ರಾಷ್ಟ್ರೀಯ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಪುಲ್ವಾಮಾದ ಝಾದೂರ ಎಂಬ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯು ಮೂವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಮಾಹಿತಿ ತಿಳಿದ ಭದ್ರತಾ ಪಡೆಗಳು ಝಾದೂರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ  ಹುತಾತ್ಮನಾಗಿದ್ದು, ಇದಕ್ಕೂ ಮುನ್ನ ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು […]

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ ➤ ಓರ್ವ ಯೋಧ ಹುತಾತ್ಮ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಗೆ ತಾನೇ ಚಾಲಕನಾದ ವೈದ್ಯ

(ನ್ಯೂಸ್ ಕಡಬ) newskadaba.com ಪುಣೆ, ಆ. 28. ಅನಾರೋಗ್ಯದಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ವೈದ್ಯರೇ ಆಂಬುಲೆನ್ಸ್‌ ಚಲಾಯಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಆಂಬುಲೆನ್ಸ್‌ ಚಾಲಕನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಕೊರೊನಾ ಸೋಂಕಿತ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಲು ಯಾರೂ ಇರಲಿಲ್ಲ. ಈ ಸಂದರ್ಭ ತುರ್ತು ಚಿಕಿತ್ಸೆಯ ಅನಿವಾರ್ಯತೆಯನ್ನು ಮನಗಂಡ ವೈದ್ಯ ರಂಜಿತ್ ನಿಕಮ್ ಅವರು ಕೂಡಲೇ ತಾವೇ ಸ್ವತಃ ಆಂಬುಲೆನ್ಸ್‌ ಚಲಾಯಿಸಲು ಮುಂದಾಗಿದ್ದಾರೆ.

ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಗೆ ತಾನೇ ಚಾಲಕನಾದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪೊನ್ನಂಪೇಟೆ. ಆ,28:  ಕೇರಳದ ಕೊಲ್ಲಂಗೆ ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಡಿಭಾಗ ಕುಟ್ಟ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕೊಲ್ಲಂ ನಿವಾಸಿ ನಿಜಾಮ್, ಮಧ್ಯಪ್ರದೇಶದ ಭೂಪಾಲ್‍ನ ಶಾನು, ಫೈಜಾನ್, ಮೊಹಮದ್ ರಫೀ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಪಿಐ ಪರಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಕುಟ್ಟ ಪಿಎಸ್‌ಐ ಎಚ್.ಜೆ. ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.  

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು.   ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ

ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ”

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 27.  ಇಂದು ದೇಶೀಯ  ಮಾರುಕಟ್ಟೆಯಲ್ಲಿ ಚಿನ್ನದ  ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂ. ಬಂಗಾರದ ಬೆಲೆಯು 51,665 ಕ್ಕೆ ತಲುಪಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ಶೇಕಡಾ 1 ರಷ್ಟು ಇಳಿಕೆ ಕಂಡಿದ್ದು, ಕೆ.ಜಿಗೆ 66,821 ರೂಪಾಯಿಯಾಗಿದೆ. ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 54,870 ರೂಪಾಯಿಗಳಿಂದ  54,380 ರೂಪಾಯಿಗೆ ಇಳಿದಿದೆ. ಬೆಳ್ಳಿ

ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ” Read More »

ರಾಷ್ಟ್ರೀಯ ನ್ಯೂಸ್

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಮಹಾರಾಷ್ಟ್ರದ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್  ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ರಾಜೀನಾಮೆ ಪತ್ರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ. ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಅಸಾಧ್ಯವಾಗುವ ಹಿನ್ನೆಲೆ ನನಗೆ ಸಂಸದನಾಗಿರಲು ಹಕ್ಕಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಕೊಡಗು. ಆ,27:  ಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.     ಗೋಣಿಕೊಪ್ಪ ಅರ್ವತೋಕ್ಲು ಮೂಲದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ ಸೂರಜ್ ಅಯ್ಯಪ್ಪ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.ಡೆಹ್ರಡೂನ್‍ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್‍ಐಎಂಸಿ)ಯಲ್ಲಿ ಶಿಕ್ಷಣ ಪಡೆದು ನೇವಲ್ ಅಕಾಡೆಮಿಯಿಂದ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26.  ಕಾಸರಗೋಡು, ಆ. 26.  ಜಿಲ್ಲೆಯಿಂದ ಕರ್ನಾಟಕಕ್ಕೆ ದೈನಂದಿನ ಕರ್ತವ್ಯಕ್ಕೆ ಸಂಚಾರ ಮಾಡಲು ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶವನ್ನು ಹೊರಡಿಸಿದ್ದಾರೆ. ಅವರು ಇಂದು ನಡೆದ ಜಿಲ್ಲಾ ಮಟ್ಟದ ಕೊರೋನಾ ಸಲಹಾ ಸಮಿತಿಯ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆದ ಸಭೆಯಲ್ಲಿ ಇ ಮಾಹಿತಿಯನ್ನು ನೀಡಿದರು. ದೈನಂದಿನ ಚಟುವಟಿಕೆಗಳ ಸಂಚಾರಕ್ಕೆ ಕಡ್ಡಾಯ ಪಾಸ್ ವ್ಯವಸ್ಥೆಯನ್ನು ಹಿಂತೆಗೆದುಕೊಂಡಿದ್ದು, ಆಂಟಿಜನ್ ತಪಾಸಣೆ ನಡೆಸಿದ ನೆಗಟಿವ್ ರಿಪೋರ್ಟ್ ಜೊತೆ

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) ನವದೆಹಲಿ, ಆ. 26. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಕೋಮಾವಸ್ಥೆಯಲ್ಲಿದ್ದು,  ವೆಂಟಿಲೇಟರ್‌ ಸಹಾಯ ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಪ್ರಸ್ತುತ ಅವರಿಗೆ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದು, ಮಂಗಳವಾರದಿಂದ ಅವರ ಮೂತ್ರಪಿಂಡದ ಶಕ್ತಿಯು ತುಂಬಾ ಕ್ಷೀಣಿಸಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಆಗಸ್ಟ್ 10ರಂದು ತೀವ್ರತರದ ಅನಾರೋಗ್ಯಕ್ಕೊಳಗಾದ ಇವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮೆದುಳಿನಲ್ಲಿ ರಕ್ತ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,25:  ಕರ್ನಾಟಕ ಕೇಡರ್​​ನ ನಿವೃತ್ತ IPS ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿಯವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್, ತಮಿಳುನಾಡು ಬಿಜೆಪಿಯ ಅಧ್ಯಕ್ಷ ಮುರುಗನ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡು ರಾಜ್ಯದಲ್ಲಿ ಬಿಜೆಪಿಯನ್ನ ಸಂಘಟನೆ ಮಾಡುವ ಉದ್ದೇಶದಿಂದ ಅಣ್ಣಾಮಲೈ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಮಿಳುನಾಡಿನ ಬಿಜೆಪಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದ್ದಾರೆ ಮುರಳಿಧರ್ ರಾವ್ ತಿಳಿಸಿದ್ದಾರೆ.  ಅಣ್ಣಾಮಲೈ ಬಿಜೆಪಿ

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ Read More »

ರಾಷ್ಟ್ರೀಯ ನ್ಯೂಸ್
Scroll to Top