ರಾಷ್ಟ್ರೀಯ ನ್ಯೂಸ್

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು.     ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ, […]

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.22: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಸಂಗ್ರಹಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಲಯದಿಂದ ಮಂಗಳವಾರ ಅಯೋಧ್ಯೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿನ ಸನ್ನಿಹಿತವಾಗುತ್ತಿದೆ. ರಾಮರಾಜ್ಯ ಆಗಬೇಕು, ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಪ್ರತಿ ಹಿಂದೂಗಳ ಕನಸಾಗಿತ್ತು. ಆ. 5ರಂದು ಪ್ರಧಾನಿ

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಜು. 22, ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡಿ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ನಿಧನ ಹೊಂದಿದ್ದಾರೆ. ಘಾಜಿಯಾಬಾದ್ ನಲ್ಲಿ ಪತ್ರಕರ್ತರಾಗಿದ್ದ ವಿಕ್ರಮ್ ಜೋಶಿ ಅವರ ಮೇಲೆ ಅಪರಿಚಿತರು ಜುಲೈ 20 ರಂದು ಗುಂಡಿನ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 9 ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ದುಷ್ಕರ್ಮಿಗಳ ಗುಂಡಿನ ದಾಳಿಗೆ ಗಾಯಗೊಂಡಿದ್ದ ಪತ್ರಕರ್ತ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ರಾಜ್ಯವನ್ನುದ್ದೇಸಿ ಭಾಷಣ ಮಾಡಿದರು. ಇಂದು ಸಂಜೆ 5 ಗಂಟೆಗೆ ಸರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಆನ್​​ಲೈನ್​​ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪರ ಭಾಷಣವೂ ಫೇಸ್​​ಬುಕ್​​, ಟ್ವಿಟರ್​​, ಇನ್ಸ್ಟಾಗ್ರಾಮ್, ಯೂಟ್ಯೂಬ್​​​ ಲೈವ್​​ನಲ್ಲಿ ಪ್ರಸಾರವಾಗಿದೆ. ಪ್ರಸ್ತುತ ದೇಶಾದ್ಯಂತ ಕೋವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೋನಾ ತಡೆಯಲು

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »

ರಾಷ್ಟ್ರೀಯ ನ್ಯೂಸ್

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top