂರ್ವ ಮತ್ತು ಪಶ್ಚಿಮದ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ ಬುಧವಾರವೂ ತನ್ನ ಪ್ರತಾಪ ಮುಂದುವರೆದಿದೆ. ಒಟ್ಟು 10 ರಾಜ್ಯಗಳಲ್ಲಿ ಮಳೆ ಅಬ್ಬರ ತೋರಿಸಿದ್ದು ಒಂದೇ ದಿನ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹದಂಥ ಘಟನೆಗಳು ಸಂಭವಿಸಿದ್ದು, ರೈಲು, ವಿಮಾನ, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯವಾಗಿದ್ದು, ಸುರಕ್ಷತಾ ದೃಷ್ಟಿಯಿಂದ

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ

(ನ್ಯೂಸ್‌ ಕಡಬ) newskadaba.com, ಸೆ. 03: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ  ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ. ಓಕ್ಲಾ, ವಝಿರಾಬಾದ್, ಅಥಿನಿಕುಂಡ ಬ್ಯಾರೇಜ್‌ಗಳಿಂದ ಮೂರು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದ್ದು, ಯಮುನಾ

ದೆಹಲಿಯಲ್ಲಿ ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top