ರಾಷ್ಟ್ರೀಯ ನ್ಯೂಸ್

ಮೂರು ತಿಂಗಳುಗಳ ಕಾಲ ಸಾಲದ ಕಂತು ಮುಂದೂಡಿಕೆ ➤ ಆರ್ ಬಿಐ ಗವರ್ನರ್ ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ.27. ಎಲ್ಲಾ ಬ್ಯಾಂಕ್ ಗಳ ಸಾಲದ ಕಂತುಗಳನ್ನು ಮೂರು ತಿಂಗಳುಗಳ ಕಾಲ ಮುಂದೂಡಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿ ಕಾಂತ್ ದಾಸ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ ಅವರು ವೈಯಕ್ತಿಕ ಸಾಲ, ಗೃಹ ಸಾಲ, ವಾಹನಗಳ ಸಾಲಗಳ ಕಂತುಗಳನ್ನು ಜೂನ್ ತನಕ ಮೂಂದೂಡಲಾಗಿದೆ. ರಾಷ್ಟ್ರೀಕೃತ, ಸಹಕಾರಿ , ಗ್ರಾಮೀಣ ಬ್ಯಾಂಕ್ ಗಳು ಸೇರಿದಂತೆ ಇದು ಎಲ್ಲ ಬ್ಯಾಂಕ್ ಗಳಿಗೂ ಅನ್ವಯವಾಗುತ್ತದೆ ಎಂದರು. ಭಾರತೀಯ ರಿಸರ್ವ್ […]

ಮೂರು ತಿಂಗಳುಗಳ ಕಾಲ ಸಾಲದ ಕಂತು ಮುಂದೂಡಿಕೆ ➤ ಆರ್ ಬಿಐ ಗವರ್ನರ್ ಮಹತ್ವದ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

21ದಿನ ಭಾರತ ಲಾಕ್‌ಡೌನ್: ಪ್ರಧಾನಿ ಮೋದಿ

ಹೊಸದಿಲ್ಲಿ, ಮಾ.24: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನ ವೈರಸ್‌ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು. ಕೊರೋನ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ

21ದಿನ ಭಾರತ ಲಾಕ್‌ಡೌನ್: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮೂರು ವಾರಗಳ ಕಾಲ ದೇಶಾದ್ಯಂತ ಲಾಕ್ ಡೌನ್ ➤ ಪ್ರಧಾನಿ ಮೋದಿ ಘೋಷಣೆ

ನವದೆಹಲಿ, ಮಾ.24. ಕೊರೋನ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುವರಿಸಿರುವುದರ ನಡುವೆಯೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಾತ್ರಿ 12 ಗಂಟೆಯಿಂದ ಮೂರು ವಾರಗಳ ಕಾಲ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಲಾಕ್ ಡೌನ್ ಆಗಲಿದ್ದು, ಕರ್ಫ್ಯೂ ಪರಿಸ್ಥಿತಿ ಇರಲಿದೆ. 21 ದಿನಗಳ ಕಾಲ ಈ ಲಾಕ್ ಡೌನ್ ಇರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಮೂರು ವಾರಗಳ ಕಾಲ ಮನೆಗಳಿಂದ ಯಾರೂ ಹೊರಹೋಗಬೇಡಿ ಎಂದು

ಮೂರು ವಾರಗಳ ಕಾಲ ದೇಶಾದ್ಯಂತ ಲಾಕ್ ಡೌನ್ ➤ ಪ್ರಧಾನಿ ಮೋದಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಮಾ.25ರಿಂದ ದೇಶೀಯ ವಿಮಾನ ಹಾರಾಟ ಸ್ಥಗಿತ

ಹೊಸದಿಲ್ಲಿ, ಮಾ.24: ದೇಶದಲ್ಲಿ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ ಕೇಂದ್ರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಕೈಗೊಂಡಿದ್ದು, ಮಾ.25ರಂದು ದೇಶೀಯ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿ, ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ. ಎಲ್ಲಾ ವಿಮಾನಗಳು ಮಾ.24ರ ರಾತ್ರಿ 11:59ರೊಳಗೆ ವಿಮಾನಯಾನಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ದೇಶದ ಒಳಗೆ ಸಂಪರ್ಕ ಕಲ್ಪಿಸುವಂತ ಹಾಗೂ ರಾಜ್ಯಗಳ ನಡುವೆ ಹಾರಾಡುವ ದೇಶೀಯ ವಿಮಾನ ಹಾರಾಟವನ್ನು ಇದೀಗ ಕೇಂದ್ರ ವಿಮಾನಯಾನ ಸಚಿವಾಲಯ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಮಾ.25ರಿಂದ ದೇಶೀಯ ವಿಮಾನ ಹಾರಾಟ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಕೋಲ್ಕತ್ತಾ, ಮಾ.23: ಕೊರೋನ ವೈರಸ್‌ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಕೋಲ್ಕತ್ತಾದ ಕೊರೋನ ಸೋಂಕಿತ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಇಟಲಿಯಿಂದ ಬಂದಿದ್ದ 55 ವರ್ಷದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೊರೋನ ಸೋಂಕಿನ ಕಾರಣದಿಂದ ಪಶ್ಚಿಮ ಬಂಗಾಳದಲ್ಲಿ ನಡೆದ ಮೊದಲ ಸಾವು ಪ್ರಕರಣವಾಗಿದ್ದು, ದೇಶದ 9ನೇ ಪ್ರಕರಣವಾಗಿದೆ. 55 ವರ್ಷದ ವ್ಯಕ್ತಿಯ ಕುಟುಂಬ ಇತ್ತೀಚೆಗೆ ಇಟಲಿಯಿಂದ ಕೋಲ್ಕತ್ತಾಗೆ ಬಂದಿಳಿದಿತ್ತು. ಆದರೆ ಅವರ ಮಗ ಇನ್ನೂ ಇಟಲಿಯಲ್ಲೇ ಉಳಿದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಇದುವರೆಗೆ 415 ಪ್ರಕರಣಗಳು ದೃಢವಾಗಿದ್ದು, ಅವುಗಳಲ್ಲಿ 23

ದೇಶದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 9ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ➤ ಆತಂಕದಲ್ಲಿ ಗಡಿ ಭಾಗವಾದ ಪುತ್ತೂರು, ಸುಳ್ಯದ ಜನತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.22. ನೆರೆ ರಾಜ್ಯವಾದ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67ಕ್ಕೆ ಏರಿಕೆಯಾಗಿದ್ದು, ಕಾಸರಗೋಡು ಜಿಲ್ಲೆಯೊಂದರಲ್ಲೇ ಭಾನುವಾರದಂದು ಐವರಲ್ಲಿ ಸೋಂಕು ದೃಢಪಟ್ಟಿದೆ. ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವುದರಿಂದ ಗಡಿ ಭಾಗವಾದ ಪುತ್ತೂರು, ಸುಳ್ಯ ಭಾಗದ ನಿವಾಸಿಗಳಲ್ಲಿ ಕೊರೋನಾ ಭೀತಿ ಶುರುವಾಗಿದೆ. ಇದೀಗ ಮಂಗಳೂರಿನಲ್ಲೂ ಕೊರೋನಾ ಪತ್ತೆಯಾಗಿರುವುದರಿಂದ ಗಡಿ ಭಾಗದ ಜನತೆಯಲ್ಲಿ ಆತಂಕ ಮನೆಮಾಡಿದೆ. ಕಾಸರಗೋಡಿನಲ್ಲಿ ಕೊರೋನ ವೈರಸ್ ಪತ್ತೆಯಾಗಿರುವುದರಿಂದ ದಕ್ಷಿಣ ಕನ್ನಡಕ್ಕೆ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕೇರಳದ ಗಡಿಭಾಗದಲ್ಲಿ

ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ➤ ಆತಂಕದಲ್ಲಿ ಗಡಿ ಭಾಗವಾದ ಪುತ್ತೂರು, ಸುಳ್ಯದ ಜನತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್

ಹೊಸದಿಲ್ಲಿ, ಮಾ.22: ಕೊರೋನ ವೈರಸ್ ದೇಶದ ವಿವಿಧ ಭಾಗಗಳಲ್ಲಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಸೇರಿದಂತೆ ದೇಶದ ಒಟ್ಟು 75 ಜಿಲ್ಲೆಗಳನ್ನು ಲಾಕ್ ಡೌನ್ ಸ್ಥಿತಿಯಲ್ಲಿರಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್‌ಡೌನ್ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಲ್ಲಿ, ಮಾ.22: ಮಹಾಮಾರಿ ಕೊರೋನ ವೈರಸ್‌ಗೆ ಮುಂಬೈಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಲ್ಲಿ ವೈರಸ್‌ನಿಂದ ಹಸುನೀಗಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನ ವೈರಸ್’ಗೆ ಆರು ಮಂದಿ ಬಲಿಯಾದಂತಾಗಿದೆ.

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ – ಕೇರಳ ಗಡಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ➤ ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕೇರಳ ರಾಜ್ಯದ ಕಾಸರಗೋಡಿನಲ್ಲಿ ಕೊರೋನ ವೈರಸ್ ಪತ್ತೆಯಾಗಿರುವುದರಿಂದ ದಕ್ಷಿಣ ಕನ್ನಡಕ್ಕೆ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ಶನಿವಾರ ಮಧ್ಯಾಹ್ನ‌‌ 2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕರಾವಳಿಯಿಂದ ಕೇರಳವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದ್ದು, ತುರ್ತು ‌ಸಂದರ್ಭದಲ್ಲಿ ತಲಪಾಡಿ ಚೆಕ್‌ಪೋಸ್ಟ್ ಮೂಲಕ‌ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕರ್ನಾಟಕ – ಕೇರಳ ಗಡಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ➤ ಕೊರೋನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್‌ಗೆ ಕೊರೋನ ಪಾಸಿಟಿವ್

ಮುಂಬೈ, ಮಾ.20: ಬಾಲಿವುಡ್‌ನ ಪ್ರಸಿದ್ದ ಗಾಯಕಿ ಕನ್ನಿಕಾ ಕಪೂರ್ ಇತ್ತೀಚೆಗೆ ಇಂಗ್ಲೆಂಡಿನಿಂದ ಮರಳಿದ್ದು, ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಸದ್ಯ ಗಾಯಕಿ ಕನ್ನಿಕಾರನ್ನು ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾನಿಲಯದ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಿಕಾ ಅವರು ಮ.15ರಂದು ಲಂಡನ್‌ನಿಂದ ಲಕ್ನೋಗೆ ಮರಳಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನದವರೆಗಿನ ಮಾಹಿತಿ ಪ್ರಕಾರ, ಭಾರತದಲ್ಲಿ 194 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ 20 ಜನರು ಗುಣಮುಖರಾಗಿದ್ದು, 170 ಜನರು ಚಿಕಿತ್ಸೆ ಪಡೆಯುತ್ತಿದ್ಧಾರೆ. ನಾಲ್ವರು

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್‌ಗೆ ಕೊರೋನ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top