ರಾಷ್ಟ್ರೀಯ ನ್ಯೂಸ್

ಲಾರಿ-ಬಸ್ ಢಿಕ್ಕಿ: 20 ಕ್ಕೂ ಅಧಿಕ ಮಂದಿ ಸಜೀವ ದಹನ

ಲಕ್ನೋ, ಜ.11: ಲಾರಿ ಮತ್ತು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡ ಹೊತ್ತಿ ಉರಿದಿದ್ದು,  20ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ  ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ 9:30 ರ ವೇಳೆಗೆ ಈ ದುರ್ಘಟನೆ ನಡೆದಿದ್ದು ಬಸ್ ನಲ್ಲಿ ಸುಮಾರು 46 ಪ್ರಯಾಣಿಕರು ಇದ್ದರು, ಘಟನೆ ನಡೆದ ವೇಳೆ 21 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಜೈಪುರಕ್ಕೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಸ್ಲೀಪರ್ […]

ಲಾರಿ-ಬಸ್ ಢಿಕ್ಕಿ: 20 ಕ್ಕೂ ಅಧಿಕ ಮಂದಿ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ಕಾಯ್ದೆ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ದೇಶಾದ್ಯಂತ ಭಾರಿ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆ ಜ.10ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಈ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಬಿದ್ದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಲ್ಲಿ ಧಾರ್ಮಿಕ ಶೋಷಣೆಗೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿಗೃಹ ಸಚಿವಾಲಯ ತಿಳಿಸಿದೆ. 2014ರ ಡಿ.31ಕ್ಕೆ ಮುನ್ನ ಭಾರತಕ್ಕೆ ಬಂದ ಮುಸ್ಲಿಮೇತರರ ವಲಸಿಗರಿಗೆ ಈ ಕಾಯಿದೆ ಅಡಿ ಪೌರತ್ವ ಲಭ್ಯವಾಗಲಿದೆ. ಆದರೆ, ಕಾಯಿದೆಗೆ ಸಂಬಂಧಿಸಿದ ನೀತಿ-ನಿಯಮಗಳೇನು ಎಂಬುದನ್ನು ಸರಕಾರ ಇನ್ನೂ ಬಯಲುಮಾಡಿಲ್ಲ. ಪೌರತ್ವ ತಿದ್ದುಪಡಿ

ಪೌರತ್ವ ಕಾಯ್ದೆ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್

ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಯಿಂದ ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ, ಜ.9: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲ ಕೋರ್ಟ್ ಮೊನ್ನೆ ಸೋಮವಾರ ಘೋಷಿಸಿದ ಬಳಿಕ ವಿನಯ್ ಶರ್ಮ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾನೆ.

ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಯಿಂದ ಸುಪ್ರೀಂಗೆ ಅರ್ಜಿ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ

ಹೊಸದಿಲ್ಲಿ, ಜ.9:ಇಲ್ಲಿನ ಕೈಗಾರಿಕ ಪ್ರದೇಶವೊಂದರಲ್ಲಿ ಇಂದು ಮುಂಜಾನೆ ಬೆಂಕಿ ದುರಂತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪೂರ್ವ ದಿಲ್ಲಿ ಯ ಪತ್ ಪರ್ ಗಂಜ್‌ನಲ್ಲಿ ನಡೆದಿದೆ. ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು,  ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಾರದ ಹಿಂದೆ ದಿಲ್ಲಿ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ

ದಿಲ್ಲಿಯಲ್ಲಿ ಮತ್ತೆ ಅಗ್ನಿ ದುರಂತ: ಓರ್ವ ಸಾವು, ಹಲವು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ

ಹೊಸದಿಲ್ಲಿ, ಜ.7: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಜನವರಿ 22ರಂದು ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಆರೋಪಿಯ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಒಂದು ತಿಂಗಳ ನಂತರ ನಾಲ್ವರು ಆರೋಪಿಗಳಿಗೆ ಶೀಘ್ರ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ

Breaking News ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜ.22ರಂದು ಗಲ್ಲು: ದಿಲ್ಲಿ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೆಎನ್‌ಯು ಹಿಂಸಾಚಾರ: ಆರೋಪಿಗಳ ಸುಳಿವು ಲಭ್ಯ

ಹೊಸದಿಲ್ಲಿ, ಜ.7: ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣದ ತನಿಖೆ ದೆಹಲಿ ಕ್ರೈಮ್ ಬ್ರಾಂಚ್’ಗೆ ಹಸ್ತಾಂತರಿಸಲಾಗಿದೆ. ಇನ್ನೊಂದೆಡೆ ಜೆಎನ್’ಯು ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗಿದ್ದು, ರಾಜಕೀಯಕ ಪಕ್ಷಗಳು, ಜನತೆ ಹಾಗೂ ವಿದ್ಯಾರ್ಥಿಗಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಜೆಎನ್‌ಯು ಹಿಂಸಾಚಾರ: ಆರೋಪಿಗಳ ಸುಳಿವು ಲಭ್ಯ Read More »

ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರದಿಂದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಮುಸುಧಾರಿಗಳಿಂದ ದಾಳಿ: ವೀಡಿಯೊ ವೈರಲ್

ಹೊಸದಿಲ್ಲಿ, ಜ.6: ಇಲ್ಲಿನ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ದಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಮೇಲೆ ಐವತ್ತುಕ್ಕೂ ಅಧಿಕ ಮಾಸ್ಕ್ ಧರಿಸಿದ ಪುಂಡರು ನಡೆದ ಮಾರಾಮಾರಿ ವೇಳೆಯಲ್ಲಿ ಮಾಸ್ಕ್ ಧರಿಸಿದ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದೆ. ಮಾಸ್ಕ್ ಧರಿಸಿದ ಗುಂಪು ಕೈಯಲ್ಲಿ ದೊಣ್ಣೆ ಮತ್ತಿತರ ಮಾರಕಾಸ್ತ್ರಗಳನ್ನು ಹಿಡಿದು ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಅಟ್ಟಾಡಿಸಿ ಹಲ್ಲೆ ಮಾಡಿದೆ. ಅಲ್ಲದೇ ವಿವಿಯಲ್ಲಿನ ಸಬರಮತಿ ಹಾಸ್ಟೆಲ್ ಗಾಜುಗಳು, ಪೀಠೋಪಕರಣಗಳನ್ನು ಪುಡಿ ಪುಡಿಮಾಡಿದೆ. ಪುಂಡರ ಅಟ್ಟಹಾಸದ ದೃಶ್ಯಾವಳಿಗಳು ಸೆರೆಯಾಗಿದ್ದು,

ಮಾರಕಾಸ್ತ್ರದಿಂದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಮುಸುಧಾರಿಗಳಿಂದ ದಾಳಿ: ವೀಡಿಯೊ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಜೆಎನ್‌ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ

ಹೊಸದಿಲ್ಲಿ, ಜ.6: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌‌‌ಯು)ಯಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ನಡೆದ ದಾಳಿಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆಗೆ ಕ್ಯಾಂಪಸ್ ನ ಆಸ್ತಿ ಪಾಸ್ತಿ ಹಾನಿ ಮಾಡಲಾಗಿದೆ. ಕಾಂಗ್ರೆಸ್

ಜೆಎನ್‌ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ

ಹೊಸದಿಲ್ಲಿ, ಜ.5: ಸಿಎಎ, ಎನ್ಆರ್‌ಸಿ ಮತ್ತು ಎನ್‌ಪಿಆರ್ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ ‘ಯಾತ್ರೆ’ ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಶನಿವಾರ ಘೋಷಿಸಿದ್ದಾರೆ. ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು ‘ಗಾಂಧಿ ಶಾಂತಿ ಯಾತ್ರೆ’ ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜನವರಿ 9ರಂದು ಮುಂಬೈನ ಅಪೋಲೋ ಬಂದರ್ ನಿಂದ ಯಾತ್ರೆ ಆರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಮೂಲಕ ದೆಹಲಿಯಲ್ಲಿ ಅಂತ್ಯಗೊಳ್ಳಲಿದೆ ಎಂದು ಸಿನ್ಹಾ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ Read More »

ರಾಷ್ಟ್ರೀಯ ನ್ಯೂಸ್

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ

ಹೊಸದಿಲ್ಲಿ, ಡಿ.31: ಆಧಾರ್‌ ಸಂಖ್ಯೆ ಜೊತೆ ಪ್ಯಾನ್‌ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, 2020ರ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ. ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಡಿಸೆಂಬರ್‌ 31ರೊಳಗೆ ಆಧಾರ್-ಪ್ಯಾನ್‌ ಲಿಂಕ್‌ ಮಾಡಲು ಸೂಚಿಸಲಾಗಿತ್ತು. ಇದೀಗ ಈ ಗಡುವನ್ನು ಡಿಸೆಂಬರ್‌ 31ರಿಂದ ಮಾರ್ಚ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಇಂದು ನಡೆದ ಹಣಕಾಸು ಸಚಿವಾವಲಯದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆಧಾರ್‌

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್
Scroll to Top