ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಹೆದ್ದಾರಿ ಅಂಚಿನ ಗುಡ್ಡ ಕುಸಿತ ► ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.21. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡವೊಂದು ಕುಸಿದ ಪರಿಣಾಮ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ತಡೆಯುಂಟಾದ ಘಟನೆ ಶನಿವಾರ ಸಂಜೆ‌ ನೆಲ್ಯಾಡಿಯಲ್ಲಿ ನಡೆದಿದೆ. ಬಿಸಿರೋಡಿನಿಂದ ಅಡ್ಡಹೊಳೆಯವರೆಗೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಶನಿವಾರ ಸಂಜೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಹೆದ್ದಾರಿ ಅಂಚಿನ ಗುಡ್ಡವು ಕುಸಿತವುಂಟಾಗಿ ಹೆದ್ದಾರಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ಹೆದ್ದಾರಿಯ ಎರಡೂ ಕಡೆಗಳಲ್ಲಿ ಮೈಲುಗಟ್ಟಳೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದೆ. ಹೆದ್ದಾರಿಗೆ […]

ನೆಲ್ಯಾಡಿ: ಹೆದ್ದಾರಿ ಅಂಚಿನ ಗುಡ್ಡ ಕುಸಿತ ► ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ Read More »

ರಾಷ್ಟ್ರೀಯ ನ್ಯೂಸ್

ಉಪ್ಪಳ: ಲಾರಿ – ತೂಫಾನ್ ಮುಖಾಮುಖಿ ಢಿಕ್ಕಿ ► ಮಂಗಳೂರಿನ ಒಂದೇ ಕುಟುಂಬದ ಐವರ ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಲಾರಿ ಹಾಗೂ ತೂಫಾನ್ ನಡುವೆ ಢಿಕ್ಕಿ ಸಂಭವಿಸಿ ಐವರು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ನಯಾ ಬಜಾರ್‍‍ ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೆ.ಸಿ.ರೋಡ್ ಅಜ್ಜಿನಡ್ಕ ನಿವಾಸಿಗಳಾದ ಬೀಫಾತಿಮ್ಮ(65), ಅಸ್ಮಾ(30), ನಸೀಮಾ(38), ಮುಸ್ತಾಕ್(41), ಇಮ್ತಿಯಾಝ್(35) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತರಾಗಿ ಕೇರಳದ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸಿ ಹಿಂತಿರುಗುತ್ತಿದ್ದಾಗ ಉಪ್ಪಳ ಸಮೀಪ ಲಾರಿ ಹಾಗೂ ತೂಫಾನ್ ನಡುವೆ ಢಿಕ್ಕಿಯುಂಟಾಗಿ

ಉಪ್ಪಳ: ಲಾರಿ – ತೂಫಾನ್ ಮುಖಾಮುಖಿ ಢಿಕ್ಕಿ ► ಮಂಗಳೂರಿನ ಒಂದೇ ಕುಟುಂಬದ ಐವರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಕದನ ವಿರಾಮ ಉಲ್ಲಂಘಿಸಿದ ಪಾಕ್ ► ನಾಲ್ವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಜಮ್ಮು-ಕಾಶ್ಮೀರ, ಜೂ.14. ಗಡಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪಾಕ್‌ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸಾಂಬಾ ಜಿಲ್ಲೆಯ ಅಂತರ್ರಾಷ್ಟ್ರೀಯ ಗಡಿಯಲ್ಲಿ ಬುಧವಾರದಂದು ಪಾಕ್‌ ಸೈನಿಕರು ಭಾರತೀಯ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಗಡಿ ಭದ್ರತಾ ಪಡೆಯ ಯೋಧರು ಗುಂಡಿನ ಮೂಲಕ ಪಾಕ್‌ಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್‌ಎಫ್‌ನ ಸಹಾಯಕ ಕಮಾಂಡೆಂಟ್‌ ಜತೀಂದರ್ ಸಿಂಗ್, ಸಬ್‌‌ ಇನ್ಸ್‌ಪೆಕ್ಟರ್‌ ರಜನೀಶ್, ಎಎಸ್ಐ

ಕದನ ವಿರಾಮ ಉಲ್ಲಂಘಿಸಿದ ಪಾಕ್ ► ನಾಲ್ವರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜೂ.08. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಪರಿಣಾಮ ಅಪ್ಪು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಗುರುವಾರ ರಾತ್ರಿ ಆಂಧ್ರ ಪ್ರದೇಶದ ಅನಂತಪುರದಲ್ಲಿ ಸಂಭವಿಸಿದೆ. ಬಳ್ಳಾರಿಯಲ್ಲಿ ಪವನ್ ಒಡೆಯರ್ ನಿರ್ದೇಶನದ ‘ನಟ ಸಾರ್ವಭೌಮ’ ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ತುಮಕೂರು ಮಾರ್ಗದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಅನಂತಪುರ ಮಾರ್ಗವಾಗಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅನಂತಪುರ ಸಮೀಪ ಮೂರು ರಸ್ತೆ ಸೇರುವಲ್ಲಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು Read More »

ರಾಷ್ಟ್ರೀಯ ನ್ಯೂಸ್

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಕೇಂದ್ರ ಸರಕಾರವು ಸಿಬಿಐ ಹಾಗೂ ಐಟಿ ಅಸ್ತ್ರ ಬಳಸಿ ನಮ್ಮನ್ನು ಕಟ್ಟಿ ಹಾಕುವ ಪ್ರಯತ್ನವನ್ನು ಮಾಡುತ್ತಿದ್ದು, ಇದು ಕೇವಲ ಅವರ ಭ್ರಮೆ ಮಾತ್ರ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ‌. ಗುರುವಾರ ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಕೇಂದ್ರ ಸರಕಾರವು ವಾಮ ಮಾರ್ಗಗಳ ಮೂಲಕ ನಮ್ಮನ್ನು ಕಟ್ಟಿಹಾಕುವ ಪ್ರಯತ್ನ ನಡೆಸುತ್ತಿದ್ದು, ಇದು ಸಾಧ್ಯವಿಲ್ಲ. ನನ್ನನ್ನು ಸಿಬಿಐ ಟಾರ್ಗೆಟ್ ಮಾಡಿದ್ದು, ನಮ್ಮನ್ನು ಯಾರಿಂದಲೂ ಎದುರಿಸಲು

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

85 ರ ಗಡಿ ದಾಟಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್‌ ಲೀಟರಿಗೆ 73 ರೂ. ► ಮೌನಕ್ಕೆ ಶರಣಾದ ಎನ್‌ಡಿಎ ಮಿತ್ರಪಕ್ಷ, ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.24. ಪೆಟ್ರೋಲಿಯಂ ಉತ್ಪನ್ನಗಳು ಬೆಲೆಯು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಮುಂಬಯಿಯಲ್ಲಿ ಪೆಟ್ರೋಲ್ ಲೀಟರೊಂದಕ್ಕೆ 85 ರ ಗಡಿಯನ್ನು ದಾಟಿದೆ. ಇದು ಭಾರತದಲ್ಲಿ ಇಲ್ಲಿಯವರೆಗೆ ದಾಖಲಾದ ಅತೀ ಗರಿಷ್ಟ ದರವಾಗಿದೆ. ಕಳೆದ ಹತ್ತು ದಿನಗಳಿಂದ ಸತತ ಏರಿಕೆ ಕಾಣುತ್ತಿದ್ದು, ಹಾಗಾಗಿ ಗರಿಷ್ಟ ದಾಖಲೆಯ ಬೆಲೆಯನ್ನು ಮುಟ್ಟಿದೆ‌. ಹಿಂದೆಂದೂ ಭಾರತದಲ್ಲಿ ಇಷ್ಟೊಂದು ಗರಿಷ್ಟ ದರ ದಾಖಲಾಗಿರಲಿಲ್ಲ. ಇಂದು ಮುಂಬಯಿಯಲ್ಲಿ ಪೆಟ್ರೋಲ್ ಲೀಟರೊಂದಕ್ಕೆ 85.29 ರೂ. ಹಾಗೂ ಡೀಸೆಲ್‌ ಲೀಟರೊಂದಕ್ಕೆ 72.96 ರೂ. ಗಳಾಗಿದ್ದು, ಬೆಂಗಳೂರಿನಲ್ಲಿ

85 ರ ಗಡಿ ದಾಟಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್‌ ಲೀಟರಿಗೆ 73 ರೂ. ► ಮೌನಕ್ಕೆ ಶರಣಾದ ಎನ್‌ಡಿಎ ಮಿತ್ರಪಕ್ಷ, ಸಾರ್ವಜನಿಕರಿಂದ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

ನಿಪಾಹ್’ ಮಾರಕ‌ ಸೋಂಕಿಗೆ ಬೆಚ್ಚಿಬಿದ್ದ ಕೇರಳ ► 16 ರ ಗಡಿ ದಾಟಿದೆ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಕೇರಳ, ಮೇ.21. ಅಪರಿಚಿತ ವೈರಸ್ ಸೋಂಕಿನಿಂದ ಬೆಚ್ಚಿಬಿದ್ದಿದ್ದ ಕೇರಳ ವೈದ್ಯಕೀಯ ಕ್ಷೇತ್ರವು ಕೊನೆಗೂ ಮಾರಕ ಸೋಂಕನ್ನು ಪತ್ತೆಹಚ್ಚಿದೆ. ಕೇರಳದಲ್ಲಿ ಈಗಾಗಲೇ 16 ಕ್ಕಿಂತಲೂ ಅಧಿಕ ಜನರನ್ನು ಬಲಿ ಪಡೆದು ಇಡೀ ದೇಶವನ್ನೇ ತಲ್ಲಣಗೊಳಿಸಿರುವ ವೈರಾಣುವನ್ನು ‘ನಿಪಾಹ್’ ಎಂದು ಗುರುತಿಸಲಾಗಿದ್ದು, ಈ ಮಾರಕ ಸೋಂಕಿನ ಕುರಿತಂತೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಸೇರಿದಂತೆ ಇಡೀ ವೈದ್ಯಕೀಯ ಲೋಕವೇ ಆತಂಕಕ್ಕೆ ಒಳಗಾಗಿದೆ. ನಿಪಾಹ್ ವೈರಾಣು1998 ರಲ್ಲೇ ಮಲೇಷಿಯಾದಲ್ಲಿ ಪತ್ತೆಯಾಗಿದ್ದರೂ, ಈ ಸೋಂಕಿಗೆ ಇದುವರೆಗೆ ಲಸಿಕೆ‌ ಕಂಡು

ನಿಪಾಹ್’ ಮಾರಕ‌ ಸೋಂಕಿಗೆ ಬೆಚ್ಚಿಬಿದ್ದ ಕೇರಳ ► 16 ರ ಗಡಿ ದಾಟಿದೆ ಮೃತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್

(ನ್ಯೂಸ್ ಕಡಬ) newskadaba.com ಗೋವಾ, ಮೇ.19. ಕರ್ನಾಟಕ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ಕೊಟ್ಟಿರುವ ಹಿನ್ನಲೆಯಲ್ಲಿ ಇದೀಗ ಪಕ್ಕದ ರಾಜ್ಯ ಗೋವಾದಲ್ಲಿ ಬಹುಮತ ಹೊಂದಿರುವ ಕಾಂಗ್ರೇಸ್ ಶಾಸಕರು ಸರ್ಕಾರ ರಚಿಸಲು ಮುಂದಾಗಿದ್ದಾರೆ. ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕಾಗಿ ಕಾಂಗ್ರೇಸ್ ಶಾಸಕರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಗೋವಾದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 40 ಸ್ಥಾನಗಳ ಪೈಕಿ ಕಾಂಗ್ರೆಸ್‌ 16 ಶಾಸಕರನ್ನು ಹೊಂದಿದ್ದು, ಬಿಜೆಪಿ 14 ಶಾಸಕರನ್ನು ಹೊಂದಿತ್ತು. ರಾಜ್ಯಪಾಲರು ಬಿಜೆಪಿಗೆ, ಗೋವಾ ಫಾರ್‌ವರ್ಡ್‌, ಪಕ್ಷೇತರ ಶಾಸಕರು

ಗೋವಾ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೇಸ್ Read More »

ರಾಷ್ಟ್ರೀಯ ನ್ಯೂಸ್

ಕಥುವಾ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ► ಸಿಬಿಐ ತನಿಖೆಗೆ ನಿರಾಕರಿಸಿದ ಸುರ್ಪಿಂಕೋರ್ಟ್

(ನ್ಯೂಸ್ ಕಡಬ) newskadaba.com ದೆಹಲಿ,ಮೇ.8. ಕಥುವಾದ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರದ ಹೊರಗೆ ಪಂಜಾಬ್ ನ ಪಠಾನ್ ಕೋಟ್ ಗೆ ವರ್ಗಾಯಿಸುವಂತೆ ಸೋಮವಾರದಂದು ಸುರ್ಪಿಂಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ಬೆಂಬಲಿಸುವ ಸಂಗತಿಗಳು ಅಧಿಕಗೊಂಡಿದೆ ಎಂದು ಕತುವಾದಿಂದ ಪ್ರಕರಣವನ್ನು ವರ್ಗಾವಣೆ ಮಾಡಬೇಕೆಂದು ಆಸಿಫಾಳ ಕುಟುಂಬವು ಮನವಿ ಮಾಡಿತ್ತು. ಸುಪ್ರೀಂ ಕೋರ್ಟ್ ದಿನನಿತ್ಯದ ಕ್ಯಾಮರಾ ವಿಚಾರಣೆಗೆ ಆದೇಶಿಸಿದೆ ಮತ್ತು ಪ್ರಕರಣದ ಪ್ರಗತಿಗೆ ಈ ಮೇಲ್ವಿಚಾರಣೆ ಸಹಕರಿಸಲಿದೆ ಎಂದು ತಿಳಿಸಿದೆ. ನ್ಯಾಯಾಲಯವು

ಕಥುವಾ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ► ಸಿಬಿಐ ತನಿಖೆಗೆ ನಿರಾಕರಿಸಿದ ಸುರ್ಪಿಂಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top