ರಾಷ್ಟ್ರೀಯ ನ್ಯೂಸ್

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.14. ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ಮಹಾಮಾರಿಯ ವಿರುದ್ಧ ಸಮರ ಸಾರಿರುವ ಭಾರತ ದೇಶದಲ್ಲಿನ ಮೊದಲನೇ ಲಾಕ್ಡೌನ್ ಆದೇಶವು ಇಂದಿಗೆ ಮುಕ್ತಾಯವಾಗಿದ್ದು, ಎರಡಬೇ ಹಂತದ ಲಾಕ್ಡೌನ್ ಮೇ 03 ರ ವರೆಗೆ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಜಗತ್ತಿನಲ್ಲೇ ಭಾರತ ದೇಶವು ಕೊರೋನಾ ವೈರಸನ್ನು ಮೆಟ್ಟಿ ನಿಂತಿದ್ದು, ಮೂರನೇ ಹಂತದಲ್ಲೂ ಪರಿಸ್ಥಿತಿ ಹತೋಟಿಯಲ್ಲಿದೆ. ಮೇ 03 ರ ವರೆಗೆ ಲಾಕ್ಡೌನ್ ಅನಿವಾರ್ಯವಾಗಿದ್ದು, ಲಾಕ್ಡೌನ್ ಉಲ್ಲಂಘಿಸುವ ಪ್ರದೇಶದಲ್ಲಿ ಕಠಿಣ ಕ್ರಮಗಳನ್ನು […]

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಏಪ್ರಿಲ್ 15 ರಿಂದ ಎರಡನೇ ಹಂತದಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಲಾಕ್ಡೌನ್ ಮುಂದುವರೆಸುವ ಸುಳಿವು ನೀಡಲಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಕೃಷಿ ಚಟುವಟಿಕೆ, ಮೀನುಗಾರಿಕೆಗೆ ನಿರ್ಬಂಧ ಸಡಿಲಗೊಳಿಸಿದ್ದು, ಇದೇ ವೇಳೆ ಕೆಲವು ಕೈಗಾರಿಕೆ, ಜವಳಿ ವಲಯಗಳಿಗೂ ಸ್ವಲ್ಪ ವಿನಾಯಿತಿ

ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ

ಹೊಸದಿಲ್ಲಿ, ಎ.13: ಭಾರತದಲ್ಲಿ ಕೊರೋನ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿರುವುದು ಕೇಂದ್ರದ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ 9ರ ವರೆಗೂ ಕೊರೋನ ವೈರಸ್‌ ಸೋಂಕು ದೃಢಪಟ್ಟ 705 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಾದ್ಯಂತ ಒಟ್ಟು ಕೊರೊನಾ ಪೀಡಿತ ಪ್ರಕರಣಗಳು 9,152ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 7,987 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 856 ಜನರು

ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ

ಇಂದೋರ್, ಎ.12: ಭಾರತದಲ್ಲಿ ಕೊರೋನ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೋನ ವೈರಸ್ ಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರು ಕೊವಿಡ್ 19 ಗೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ 65 ವರ್ಷದ ವೈದ್ಯ ಓಂ ಪ್ರಕಾಶ್ ಚೌಹಾಣ್ ಅವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಆಯುಷ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಚೌಹಾಣ್ ಅವರಿಗೆ ಇತ್ತೀಚೆಗೆ ಕೊವಿಡ್ 19 ಸೋಂಕು ದೃಢಪಟ್ಟಿತ್ತು. ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಚೌಹಾಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ ತಾಜ್ ಮಹಲ್ ಹೊಟೇಲ್ ನ ಆರು ಮಂದಿ ಸಿಬ್ಬಂದಿಗೆ ಕೊರೋನ ಪಾಸಿಟಿವ್

ಮಹಾರಾಷ್ಟ್ರ, ಎ.12: ಮುಂಬೈ ತಾಜ್ ಮಹಲ್ ಹೊಟೇಲ್ ನ ಆರು ಮಂದಿ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ ಇಂಡಿಯಾ ಟುಡೇ ವರದಿ ಮಾಡಿದೆ. ಸದ್ಯ ಆರು ಮಂದಿ ತಾಜ್ ಮಹಲ್ ಪ್ಯಾಲೇಸ್ ಹೊಟೇಲ್ ಸಿಬ್ಬಂದಿಯ ಆರೋಗ್ಯ ಸ್ಥಿರವಾಗಿದ್ದು ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಗೌತಮ್ ಬನ್ಸಾಲಿ ತಿಳಿಸಿದ್ದಾರೆ. ಆದರೆ ತಾಜ್ ಹೊಟೇಲ್ ನ ಎಷ್ಟು ಮಂದಿ ನೌಕರರಿಗೆ ಸೋಂಕು ತಗುಲಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. 6 ಮಂದಿಯಲ್ಲಿ ಪಾಸಿಟಿವ್ ವರದಿ ಬಂದ ತಕ್ಷಣವೇ

ಮುಂಬೈ ತಾಜ್ ಮಹಲ್ ಹೊಟೇಲ್ ನ ಆರು ಮಂದಿ ಸಿಬ್ಬಂದಿಗೆ ಕೊರೋನ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ

ಹೊಸದಿಲ್ಲಿ, ಎ.12: ಮಹಾಮಾರಿ ಕೊರೋನ ವೈರಸ್​ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 8,356ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 909 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು ಒಟ್ಟು 34 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಒಟ್ಟು ಸಾವಿನಸಂಖ್ಯೆ 273ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಾ.24ರ ಮಧ್ಯರಾತ್ರಿಯಿಂದ ಭಾರತ ಲಾಕ್​ಡೌನ್​ ಆಗಿತ್ತು. ಎ.14ರವರೆಗೆ ಅದರ ಅವಧಿ ಇತ್ತು. ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ

ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ವೈರಸ್‌ಗೆ ಕೇರಳದಲ್ಲಿ ಮೂರನೇ ಬಲಿ: 71 ವರ್ಷದ ವೃದ್ಧ ಸಾವು

ಕಣ್ಣೂರು, ಎ.11: ಕೊರೋನ ವೈರಸ್‌ಗೆ ಕೇರಳದಲ್ಲಿ ಮೂರನೇ ಬಲಿಯಾಗಿದೆ. ಕೇರಳದ ಕಣ್ಣೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಂಡಿಚೇರಿಯ ಮಾಹೆ ನಿವಾಸಿ 71 ವರ್ಷದ ವ್ಯಕ್ತಿ ಮೃತರಾಗಿದ್ದಾರೆ. ವ್ಯಕ್ತಿಗೆ ಆರೋಗ್ಯದಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಳೆದ ಎರಡು ವಾರಗಳಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಅವರು ಮಾರ್ಚ್ 27 ರಂದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಆ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆ ಬಳಿಕ ವ್ಯಕ್ತಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದು ವೃದ್ಧ ವ್ಯಕ್ತಿಗೆ ನ್ಯುಮೋನಿಯಾವಿದ್ದು ಎರಡು ಕಿಡ್ನಿಗಳು ವೈಫಲ್ಯ ಹೊಂದಿದ್ದವು.

ಕೊರೋನ ವೈರಸ್‌ಗೆ ಕೇರಳದಲ್ಲಿ ಮೂರನೇ ಬಲಿ: 71 ವರ್ಷದ ವೃದ್ಧ ಸಾವು Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 24 ಗಂಟೆಗಳಲ್ಲಿ 1,035 ಮಂದಿಯಲ್ಲಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆ

ಹೊಸದಿಲ್ಲಿ, ಎ11: ದೇಶದಲ್ಲಿ ಮಾರಕ ಕೊರೋನ ವೈರಸ್ ಆತಂಕ ತಂದೊಡ್ಡಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,035 ಮಂದಿಯಲ್ಲಿ ಹೊಸದಾಗಿ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 7,447ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1035 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 40

ದೇಶದಲ್ಲಿ 24 ಗಂಟೆಗಳಲ್ಲಿ 1,035 ಮಂದಿಯಲ್ಲಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 7,447ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಈವರೆಗೆ ಎಷ್ಟು ಮಂದಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ: ವೈದ್ಯಕೀಯ ಸಂಶೋಧನಾ ಮಂಡಳಿ ಏನು ಹೇಳುತ್ತೆ?

ಹೊಸದಿಲ್ಲಿ, ಎ.11 : ದೇಶದಲ್ಲಿ ಮಾರಕ ಕೊರೋನ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ವ್ಯಾಪಿಸುತ್ತಲೇ ಇದೆ. ಏತನ್ಮಧ್ಯೆ, ದೇಶಾದ್ಯಂತ ಏ.10ರವರೆಗೆ 1,61,330 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸ್ಪಷ್ಟಪಡಿಸಿದೆ. ಎ.10ರಂದು ರಾತ್ರಿ 9 ಗಂಟೆಯವರೆಗೆ 1, 47,034 ಮಂದಿಯಿಂದ ಸಂಗ್ರಹಿಸಲಾದ 1,61,330 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಕೊರೊನಾ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಕೋವಿಡ್-19 ಲಕ್ಷಣವಿರುವ ಎಲ್ಲ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಭಾರತದಲ್ಲಿ ಈವರೆಗೆ ಎಷ್ಟು ಮಂದಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ: ವೈದ್ಯಕೀಯ ಸಂಶೋಧನಾ ಮಂಡಳಿ ಏನು ಹೇಳುತ್ತೆ? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.10: ದೇಶದಲ್ಲಿ ಕೊರೋನ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್‌ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ ತಲುಪಿದೆ. ಕೊರೋನ ವೈರಸ್ ಹತ್ತಿಕ್ಕಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಿದೆ. ಆದರೂ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು, ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ

ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top