ರಾಷ್ಟ್ರೀಯ ನ್ಯೂಸ್

ಅಮಲು ಪದಾರ್ಥ ನೀಡಿ ನಗ-ನಗದು ದೋಚಿದ ಅಪರಿಚಿತರು ► ಕಂಗಾಲಾದ ಉಡುಪಿ ರೈಲ್ವೇ ಯಾತ್ರಿ ಸಂಘದ ಪದಾಧಿಕಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಅ.14. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತರು ನೀಡಿದ ಅಮಲು ಭರಿಸುವ ಮಜ್ಜಿಗೆಯನ್ನು ಸೇವಿಸಿ ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿಯೋರ್ವರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳೆದುಕೊಂಡ ಘಟನೆ ಶನಿವಾರದಂದು ಬೆಳಕಿಗೆ ಬಂದಿದೆ. ಮಜ್ಜಿಗೆ ಸೇವಿಸಿ ಪ್ರಜ್ಞೆ ಕಳೆದುಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಉಡುಪಿ ಕಿನ್ನಿಮುಲ್ಕಿ ನಿವಾಸಿಯಾಗಿರುವ ರೈಲ್ವೆ ಯಾತ್ರಿ ಸಂಘದ ಕೋಶಾಧಿಕಾರಿ ರಾಮಚಂದ್ರ ಆಚಾರ್ಯ (60) ಹಾಗೂ ಅವರ ಅಕ್ಕ ಕಾರ್ಕಳ ಬೈಲೂರಿನ ಕೃಷ್ಣ ಭಟ್ ಎಂಬವರ ಪತ್ನಿ ರಾಧಮ್ಮ […]

ಅಮಲು ಪದಾರ್ಥ ನೀಡಿ ನಗ-ನಗದು ದೋಚಿದ ಅಪರಿಚಿತರು ► ಕಂಗಾಲಾದ ಉಡುಪಿ ರೈಲ್ವೇ ಯಾತ್ರಿ ಸಂಘದ ಪದಾಧಿಕಾರಿ Read More »

ರಾಷ್ಟ್ರೀಯ ನ್ಯೂಸ್

ಮರ್ಧಾಳ: ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗ್ಗೆ ಮೋದಿ ಆ್ಯಪ್‍ನಲ್ಲಿ ದೂರು ► ಯುವಕನ ದೂರಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

(ನ್ಯೂಸ್ ಕಡಬ) newskadaba.com ಕಡಬ, ಅ.08. ತನ್ನೂರಿನ ದುರ್ಬಲ ಮೊಬೈಲ್ ನೆಟ್‍ವರ್ಕ್ ಸಮಸ್ಯೆಯ ಕುರಿತು ಮೋದಿ ಆ್ಯಪ್‍ನಲ್ಲಿ ದೂರು ದಾಖಲಿಸಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಚೇತನ್ ಅವರ ದೂರಿಗೆ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಆರು ದಿನಗಳ ಹಿಂದೆ ಮೋದಿ ಆ್ಯಪ್‍ನಲ್ಲಿ ದೂರು ದಾಖಲಿಸಿದ್ದ ಚೇತನ್ ಅವರು ತನ್ನ ಗ್ರಾಮವಾದ ಐತ್ತೂರಿನಲ್ಲಿ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್ನೆಟ್ ಸೇವೆ ಸಮರ್ಪಕವಾಗಿ ಸಿಗದಿರುವ ಬಗ್ಗೆ ಪ್ರಸ್ತಾಪಿಸಿದ್ದರು. ಹಳ್ಳಿಗಾಡು ಸೇರಿದಂತೆ ಗ್ರಾಮ ಗ್ರಾಮಗಳಲ್ಲಿ ದೂರ

ಮರ್ಧಾಳ: ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗ್ಗೆ ಮೋದಿ ಆ್ಯಪ್‍ನಲ್ಲಿ ದೂರು ► ಯುವಕನ ದೂರಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ Read More »

ರಾಷ್ಟ್ರೀಯ ನ್ಯೂಸ್

ಪರಸ್ತ್ರೀ – ಪುರುಷರ ನಡುವಿನ ಅನೈತಿಕ ಸಂಬಂಧ ಅಪರಾಧವಲ್ಲ ► ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.27. ಐಪಿಸಿ ಸೆಕ್ಷನ್ 497 ಅಸಂವಿಧಾನಿಕವಾಗಿದ್ದು, ಅನೈತಿಕ ಸಂಬಂಧವು ಕ್ರಿಮಿನಲ್ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಗುರುವಾರ ಮಹತ್ವದ ತೀರ್ಪು ನೀಡಿದೆ. ಅನೈತಿಕ ಸಂಬಂಧಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್​​ 497ನ ಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್​​ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸೆಕ್ಷನ್ 306 ಆತ್ಮಹತ್ಯೆಗೆ ಪ್ರಚೋದನೆಯ ವ್ಯಾಪ್ತಿಗೆ ಬಾರದ ಹೊರತು ಅನೈತಿಕ ಸಂಬಂಧ ಅಪರಾಧವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್​ ಮಿಶ್ರಾ ಹೇಳಿದ್ದಾರೆ. ಸೆಕ್ಷನ್ 497ರ ಅಡಿ ಪುರುಷನಿಗೆ

ಪರಸ್ತ್ರೀ – ಪುರುಷರ ನಡುವಿನ ಅನೈತಿಕ ಸಂಬಂಧ ಅಪರಾಧವಲ್ಲ ► ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ► ಕಾಸರಗೋಡು ಹಿಂದೂ ಐಕ್ಯವೇದಿ ಕಾರ್ಯದರ್ಶಿ ಮಂಜುನಾಥ ಉಡುಪ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.23. ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕೇರಳದ ಕಾಸರಗೋಡು ಜಿಲ್ಲಾ ಹಿಂದೂ ಐಕ್ಯವೇದಿಯ ಕಾರ್ಯದರ್ಶಿ ಮಂಜುನಾಥ ಉಡುಪ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಆರೋಪಿಯು ಸೆಪ್ಟೆಂಬರ್ 09 ರಂದು ಬಂಟ್ವಾಳ ತಾಲ್ಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಗ್ರಾಮದಲ್ಲಿನ ಖಾಸಗಿ ಜಾಗದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವಾಗ ಅನ್ಯಧರ್ಮದವರನ್ನು ಹೀಯಾಳಿಸಿ ಪ್ರಚೋದನಕಾರಿಯಾಗಿ

ವಿಟ್ಲ: ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ► ಕಾಸರಗೋಡು ಹಿಂದೂ ಐಕ್ಯವೇದಿ ಕಾರ್ಯದರ್ಶಿ ಮಂಜುನಾಥ ಉಡುಪ ಬಂಧನ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರಕಾರದ ಮಹತ್ತರ ‘ಆಯುಷ್ಮಾನ್ ಭಾರತ್’ ಆರೋಗ್ಯ ಯೋಜನೆ ► ಇಂದು ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.23. ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಮೋದಿ ನೇತೃತ್ವದ ಎನ್‌ಡಿಎ ಸರಕಾರವು‌ ಸುಮಾರು ಹತ್ತು ಕೋಟಿ ಕುಟುಂಬದ 50 ಕೋಟಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ‘ಆಯುಷ್ಮಾನ್‌ ಭಾರತ’ ಯೋಜನೆಯನ್ನು ರವಿವಾರ ದೇಶಾದ್ಯಂತ ಜಾರಿಗೆ ತರುತ್ತಿದೆ. ಯೋಜನೆಗೆ ಪ್ರಧಾನಿ ಮೋದಿ ಝಾರ್ಖಂಡ್‌ನ‌ ರಾಂಚಿಯಲ್ಲಿ ಭಾನುವಾರದಂದು ಚಾಲನೆ ನೀಡಲಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎನ್ನಲಾಗಿದೆ. ಈ ಯೋಜನೆಯಡಿ ಪ್ರತೀ ಕುಟುಂಬವು ವಾರ್ಷಿಕ 2 ಸಾವಿರ ರೂ. ಕಂತು ಪಾವತಿಸಿದ್ದಲ್ಲಿ

ಕೇಂದ್ರ ಸರಕಾರದ ಮಹತ್ತರ ‘ಆಯುಷ್ಮಾನ್ ಭಾರತ್’ ಆರೋಗ್ಯ ಯೋಜನೆ ► ಇಂದು ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಅಡಿಕೆಗೆ ಬಾಧಿಸಿದ ಕೊಳೆರೋಗ ► ಪುಣ್ಚತ್ತಾರಿಗೆ ಕೇಂದ್ರ ಸಮೀಕ್ಷಾ ತಂಡ ಭೇಟಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.16. ಅಡಿಕೆಗೆ ಬಾಧಿಸಿದ ಕೊಳೆರೋಗದ ಪರಿಣಾಮ ವ್ಯಾಪಕವಾಗಿ ಅಡಿಕೆ ನಾಶವಾಗಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಅಡಿಕೆ ಕೊಳೆರೋಗ ಕೇಂದ್ರ ಸಮೀಕ್ಷಾ ತಂಡವು ಕಾಣಿಯೂರಿಗೆ ಗುರುವಾರ ಭೇಟಿ ನೀಡಿ ಸಮೀಕ್ಷೆ ನಡೆಸಿತು. ಕಾಣಿಯೂರು ಗ್ರಾಮದ ಪುಣ್ಚತ್ತಾರು ವೆಂಕಮ್ಮರವರ ತೋಟಕ್ಕೆ ಆಗಮಿಸಿದ ಸಮೀಕ್ಷಾ ತಂಡವು ಅಡಿಕೆಗೆ ಕೊಳೆ ರೋಗ ಬಾಧಿಸಿರುವ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್

ಅಡಿಕೆಗೆ ಬಾಧಿಸಿದ ಕೊಳೆರೋಗ ► ಪುಣ್ಚತ್ತಾರಿಗೆ ಕೇಂದ್ರ ಸಮೀಕ್ಷಾ ತಂಡ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಸುಳ್ಯ ನ್ಯಾಯಾಲಯಕ್ಕೆ ಹಾಜರಿ ► ಹಿಂತಿರುಗುವಾಗ ಸುಳ್ಯ ಬಸ್ ನಿಲ್ದಾಣದಲ್ಲಿ ಕೇರಳ ಪೊಲೀಸರನ್ನು ತಳ್ಳಿ ಪರಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.14. ಕೇರಳದ ಕಾಸರಗೋಡಿನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಳ್ಯ ನಿವಾಸಿಯನ್ನು ಹಳೆಯ ಕಳವು ಪ್ರಕರಣಕ್ಕೆ ಸಂಬಂದಿಸಿ ನ್ಯಾಯಲಯಕ್ಕೆ ಹಾಜರುಪಡಿಸಲೆಂದು ಸುಳ್ಯಕ್ಕೆ ಕರೆತಂದು ಹಿಂದಿರುಗುವ ಪೊಲೀಸರನ್ನು ದೂಡಿ ಪರಾರಿಯಾದ ಘಟನೆ ಶುಕ್ರವಾರದಂದು ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಅಜ್ಜಾವರ ಬೊಳಂಬ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಝೀಝ್(35) ಇತ್ತೀಚೆಗೆ ಕೇರಳದ ಕಾಸರಗೋಡಿನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಕೇರಳದ ಹೊಸದುರ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿದ್ದಾನೆ. ಶುಕ್ರವಾರದಂದು ಸುಳ್ಯ ಪೊಲೀಸ್ ಠಾಣೆಯ ಹಳೆಯ

ಕೊಲೆ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಸುಳ್ಯ ನ್ಯಾಯಾಲಯಕ್ಕೆ ಹಾಜರಿ ► ಹಿಂತಿರುಗುವಾಗ ಸುಳ್ಯ ಬಸ್ ನಿಲ್ದಾಣದಲ್ಲಿ ಕೇರಳ ಪೊಲೀಸರನ್ನು ತಳ್ಳಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಯಿಂದಾಗಿ ಅಪಾರ ಆಸ್ತಿ ಪಾಸ್ತಿ ನಷ್ಟಗೊಂಡ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ತಂಡದಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ತೀವ್ರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಹಾನಿಗೀಡಾದ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೇಂದ್ರದಿಂದ ಆಗಮಿಸಿದ ತಂಡಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಮ್‍ನ ರೀಟೈನಿಂಗ್ ವಾಲ್ ಕುಸಿದಿರುವುದನ್ನು ಪರಿಶೀಲಿಸಿದರು. ಬಳಿಕ ಕೇಂದ್ರ ತಂಡವು ಮುಲ್ಲರ ಪಟ್ಣ ಸೇತುವೆ ಮುರಿದು

ಭಾರೀ ಮಳೆಯಿಂದಾಗಿ ಅಪಾರ ಆಸ್ತಿ ಪಾಸ್ತಿ ನಷ್ಟಗೊಂಡ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ತಂಡದಿಂದ ಪರಿಶೀಲನೆ Read More »

ರಾಷ್ಟ್ರೀಯ ನ್ಯೂಸ್

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ನಾಳೆ ಭಾರತ ಬಂದ್ ಹಿನ್ನೆಲೆ ► ಕಡಬದಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೆಪ್ಟೆಂಬರ್ 10 ಸೋಮವಾರದಂದು ಭಾರತ ಬಂದ್ ಗೆ ಕಾಂಗ್ರೆಸ್ ಕರೆ‌ ನೀಡಿದ್ದು, ಕಡಬದಲ್ಲೂ ಬಂದ್ ಇರಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹೇಳಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಜನಸಾಮಾನ್ಯರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಭಾರತ ಬಂದ್ ಗೆ ಕರೆ ನೀಡಿದ್ದರಿಂದ ಕಡಬದಲ್ಲಿನ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ನಾಳೆ ಭಾರತ ಬಂದ್ ಹಿನ್ನೆಲೆ ► ಕಡಬದಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಮನವಿ Read More »

ರಾಷ್ಟ್ರೀಯ ನ್ಯೂಸ್

ಲೀಟರಿಗೆ 87.77 ರೂ. ಗೆ ಏರಿದ ಪೆಟ್ರೋಲ್ ► ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ದರ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.08. ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುತ್ತಿದ್ದು, ಶನಿವಾರದಂದು ಮುಂಬಯಿಯಲ್ಲಿ ಪೆಟ್ರೋಲ್ ಲೀಟರಿಗೆ 87.77 ಹಾಗೂ ಡೀಸೆಲ್ ದರ 76.98 ರೂ. ಗಳಿಗೆ ತಲುಪಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 80.38 ರೂ., ಬೆಂಗಳೂರಿನಲ್ಲಿ 82.94 ರೂ.ಗೆ ಏರಿಕೆಯಾಗಿದೆ. ನವದೆಹಲಿಯಲ್ಲಿ ಪ್ರತೀ ಲೀಟರ್ ಡೀಸೆಲ್ಗೆ 72.51 ರೂ., ಬೆಂಗಳೂರಿನಲ್ಲಿ 74.79 ರೂ. ಗೆ ಏರಿಕೆಯಾಗಿದೆ. ತೈಲ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರವು ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಬೊಬ್ಬಿಡಲು

ಲೀಟರಿಗೆ 87.77 ರೂ. ಗೆ ಏರಿದ ಪೆಟ್ರೋಲ್ ► ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ದರ Read More »

ರಾಷ್ಟ್ರೀಯ ನ್ಯೂಸ್
Scroll to Top