ರಾಷ್ಟ್ರೀಯ ನ್ಯೂಸ್

ಜಿಲ್ಲೆಯಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಹುಟ್ಟೂರಿಗೆ ➤ ಜಾರ್ಖಂಡ್ ಗೆ ಹೊರಟಿತು ಮಂಗಳೂರಿನಿಂದ ವಿಶೇಷ ರೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ಕೊರೊನಾದಿಂದಾಗಿ ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಿಲುಕಿರುವ ಹೊರ ಊರಿನ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುವ ಕಾರ್ಯ ಆರಂಭಗೊಂಡಿದ್ದು, ಮಂಗಳೂರಿನಿಂದ ಜಾರ್ಖಂಡ್ ಗೆ 1000 ಪ್ರಯಾಣಿಕರನ್ನು ಹೊತ್ತ ಮೊದಲ ರೈಲು ಶನಿವಾರದಂದು ಹೊರಟಿದೆ. ಲಾಕ್‌ಡೌನ್ ನಿಂದಾಗಿ ಬೇರೆ ಬೇರೆ ರಾಜ್ಯದ ವಲಸೆ ಕಾರ್ಮಿಕರು ಮಂಗಳೂರಿನಲ್ಲೇ ಬಾಕಿಯಾಗಿದ್ದು, ಕಾರ್ಮಿಕರಿಗೆ ಮರಳಿ ಊರಿಗೆ ತೆರಳಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ರೈಲಿನ ವ್ಯವಸ್ಥೆ ಮಾಡುತ್ತಿದೆ. ರೈಲಿನ ಮೂಲಕ ಪ್ರಯಾಣಿಸಲು ಸೇವಾ ಸಿಂಧು ಆ್ಯಪ್ ಮೂಲಕ […]

ಜಿಲ್ಲೆಯಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಹುಟ್ಟೂರಿಗೆ ➤ ಜಾರ್ಖಂಡ್ ಗೆ ಹೊರಟಿತು ಮಂಗಳೂರಿನಿಂದ ವಿಶೇಷ ರೈಲು Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಅಮಿತ್ ಷಾ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಿದ ಕಿರಾತಕರು ➤ ಹಲವರ ಬಂಧನ, ಮುಂದುವರಿದ ತನಿಖೆ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಮೇ.09. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಸುಳ್ಳು ಟ್ವೀಟ್ ಹರಡಿದ ನಾಲ್ವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಮಾಡಿದ ಟ್ವೀಟ್ ಎಂದು ಫೋಟೊಶಾಪ್ ನಲ್ಲಿ ಎಡಿಟ್ ಮಾಡಿದ್ದ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದ ಬಗ್ಗೆ ತನಿಖೆ ನಡೆಸಿದ ಅಹ್ಮದಾಬಾದ್ ಸಿಟಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧಿಸಿದ್ದು, ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗೃಹ ಸಚಿವ ಅಮಿತ್ ಷಾ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಿದ ಕಿರಾತಕರು ➤ ಹಲವರ ಬಂಧನ, ಮುಂದುವರಿದ ತನಿಖೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಹೊಸದಿಲ್ಲಿ ಮೇ 8: ಸಿಬಿಎಸ್‌ಇಯ 10 ಮತ್ತು 12ನೇ ತರಗತಿಗಳ ಬಾಕಿ ಉಳಿಸಿರುವ 29 ವಿಷಯಗಳ ಪರೀಕ್ಷೆಯನ್ನು ಜುಲೈ ತಿಂಗಳಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ. ಹತ್ತು ಮತ್ತು 12ನೇ ತರಗತಿಗಳ 29 ವಿಷಯಗಳ ಪರೀಕ್ಷೆಯನ್ನು ಕೊರೋನ 9 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಜುಲೈ 1ರಿಂದ ಜುಲೈ 15ರ ವರೆಗೂ ಪರೀಕ್ಷೆ ನಡೆಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಕಟಿಸಿದ್ದಾರೆ. ಜೆಇಇ (ಮೇನ್ಸ್) ಪರೀಕ್ಷೆ ಜುಲೈ 18ರಿಂದ 23ರ ವರೆಗೂ ನಡೆಸುವುದಾಗಿ ಮಾನವ ಸಂಪನ್ಮೂಲ

ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಲಾಕ್‌ಡೌನ್ ಸಡಿಲಿಕೆಗೆ ಕಾಯುತ್ತಿದ್ದವರಿಗೆ ಬಿಗ್ ಶಾಕ್ ➤ ಮೇ.17 ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.01. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್ ಅನ್ನು ಮೇ 17ರ ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕೇಂದ್ರ ಸರ್ಕಾರವು ಎರಡು ಬಾರಿ ಲಾಕ್ ಡೌನ್ ಘೋಷಿಸಿದ್ದು, ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ. ಕೇಂದ್ರ ಗೃಹ ಸಚಿವಾಲಯವು ಇದೀಗ ಕೊರೋನಾ ಲಾಕ್ ಡೌನ್ ಅನ್ನು ವಿಸ್ತರಿಸಿದ್ದು, ಮೂರು ಝೋನ್ ಗಳಾಗಿ ವಿಂಗಡಿಸಿದೆ. ಆರೆಂಜ್ ಮತ್ತು

ಲಾಕ್‌ಡೌನ್ ಸಡಿಲಿಕೆಗೆ ಕಾಯುತ್ತಿದ್ದವರಿಗೆ ಬಿಗ್ ಶಾಕ್ ➤ ಮೇ.17 ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಸರಕಾರ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.30: ದೇಶದಲ್ಲಿ ಕೊರೋನ ಮಹಾಮಾರಿ ವೈರಸ್‌ಗೆ 1,074 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, 33,000 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ. ಈ ನಡುವೆ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 30 ಸಾವಿರ ಸೋಂಕಿತರ ಪೈಕಿ ವಿವಿಧ ರಾಜ್ಯಗಳಲ್ಲಿ 8,325 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

ಮುಂಬೈ, ಎ.30: ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್‌ (67)ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಉಸಿರಾಟದ ತೊಂದರೆ ಸಹ ಕಾಣಿಸಿಕೊಂಡ ಕಾರಣ ಬುಧವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಒಂದು ವರ್ಷಗಳ ಕಾಲ ಅಮೆರಿಕಾದಲ್ಲಿ ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆದಿದ್ದು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ವಾಪಾಸಾಗಿದ್ದರು. ಫೆಬ್ರವರಿ ತಿಂಗಳಲ್ಲಿ ಅನಾರೋಗ್ಯದಿಂದಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.    

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಎ.30. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರದಂದು ನಿಧನರಾದರು. ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ಅಧಿಕೃತ ಮಾಹಿತಿಯನ್ನು ಹೊರ ಹಾಕಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರನ್ನು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿ ತಿಂಗಳಿನಲ್ಲಿ ರಿಷಿ ಕಪೂರ್ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ, ಎ.29: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ದೊಡ್ಡ ಕರುಳು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್‌ರನ್ನು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಇದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಾಲಿವುಡ್‌ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಒಂದೇ ದಿನ ಕೊರೋನ ಸೋಂಕಿಗೆ 48 ಮಂದಿ ಸಾವು: 1,396 ಹೊಸ ಪ್ರಕರಣ ಪತ್ತೆ

ಹೊಸದಿಲ್ಲಿ, ಎ.27: ಭಾರತದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,396 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಕೊರೋನಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 27,892 ಕ್ಕೆ ಏರಿಕೆಯಾಗಿದ್ದು, ಈವರೆಗೆ 872 ಮಂದಿ ಸಾವನ್ನಪ್ಪಿದ್ದಾರೆ. 6,185 ಜನರು ಗುಣಮುಖರಾಗಿದ್ದು, 20,835 ಜನರು ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 8,068 ಜನರಿಗೆ ಸೋಂಕು ತಗುಲಿದ್ದು, 342 ಜನರು ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ

ದೇಶದಲ್ಲಿ ಒಂದೇ ದಿನ ಕೊರೋನ ಸೋಂಕಿಗೆ 48 ಮಂದಿ ಸಾವು: 1,396 ಹೊಸ ಪ್ರಕರಣ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಚ್ಚು ಪರೀಕ್ಷೆ ನಡೆಸದೆ ಕೊರೋನ ಗೆಲ್ಲಲು ಅಸಾಧ್ಯ: ಮನಮೋಹನ್ ಸಿಂಗ್

ಹೊಸದಿಲ್ಲಿ, ಎ.26: ಭಾರತದಲ್ಲಿ ಹೆಚ್ಚು ಪರೀಕ್ಷೆಗಳು ನಡೆಯದಿದ್ದರೆ ಕೊರೋನ ವಿರುದ್ಧ ಜಯ ಸಾಧಿಸಲು ಅಸಾಧ್ಯ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿದ ಅವರು, ಕೊರೋನ ವೈರಸ್‌ಗೆ ಪರೀಕ್ಷೆ ಹಾಗೂ ಪತ್ತೆ ಹಚ್ಚುವಿಕೆ ಮುಖ್ಯ ಅಸ್ತ್ರಗಳಾಗಿವೆ. ಆಕ್ರಮಣಕಾರಿಯಾಗಿ ಪರೀಕ್ಷೆಗಳು ನಡೆಯದಿದ್ದಲ್ಲಿ ಕೊರೋನ ವಿರುದ್ಧ ಜಯ ಸಾಧಿಸಲು ಆಗುವುದಿಲ್ಲ ಎಂದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರ ಸಮಸ್ಯೆಯ ವಿಚಾರದ ಬಗ್ಗೆ ಮಾತನಾಡಿದ್ದು, ಪಕ್ಷವು ವಲಸೆ

ಹೆಚ್ಚು ಪರೀಕ್ಷೆ ನಡೆಸದೆ ಕೊರೋನ ಗೆಲ್ಲಲು ಅಸಾಧ್ಯ: ಮನಮೋಹನ್ ಸಿಂಗ್ Read More »

ರಾಷ್ಟ್ರೀಯ ನ್ಯೂಸ್
Scroll to Top