ರಾಷ್ಟ್ರೀಯ ನ್ಯೂಸ್

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.17:‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಅವರು ಮೊದಲ ಬಾರಿಗೆ ತಾಯ್ನಾಡಿಗೆ ಮರಳಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೋರ್ವ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ಬಾಲಕೃಷ್ಣನ್‌ ಕೂಡ ಭಾರತಕ್ಕೆ ಮರಳಿದ್ದಾರೆ. ಅಮೇರಿಕಾದಿಂದ ಮಧ್ಯರಾತ್ರಿ 1.30ರ ವೇಳೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್‌, ದೆಹಲಿ ಸಿಎಂ ರೇಖಾ ಗುಪ್ತಾ […]

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ISS) ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ಭಾರತಕ್ಕೆ ಮರಳುತ್ತಿದ್ದಾರೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ. ಕಳೆದ ಒಂದು ವರ್ಷದಿಂದ ISSಗೆ Axiom-4 ಮಿಷನ್‌ಗಾಗಿ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿರುವ ಶುಕ್ಲಾ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಶೀಘ್ರದಲ್ಲೇ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು. ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ‘ನಯ ಭಾರತ’ ಈ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಬಳಿಕ ಧ್ವಜಾರೋಹಣಕ್ಕೆ ಕೆಂಪುಕೋಟೆಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು. ನಂತರ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ

 (ನ್ಯೂಸ್‌ ಕಡಬ) newskadaba.com ಆ.14: ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು, ಈ ಆಂದೋಲನವು ರಾಷ್ಟ್ರವನ್ನು ಏಕತೆಯಲ್ಲಿ ಬಂಧಿಸುತ್ತದೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸುತ್ತದೆ ಎಂದು ಬಣ್ಣಿಸಿದರು. ಕಳೆದ ಮೂರು ವರ್ಷಗಳಲ್ಲಿ, ಈ ಅಭಿಯಾನವು ಸಾಮೂಹಿಕ ಆಂದೋಲನವಾಗಿ ರೂಪಾಂತರಗೊಂಡಿದೆ, ದೇಶಾದ್ಯಂತ ವಿವಿಧ ಹಂತಗಳ ನಾಗರಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. “ಇಂದು, ಹರ್ ಘರ್ ತಿರಂಗ ಅಭಿಯಾನದ

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಆ.11 : ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಆರೋಪಕ್ಕೆ ಸಂಬಧಿಸಿದಂತೆ ರಾಹುಲ್ ಗಾಂಧಿ ಚುನಾವಣ ಅಯೋಗದ ನೋಟಿಸ್ ಕಳುಹಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ ಎಂದು ಕಾಂಗ್ರೆಸ್ ನಾಯಕನಿಗೆ ಚುನಾವಣಾ ಆಯೋಗ ಪ್ರಶ್ನೆ ಮಾಡಿದೆ. ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top