ಪ್ರಧಾನಿ ಮೋದಿಯ ವಿರುದ್ಧ ಧ್ವನಿಯೆತ್ತಿದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ► ಮೂರು ವರ್ಷಗಳಲ್ಲಿ 30 ಪತ್ರ ಬರೆದರೂ ಮೋದಿ ಉತ್ತರಿಸಿಲ್ಲ: ಅಣ್ಣಾ ಹಜಾರೆ
(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ತಾನು ನಡೆಸಿದ ಚಳವಳಿಯ ಮೂಲಕ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಧ್ವನಿ ಎತ್ತಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ನಾನು ಪ್ರಧಾನಿ ಮೋದಿಯವರಿಗೆ 30ಕ್ಕೂ ಅಧಿಕ ಪತ್ರಗಳನ್ನು ಬರೆದಿದ್ದೇನೆ, ಆದರೆ ಒಂದಕ್ಕೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಆರೋಪಿಸಿದರು. ಕಳೆದ ಮೂರು ವರ್ಷಗಳಲ್ಲಿ ನಾನು 30ಕ್ಕೂ […]









