ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ವ್ಯಕ್ತಿಯ ಕೊಲೆಗೈದು ನದಿಗೆಸೆದ ಪ್ರಕರಣ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.07. ಇತ್ತೀಚೆಗೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕುಪ್ಪೆಟ್ಟಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆಯ ಜಾಡು ಹಿಡಿದ ಡಿಸಿಐಬಿ ಪೊಲೀಸರು ಘಟನೆಗೆ ಸಂಬಂಧಿಸಿ ಕುಖ್ಯಾತ ರೌಡಿಗಳಿಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಅಳುವ ಕೊಟ್ಟಕ್ಕಾಕಾತ್‌ ನಿವಾಸಿ ಕೆ.ಎ ಸಿದ್ದಿಕ್‌ ಎಂಬವರ ಪುತ್ರ ಔರಂಗಝೀಬ್‌ (37) ಹಾಗೂ ಪಾಲಕ್ಕಾಡು ಜಿಲ್ಲೆಯ ಆಲೆತ್ತೂರು ತಾಲೂಕಿನ ಕೊಕ್ರತ್ತಲ್‌ ನಿವಾಸಿ ಮೊಯ್ದೀನ್‌ ಕುಟ್ಟಿ ಎಂಬವರ ಪುತ್ರ ಮಹಮ್ಮದ್‌ ಶಮನಾಝ್‌(23) ಎಂದು ಗುರುತಿಸಲಾಗಿದೆ. ಆರೋಪಿಗಳು ಕೇರಳದ […]

ಉಪ್ಪಿನಂಗಡಿ: ವ್ಯಕ್ತಿಯ ಕೊಲೆಗೈದು ನದಿಗೆಸೆದ ಪ್ರಕರಣ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ ► ಮುಂಬಯಿಯಲ್ಲಿ ಪೆಟ್ರೋಲ್ ಲೀಟರೊಂದಕ್ಕೆ 86.25 ರೂ.

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.02. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಗರಿಷ್ಠ ಮಟ್ಟಕ್ಕೆ ತಲುಪಿದೆ. ಮುಂಬಯಿಯಲ್ಲಿ ಭಾನುವಾರದಂದು ಪೆಟ್ರೋಲ್ ಲೀಟರಿಗೆ 86.25 ರೂ. ಗಳಿಗೆ ತಲುಪಿದ್ದು, ಡೀಸೆಲ್‌ ಲೀಟರಿಗೆ 74.76 ರೂ. ಗಳಾಗಿವೆ. ಕಳೆದ ತಿಂಗಳು ಪೆಟ್ರೋಲಿಯಂ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವು ಸ್ವಲ್ಪ ಮಟ್ಟಿನ ದರ ಇಳಿಕೆ ಮಾಡಿತ್ತಾದರೂ, ಕಳೆದ ಒಂದು ವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬರುತ್ತಿದೆ. ಬೆಂಗಳೂರಿನಲ್ಲೂ ಪೆಟ್ರೋಲ್​, ಡೀಸೆಲ್​ ಬೆಲೆ ಗಗನಕ್ಕೇರಿದ್ದು

ದೇಶದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ ► ಮುಂಬಯಿಯಲ್ಲಿ ಪೆಟ್ರೋಲ್ ಲೀಟರೊಂದಕ್ಕೆ 86.25 ರೂ. Read More »

ರಾಷ್ಟ್ರೀಯ ನ್ಯೂಸ್

ಹಾಡುಹಗಲೇ ಮನೆಗೆ ನುಗ್ಗಿ ತಾಯಿ – ಮಗುವನ್ನು ಅಪಹರಿಸಿದ ದುಷ್ಕರ್ಮಿಗಳು ► ಬೊಬ್ಬೆ ಕೇಳಿ ಸ್ಥಳಕ್ಕೆ ಧಾವಿಸಿದ ಚಿತ್ತಾರಿಕಲ್‌ ನಿವಾಸಿಗಳು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.31. ತಾಯಿ ಮತ್ತು ಮಗುವೊಂದನ್ನು ದುಷ್ಕರ್ಮಿಗಳ‌ ತಂಡವೊಂದು ಹಾಡುಹಗಲೇ ಮನೆಯಿಂದ ಅಪಹರಿಸಿರುವ ಘಟನೆ ಕಾಸರಗೋಡಿನಲ್ಲಿ ಶುಕ್ರವಾರದಂದು ನಡೆದಿದೆ. ಕಾಸರಗೋಡಿನ ಚಿತ್ತಾರಿಕ್ಕಲ್ ನಿವಾಸಿ ಮನೋಜ್ ಎಂಬವರ ಪತ್ನಿ ಮಿನು(23) ಹಾಗೂ ಮಗು ಸಾಯಿಕೃಷ್ಣ(3) ಅಪಹರಣಕ್ಕೊಳಗಾದವರು. ಮೆಕ್ಯಾನಿಕ್ ವೃತ್ತಿಯಲ್ಲಿರುವ ಮನೋಜ್ ಮನೆಯಿಂದ ಕೆಲಸಕ್ಕೆಂದು ತೆರಳಿದ ಬಳಿಕ ಕಾರಿನಲ್ಲಿ ದುಷ್ಕರ್ಮಿಗಳ ತಂಡವು ಮನೆಗೆ ಬಂದಿದೆ. ಈ ಬಗ್ಗೆ ಮಿನು ತನ್ನ ಪತಿ ಮನೋಜ್ ರಿಗೆ ಕರೆ ಮಾಡಿ ತಿಳಿಸಿದ್ದು, ಆ ಬಳಿಕ ಕರೆ ಮಾಡಿದಾಗ ಮೊಬೈಲ್

ಹಾಡುಹಗಲೇ ಮನೆಗೆ ನುಗ್ಗಿ ತಾಯಿ – ಮಗುವನ್ನು ಅಪಹರಿಸಿದ ದುಷ್ಕರ್ಮಿಗಳು ► ಬೊಬ್ಬೆ ಕೇಳಿ ಸ್ಥಳಕ್ಕೆ ಧಾವಿಸಿದ ಚಿತ್ತಾರಿಕಲ್‌ ನಿವಾಸಿಗಳು Read More »

ರಾಷ್ಟ್ರೀಯ ನ್ಯೂಸ್

ಕೊಡಗು – ಕೇರಳ ಮಳೆಹಾನಿ ಸಂತ್ರಸ್ತರಿಗೆ ನೆರವು ► ಜೇಸಿಐ ಕಡಬ ಕದಂಬ ವತಿಯಿಂದ ಸಂಗ್ರಹಿಸಲಾದ ನಗದು, ವಸ್ತುಗಳ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.21. ಕೊಡಗು ಹಾಗೂ ಕೇರಳ ರಾಜ್ಯದಲ್ಲಿನ ಮಳೆಹಾನಿ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್(ರಿ.) ವತಿಯಿಂದ ಸಂಗ್ರಹಿಸಲಾದ ನಗದು ಹಾಗೂ ದಿನ ಬಳಕೆಯ ವಸ್ತುಗಳನ್ನು ಸಂಪಾಜೆಯ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜೇಸಿ ಸದಸ್ಯರು ಹಾಗೂ ದಾನಿಗಳಿಂದ ಸಂಗ್ರಹಿಸಿದ 50 ಸಾವಿರದ 1 ರೂ. ನಗದನ್ನು ಪರಿಹಾರ ನಿಧಿಗೆ ನೀಡುವುದರೊಂದಿಗೆ ಆಹಾರ ಹಾಗೂ ದಿನ ಬಳಕೆಯ ವಸ್ತುಗಳಾದ 25 ಚೀಲ ಅಕ್ಕಿ,

ಕೊಡಗು – ಕೇರಳ ಮಳೆಹಾನಿ ಸಂತ್ರಸ್ತರಿಗೆ ನೆರವು ► ಜೇಸಿಐ ಕಡಬ ಕದಂಬ ವತಿಯಿಂದ ಸಂಗ್ರಹಿಸಲಾದ ನಗದು, ವಸ್ತುಗಳ ಹಸ್ತಾಂತರ Read More »

ರಾಷ್ಟ್ರೀಯ ನ್ಯೂಸ್

ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಗುಡ್ಡ, ಕಲ್ಲು ಬಂಡೆ ಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಮತ್ತಷ್ಟು ವಿಳಂಬ ಸಾಧ್ಯತೆ

(ನ್ಯೂಸ್ ಕಡಬ) newskadaba.com ಹಾಸನ, ಆ.19. ಪ್ರಕೃತಿ ವಿಕೋಪದಿಂದಾಗಿ ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ರೈಲ್ವೇ ಹಳಿಯ ಮೇಲೆ ವಿವಿಧ ಕಡೆ ಗುಡ್ಡ ಮತ್ತು ಭಾರೀ ಗಾತ್ರದ ಕಲ್ಲು ಬಂಡೆ ಕುಸಿದಿರುವ ಕಾರಣ ಬೆಂಗಳೂರು – ಮಂಗಳೂರು ನಡುವೆ ರೈಲು ಸಂಚಾರ ಪುನರಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಸಕಲೇಶಪುರ ತಾಲೂಕಿನ ಎಡಕುಮೇರಿ ಪರಿಸರದ ಸುಮಾರು ಐವತ್ತಕ್ಕೂ ಹೆಚ್ಚಿನ ಕಡೆ ಗುಡ್ಡ ಕುಸಿದು, ನೂರಾರು ಎಕರೆ ಕಾಫಿ ತೋಟ ನಾಶವಾಗಿದ್ದರೆ, ಅನೇಕ ಗ್ರಾಮಗಳ ಸಂಪರ್ಕ ರಸ್ತೆ ಬಂದ್ ಆಗಿವೆ.

ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಗುಡ್ಡ, ಕಲ್ಲು ಬಂಡೆ ಕುಸಿತ ► ಮಂಗಳೂರು – ಬೆಂಗಳೂರು ರೈಲು ಸಂಚಾರ ಮತ್ತಷ್ಟು ವಿಳಂಬ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.16. ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ನಿಧನರಾದರು. 1924ರ ಡಿಸೆಂಬರ್ 25 ರಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಜನಿಸಿದ್ದ ವಾಜಪೇಯಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 11ರಂದು ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ ► ಐದು ಬಾರಿ ತಮಿಳುನಾಡಿನ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದ ‘ಕಲೈನಾರ್

(ನ್ಯೂಸ್ ಕಡಬ) newskadaba.com ಚೆನ್ನೈ, ಆ.07. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಂಗಳವಾರದಂದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮಿಳುನಾಡಿನಲ್ಲಿ ‘ಕಲೈನಾರ್’ಎಂದೇ ಖ್ಯಾತರಾಗಿದ್ದ ಕರುಣಾನಿಧಿ ಡಿಎಂಕೆ ಪಕ್ಷದ ಮೂಲಕ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದರು ಐದು ಬಾರಿ ಮುಖ್ಯ ಮಂತ್ರಿಯಾಗಿ, ಮೂರು ಬಾರಿ ವಿಪಕ್ಷ ನಾಯಕನಾಗಿ ಸೇವೆ ಸಲ್ಲಿಸಿದ್ದರು. ಕಳೆದ ಜುಲೈ 29 ರಿಂದ ಕಾವೇರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದ ಕರುಣಾನಿಧಿಯವರಿಗೆ 94 ವರ್ಷ ವಯಸ್ಸಾಗಿತ್ತು. ಮಂಗಳವಾರದಂದು

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ ► ಐದು ಬಾರಿ ತಮಿಳುನಾಡಿನ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದ ‘ಕಲೈನಾರ್ Read More »

ರಾಷ್ಟ್ರೀಯ ನ್ಯೂಸ್

ಬಿಳಿನೆಲೆ CPCRI ಯನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳಿಸಲು ತೆರೆಮರೆಯ ಯತ್ನ ► ಸ್ಥಳಾಂತರಗೊಳಿಸದಂತೆ ಕೇಂದ್ರ ಪರಿಸರ ಖಾತೆ ಸಚಿವರಿಗೆ ಸಚಿವ ಡಿವಿಯವರಿಂದ ಒತ್ತಾಯ

(ನ್ಯೂಸ್ ಕಡಬ) newskadaba.com ಕಡಬ, ಆ.01. ಕಡಬ ತಾಲೂಕಿನ ನೆಟ್ಟಣದಲ್ಲಿರುವ ಕಿದು ತೆಂಗು ಸಂಶೋಧನಾ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಗೊಳಿಸದಂತೆ ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಹರ್ಷವರ್ಧನ್ ಅವರಿಗೆ ಕೇಂದ್ರ ಅಂಕಿಅಂಶ ಹಾಗೂ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಮಂಗಳವಾರ ಮನವರಿಕೆ ಮಾಡಿದ್ದು, ಸಿಪಿಸಿಆರ್‍ಐ ಉಳಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಂತಾಗಿದೆ. ಸಚಿವ ಸದಾನಂದ ಗೌಡ ಅವರು ನವದೆಹಲಿಯ ತಮ್ಮ ನಿವಾಸಕ್ಕೆ ಕೇಂದ್ರ ಅರಣ್ಯ ಸಚಿವರು, ದ.ಕ ಸಂಸದರು ಹಾಗೂ ಅಧಿಕಾರಿಗಳನ್ನು ಕರೆಸಿ

ಬಿಳಿನೆಲೆ CPCRI ಯನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳಿಸಲು ತೆರೆಮರೆಯ ಯತ್ನ ► ಸ್ಥಳಾಂತರಗೊಳಿಸದಂತೆ ಕೇಂದ್ರ ಪರಿಸರ ಖಾತೆ ಸಚಿವರಿಗೆ ಸಚಿವ ಡಿವಿಯವರಿಂದ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕೊಕ್ಕಡ ಮೂಲದ ವ್ಯಕ್ತಿ ಪೋಲೀಸ್ ವಶಕ್ಕೆ..?

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.29. ಸಾಮಾಜಿಕ ಮುಂದಾಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೆಲ್ಯಾಡಿ ಸಮೀಪದ ಕೊಕ್ಕಡ ಮೂಲದ ಓರ್ವನನ್ನು ಭಾನುವಾರದಂದು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಮಾಧ್ಯಮಗಳಿಗೆ ಲಭಿಸಿದ್ದು, ಆದರೆ ಪೊಲೀಸರು ಇದನ್ನು ಧೃಡಪಡಿಸಿಲ್ಲ. ಕೊಕ್ಕಡ ನಿವಾಸಿ ಜಯರಾಮ ಕೆ. ಯಾನೆ ಪೊಡಿಯ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಹಲವು ದಿನಗಳಿಂದ ಈತನನ್ನು ಹುಡುಕುತ್ತಿದ್ದ ಪೊಲೀಸರು ಭಾನುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಭಾಗಿಯಾಗಿದ್ದಾರೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕೊಕ್ಕಡ ಮೂಲದ ವ್ಯಕ್ತಿ ಪೋಲೀಸ್ ವಶಕ್ಕೆ..? Read More »

ರಾಷ್ಟ್ರೀಯ ನ್ಯೂಸ್

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ಈ ಶತಮಾನದ ಅತ್ಯಂತ ದೀರ್ಘಾವಧಿಯ ಚಂದ್ರಗ್ರಹಣವು ಇಂದು ರಾತ್ರಿ ಗೋಚರವಾಗಲಿದೆ. ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು, ಚಂದ್ರ ಕೆಂಪಾಗಿ ಗೋಚರಿಸಲಿದ್ದಾನೆ. ರಾತ್ರಿ 11.44ಕ್ಕೆ ಚಂದ್ರ ಗ್ರಹಣ ಆರಂಭಗೊಳ್ಳಲಿದ್ದು, ಪೂರ್ಣ ಚಂದ್ರ ಗ್ರಹಣ ರಾತ್ರಿಯ 1 ಗಂಟೆಗೆ ಗೋಚರಿಸುವ ಸಾಧ್ಯತೆ ಇದೆ. ಮುಂಜಾನೆ 4.58ರ ತನಕ ಗ್ರಹಣ ಮುಂದುವರೆಯಲಿದೆ. ಒಟ್ಟು ಒಂದು ಗಂಟೆ 43 ನಿಮಿಷಗಳ ಕಾಲ ಭೂಮಿಯ ನೆರಳನ್ನು ಚಂದ್ರನ ಮೇಲೆ ನೋಡಬಹುದಾಗಿದೆ. ಇದು ಪೂರ್ಣ ಚಂದ್ರಗ್ರಹಣವಾದರೆ ಭಾಗಶಃ ಚಂದ್ರಗ್ರಹಣ ಸುಮಾರು

ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ ► ಕೆಂಪಗಿನ ರಕ್ತ ಚಂದಿರನ ವಿಶೇಷತೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್
Scroll to Top