ರಾಷ್ಟ್ರೀಯ ನ್ಯೂಸ್

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ

ಹೊಸದಿಲ್ಲಿ, ಮಾ.20: ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಾಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ 15ತಿಂಗಳ ಕಾಂಗ್ರೆಸ್ ನೇತೃತ್ವದ ಸರಕಾರ ಪತನದ ಅಂಚಿನಲ್ಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮಲ್ ನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ ಬಜೆಟ್ […]

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು

ಹೊಸದಿಲ್ಲಿ, ಮಾ.20: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳನ್ನು ಇಂದು ಮುಂಜಾವ ಗಲ್ಲಿಗೇರಿಸಲಾಯಿತು. ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಮರಣದಂಡನೆಗೆ ಕೊರಳೊಡ್ಡುವವರೆಗೂ ಕಾನೂನು ಹೋರಾಟ ನಡೆಸಿ ವಿಫಲರಾಗಿದ್ದರು. ಗಲ್ಲುಶಿಕ್ಷೆಗೆ ಎರಡು ಗಂಟೆ ಬಾಕಿ ಇರುವಾಗ ಸುಪ್ರೀಂಕೋರ್ಟ್ ಕದತಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿತ್ತು. ನಾಲ್ವರು ದೋಷಿಗಳು ಕೊನೆಯ ಯಾವ ಆಸೆಯನ್ನೂ ವ್ಯಕ್ತಪಡಿಸಿಲ್ಲವಾಗಿತ್ತು ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನಸುಕಿನಲ್ಲಿ ಅರ್ಜಿ ವಜಾಗೊಳಿಸಿದ ನಂತರ

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಜೈಪುರ, ಮಾ.20: ಕೊರೋನ ವೈರಸ್‌ ಸೋಂಕಿಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 5 ಕ್ಕೆ ಏರಿದೆ. ಭಾರತದ ಪ್ರವಾಸಕ್ಕೆ ಬಂದಿದ್ದ ಇಟಲಿಯ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರಾಜಸ್ತಾನದ ಜೈಪುರದಲ್ಲಿ ಕೊರೋನ ಸೋಂಕಿತ ಇಟಲಿಯ ನಾಗರಿಕ ಸಾವನ್ನಪ್ಪಿದ್ದಾನೆ.

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ನನ್ನ ಮಗಳ ಸಾವಿಗೆ 7 ವರ್ಷಗಳ ಬಳಿಕವಾದರೂ ನ್ಯಾಯ ಸಿಕ್ಕಿತಲ್ಲ. ಈ ದಿನಕ್ಕಾಗಿ ನಾನು ಕಾಯುತ್ತಿದ್ದೆ. ಈ ದಿನವನ್ನು ನನ್ನ ಮಗಳಿಗೆ ಅರ್ಪಿಸುತ್ತಿದ್ದೇನೆ ಎಂದು ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದಾರೆ. ತನ್ನ ಮಗಳನ್ನು ಅತ್ಯಾಚಾರಗೈದು ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದರು. 2012ರಿಂದಲೂ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡುತ್ತಲೇ ಬಂದಿದ್ದೆವು. ಕೊನೆಗೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದೆ. ಇಂದು

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಬಿತ್ತು ನಿರ್ಭಯಾ ಹಂತಕರ ಕೊರಳಿಗೆ ಗಲ್ಲು ➤ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಗಲ್ಲಿಗೇರಿಸಲಾಯಿತು. ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಹಾಗೂ ಪವನ್ ಗುಪ್ತ ತಮ್ಮ ವಕೀಲರ ಮೂಲಕ ವಿವಿಧ ಕಸರತ್ತು ನಡೆಸಿದರೂ ಗಲ್ಲು ಶಿಕ್ಷೆಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ. ಮ್ಯಾಜಿಸ್ಟ್ರಿಟ್ ಸಮ್ಮುಖದಲ್ಲಿ

ಕೊನೆಗೂ ಬಿತ್ತು ನಿರ್ಭಯಾ ಹಂತಕರ ಕೊರಳಿಗೆ ಗಲ್ಲು ➤ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾಕ್ಕೆ ಬೆಚ್ಚಿಬಿದ್ದ ಭಾರತ ➤ ಮಾರ್ಚ್ 22 ರಂದು ‘ಜನತಾ ಕರ್ಫ್ಯೂ’: ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19. ದೇಶದಲ್ಲಿ ಕೊರೊನಾ ವೈರಸ್ ನ ಅಟ್ಟಹಾಸವು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22 ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ‘ಜನತಾ ಕರ್ಫ್ಯೂ’ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾದಿಂದಾಗಿ ಇಡೀ ಜಗತ್ತೇ ಸಮಸ್ಯೆಯನ್ನು ಎದುರಿಸುತ್ತಿದೆ. ಕೊರೊನಾವೈರಸ್ ಗೆ ಇನ್ನೂ ಸರಿಯಾದ ಲಸಿಕೆ ಸಿಕ್ಕಿಲ್ಲ. ನಿಮ್ಮ ಕೆಲ ವಾರಗಳು ನನಗೆ ಬೇಕಾಗಿದೆ. ದೇಶದ ನಾಗರಿಕರು

ಕೊರೋನಾಕ್ಕೆ ಬೆಚ್ಚಿಬಿದ್ದ ಭಾರತ ➤ ಮಾರ್ಚ್ 22 ರಂದು ‘ಜನತಾ ಕರ್ಫ್ಯೂ’: ಪ್ರಧಾನಿ ಮೋದಿ ಕರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ➤ ಐಸಿಎಸ್ಸಿ ಬೋರ್ಡ್ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19, ತೀವ್ರಗತಿಯಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಐಸಿಎಸ್ ಇ ಬೋರ್ಡ್ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಗುರುವಾರ ಮುಂದೂಡಿದೆ. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ತಿಳಿಸಿದೆ. ಎಲ್ಲಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಮಾರ್ಚ್ 31ರ ನಂತರ ಘೋಷಿಸುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ಅಲ್ಲದೇ ಮೌಲ್ಯಮಾಪನ ಕೆಲಸ ಕೂಡಾ ಮಾರ್ಚ್ 31ರಂದು ಮರು ನಿಗದಿಪಡಿಸಲಾಗುವುದು

ಭಾರತದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ➤ ಐಸಿಎಸ್ಸಿ ಬೋರ್ಡ್ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್

ಹೊಸದಿಲ್ಲಿ, ಮಾ.17: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ತಮಗೂ ಕೊರೋನ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಬರಿಗೆ ಕೊರೋನ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನ ವೈರಸ್ ಭೀತಿ ಉಂಟಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ

ಹೊಸದಿಲ್ಲಿ, ಮಾ.16: ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಸೋಮವಾರ ಬಜೆಟ್ ಅಧಿವೇಶನದ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತು ಪರೀಕ್ಷೆಯಿಂದ ತಾತ್ಕಾಲಿಕವಾಗಿ ನಿರಾಳತೆ ಪಡೆದಂತಾಗಿತ್ತು. ಈ ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಎರಡು ದಿನದೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯಪಾಲರ ಆದೇಶ ಧಿಕ್ಕರಿಸಿ ಬಹುಮತ ಸಾಬೀತಿಗೆ ಅವಕಾಶ

ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ

ಹೊಸದಿಲ್ಲಿ, ಮಾ.16: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಹುಡುಕುತ್ತಿರುವ ಎಲ್ಲಾ ದಾರಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಬಂದ್ ಮಾಡಿದ್ದು, ಅಪರಾಧಿಗಳಿಗೆ ಮಾರ್ಚ್ 20ಕ್ಕೆ ನೇಣಿಗೇರುವುದು ಬಹುತೇಕ ಖಚಿತವಾಗಿದೆ. ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬರಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಅಲ್ಲದೆ ಅಪರಾಧಿಗಳ ಎಲ್ಲಾ ಕಾನೂನು ಅವಕಾಶಗಳು ಮುಗಿದಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top