ರಾಷ್ಟ್ರೀಯ ನ್ಯೂಸ್

1 ವರ್ಷದ ಮಗುವಿನ ತಲೆಗೆ ಸಿಕ್ಕಿಕೊಂಡ ಪ್ರೆಶರ್‌ ಕುಕ್ಕರ್‌ ➤ ಮುಂದೇನಾಯಿತು ಗೊತ್ತೆ…???

(ನ್ಯೂಸ್ ಕಡಬ) newskadaba.com ರಾಜ್‌ಕೋಟ್, ಜೂ.13., ‌ಆಟವಾಡುತ್ತಿದ್ದ ಸಂದರ್ಭ ಪ್ರೆಶರ್‌ ಕುಕ್ಕರ್‌ ಒಳಗೆ ಒಂದು ವರ್ಷದ ಹೆಣ್ಣು ಮಗುವಿನ ತಲೆ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್‌ ರಾಜ್‌ಕೋಟ್‌ನಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಮಗುವಿನ ತಲೆಗೆ ಸಿಕ್ಕಿಹಾಕಿಕೊಂಡಿದ್ದ ಪ್ರೆಶರ್‌ ಕುಕ್ಕರ್‌ ಅನ್ನು ತೆಗೆಯಲು ಸಾಧ್ಯವಾಗದೆ ಇದ್ದುದರಿಂದ ಆತಂಕಗೊಂಡ ಪೋಷಕರು ಭಾವನಗರ್‌ನ ಸರ್‌ ಟಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಆಗಮಿಸುವ ಸಂದರ್ಭ ನೋಡಿದವರೆಲ್ಲ ಮಗುವಿನ ತಲೆಗೆ ಹೆಲ್ಮೆಟ್‌ ಬದಲು ಕುಕ್ಕರ್‌ ಹಾಕಿಸಿಕೊಂಡು ಬಂದಿದ್ದಾರೆ ಎಂದೇ ಭಾವಿಸಿದ್ದರು. ಅಸಲಿ […]

1 ವರ್ಷದ ಮಗುವಿನ ತಲೆಗೆ ಸಿಕ್ಕಿಕೊಂಡ ಪ್ರೆಶರ್‌ ಕುಕ್ಕರ್‌ ➤ ಮುಂದೇನಾಯಿತು ಗೊತ್ತೆ…??? Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಲಾಕ್ ಡೌನ್..!? ➤ ಮುಖ್ಯಮಂತ್ರಿಗಳ ಜೊತೆಗೆ ಮೋದಿ ಸಭೆಗೆ ಸಿದ್ದತೆ..!!

(ನ್ಯೂಸ್ ಕಡಬ)newskadaba.com ನವದೆಹಲಿ. ಜೂ. 13, ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಕಳೆದುಕೊಂಡಿದ್ದು, ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಭಾರತ ವಿಶ್ವದಲ್ಲೇ ನಾಲ್ಕನೇ ಸ್ಥಾನದಲ್ಲಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಲಾಕ್ ಡೌನ್ ಸಡಿಲಿಕೆಯೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದ್ದು ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲು ಮುಂದಾಗಿದ್ದಾರೆ. ಮತ್ತೆ ದೇಶ ಅಥವಾ ಡೇಂಜರ್ ಝೋನ್ ನಲ್ಲಿರುವ ರಾಜ್ಯಗಳು ಲಾಕ್ ಡೌನ್ ಆಗುತ್ತವೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ

ಮತ್ತೆ ಲಾಕ್ ಡೌನ್..!? ➤ ಮುಖ್ಯಮಂತ್ರಿಗಳ ಜೊತೆಗೆ ಮೋದಿ ಸಭೆಗೆ ಸಿದ್ದತೆ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಎಎಸ್ ಪಾಸಾದ ಕೇರಳದ ಪ್ರಪ್ರಥಮ ಆದಿವಾಸಿ ಯುವತಿಯಿಂದ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba.com ಕೋಯಿಕ್ಕೋಡ್. ಜೂ.12, ಐಎಎಸ್ ಪರೀಕ್ಷೆ ಪಾಸಾಗಿರುವ ಕೇರಳದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎಂಬ‌ ಹೆಗ್ಗಳಿಕೆಗೆ ಪಾತ್ರರಾದ ಶ್ರೀಧನ್ಯಾ ಸುರೇಶ್ ಗುರುವಾರ ಕೋಝಿಕ್ಕೋಡ್‌ನಲ್ಲಿ ಸಹಾಯಕ ಜಿಲ್ಲಾಧಿಕಾರಿಯಾಗಿ ಆಗಿ ಅಧಿಕಾರ ವಹಿಸಿಕೊಂಡರು. 2019ರ ಬ್ಯಾಚ್‌ನ ಭಾರತೀಯ ಆಡಳಿತಾತ್ಮಕ ಸೇವೆ(ಐಎಎಸ್)ಅಧಿಕಾರಿಯಾಗಿರುವ ಶ್ರೀಧನ್ಯಾ ಐಎಎಸ್ ಪರೀಕ್ಷೆ ಪಾಸಾಗಿರುವ ಕೇರಳದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುದ್ದಿಯಾಗಿದ್ದರು. ತನ್ನ ನಾಗರಿಕ ಸೇವೆಯ ಪಯಣವನ್ನು ನೆನಪಿಸಿಕೊಂಡ ಶ್ರೀಧನ್ಯಾ, ‘‘2016ರಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ

ಐಎಎಸ್ ಪಾಸಾದ ಕೇರಳದ ಪ್ರಪ್ರಥಮ ಆದಿವಾಸಿ ಯುವತಿಯಿಂದ ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಲಾಕ್ ಡೌನ್ ವೇಳೆಯಲ್ಲಿ ನೌಕರರಿಗೆ ವೇತನ ನೀಡದ ವಿಚಾರ ➤ ಮಾಲಕರ ಪರ ನಿಂತ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜೂ.13, ಕೊರೋನ ವೈರಸ್ ಲಾಕ್‌ಡೌನ್ ಸಮಯದಲ್ಲಿ ಕಾರ್ಮಿಕರಿಗೆ ವೇತನ ಪಾವತಿಸದ ಮಾಲಕರ ವಿರುದ್ಧ ಜುಲೈ ಅಂತ್ಯದ ತನಕ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಈ ತೀರ್ಪು ಖಾಸಗಿ ಉದ್ಯೋಗದಾತರಿಗೆ ನಿಟ್ಟುಸಿರುಬಿಡುವಂತಾಗಿದೆ. ನೌಕರರು ಹಾಗೂ ಉದ್ಯೋಗದಾತರ ನಡುವೆ ಮಾತುಕತೆ ನಡೆಸಲು ರಾಜ್ಯ ಸರಕಾರಗಳು ಅನುಕೂಲ ಮಾಡಿಕೊಡಬೇಕು. ತಮ್ಮ ವರದಿಯನ್ನು ಸಂಬಂಧಪಟ್ಟ ಕಾರ್ಮಿಕ ಆಯುಕ್ತರಿಗೆ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಮಾರ್ಚ್‌ನಲ್ಲಿ ಎಲ್ಲ ಉದ್ಯೋಗದಾತರಿಗೆ

ಲಾಕ್ ಡೌನ್ ವೇಳೆಯಲ್ಲಿ ನೌಕರರಿಗೆ ವೇತನ ನೀಡದ ವಿಚಾರ ➤ ಮಾಲಕರ ಪರ ನಿಂತ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕೊರೊನಕ್ಕೆ ರಾಜ್ಯ ತತ್ತರ ➤ ಒಂದೇ ದಿನ 271 ಪಾಸಿಟಿವ್ ಕೇಸ್, 7 ಸೋಂಕಿತರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 12, ರಾಜ್ಯದಲ್ಲಿ ಕಳೆದ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ 271 ಜನರಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6,516ಕ್ಕೆ ಏರಿಕೆ ಕಂಡಂತಾಗಿದೆ. ಇಂದು ಬಳ್ಳಾರಿಯಲ್ಲಿ 97, ಬೆಂಗಳೂರು ನಗರದಲ್ಲಿ 36 ಜನರಿಗೆ ಸೋಂಕು ತಗುಲಿದ್ದರೆ, ಉಡುಪಿ 22, ಕಲಬುರಗಿಯಲ್ಲಿ 20, ಧಾರವಾಡದಲ್ಲಿ 19, ದಕ್ಷಿಣ ಕನ್ನಡದಲ್ಲಿ 17 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ರಾಜ್ಯದಲ್ಲಿ ಇಂದು ಕೊರೋನಾ

ಕೊರೊನಕ್ಕೆ ರಾಜ್ಯ ತತ್ತರ ➤ ಒಂದೇ ದಿನ 271 ಪಾಸಿಟಿವ್ ಕೇಸ್, 7 ಸೋಂಕಿತರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.12: ಕೊರೋನಾ ಆತಂಕದ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡುತ್ತಿದ್ದು , ಈಗಾಗಲೇ 50 ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೈವಳಿಕೆ , ಪುತ್ತಿಗೆ , ಕುಂಬಳೆ , ಬದಿಯಡ್ಕ , ಮುಳ್ಳೇರಿಯಾ , ಆದೂರು , ಪುಲ್ಲೂರು ಪೆರಿಯ ವ್ಯಾಪ್ತಿಯಲ್ಲಿ ಡೆಂಗ್ಯೂ ಹೆಚ್ಚುತ್ತಿದ್ದು , ಒಂದೆಡೆ ಕೊರೋನಾ ಭೇಟಿಯ ನಡುವೆ ಸಾಂಕ್ರಾಮಿಕ ರೋಗಗ ಗಳು ಜನತೆ ಹಾಗೂ ಆರೋಗ್ಯ ಇಲಾಖೆಯನ್ನು ಆತಂಕಕ್ಕೆ ಸಿಲುಕಿಸಿದೆ.ಕಾಸರಗೋಡು ಜನರಲ್ ಆಸ್ಪತ್ರೆ

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೀಡಿಯೋ ವೈರಲ್ ➤ ಸರಕಾರಿ ಕಛೇರಿ ಮುಂದೆ ಮೃತಪಟ್ಟ ವ್ಯಕ್ತಿಯ ಶವ ಕಸದ ವಾಹನಕ್ಕೆ

(ನ್ಯೂಸ್ ಕಡಬ)newskadaba.com ಲಕ್ನೋ. ಜೂ. 12, ಪೌರಕಾರ್ಮಿಕರು ಮೃತದೇಹವನ್ನು ತ್ಯಾಜ್ಯ ಸಾಗಾಟ ವಾಹನಕ್ಕೆ ತುಂಬುತ್ತಿರುವ ಬಗೆಗಿನ 20 ಸೆಕೆಂಡ್‌ಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ಘಟನೆ ಸಂಬಂಧ ಮೂವರು ಪೊಲೀಸರು ಸೇರಿದಂತೆ ಏಳು ಮಂದಿಯನ್ನು ಅಮಾನತುಗೊಳಿಸಿದೆ. ಅಮಾನತುಗೊಂಡ ಇತರ ನಾಲ್ವರು ಮಹಾನಗರ ಪಾಲಿಕೆ ಸಿಬ್ಬಂದಿಗಳಾಗಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಮುಹಮ್ಮದ್ ಅನ್ವರ್ (45) ಎಂಬ ವ್ಯಕ್ತಿಯ ಮೃತದೇಹವನ್ನು ಪೌರಕಾರ್ಮಿಕರು ಕಸದ ವಾಹನಕ್ಕೆ ಎಸೆಯುತ್ತಿರುವ ವೀಡಿಯೊ ಅರ್ಧ ಗಂಟೆಯಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ

ವೀಡಿಯೋ ವೈರಲ್ ➤ ಸರಕಾರಿ ಕಛೇರಿ ಮುಂದೆ ಮೃತಪಟ್ಟ ವ್ಯಕ್ತಿಯ ಶವ ಕಸದ ವಾಹನಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ,ಜೂ.12: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ.ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ.   ರಷ್ಯಾದಲ್ಲಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಪ್ರಕರಣ : ಅಮೂಲ್ಯಗೆ ಜಾಮೀನು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 12, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿ ಕಾರಾಗೃಹ ಸೇರಿದ್ದ ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಮೂಲ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರಾದ ಅಮೂಲ್ಯ ಇನ್ನೂ 19 ವರ್ಷ ವಯಸ್ಸಿನ ಯುವತಿ, ನಗರದ ಖಾಸಗಿ ಕಾಲೇಜು ಒಂದರಲ್ಲಿ ಓದುತ್ತಿದ್ದಾರೆ.

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಪ್ರಕರಣ : ಅಮೂಲ್ಯಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್
Scroll to Top