ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪಕ್ಕೆ ತೆರಳುವುದಕ್ಕಾಗಿ ಕರಾವಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕೇವಲ ಎರಡು ಗಂಟೆ ಮಾತ್ರ ನಿದ್ದೆ ಮಾಡಿದರು.   ಸೋಮವಾರ ರಾತ್ರಿ ಸುಮಾರು 12:05ರ ವೇಳೆಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ 3-4 ನಿಮಿಷ ಬೆರೆತು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿನ ಗೆಲುವಿಗೆ ಸಂಭ್ರಮಾಚರಿಸಿದರು. ಬಳಿಕ ಬಜ್ಪೆ ವಿಮಾನ ನಿಲ್ದಾಣದಿಂದ […]

ಮಂಗಳೂರಿನಲ್ಲಿ ಕೇವಲ ಎರಡು ಗಂಟೆ ನಿದ್ದೆ ಮಾಡಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಡಿ ಇಡುತ್ತಿದ್ದಂತೆಯೇ ರಾಷ್ಟ್ರದಾದ್ಯಂತ ಬಿಜೆಪಿ ಹರ್ಷಾಚರಿಸುತ್ತಿದೆ. ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ದೇಶದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭಮಾಚರಣೆಯಲ್ಲಿ ತೊಡಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಧಿಕಾರವನ್ನು ಮರಳಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲಿದೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17.‌ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 18 ಸೋಮವಾರದಂದು ರಾತ್ರಿ ಕರಾವಳಿಗೆ ಆಗಮಿಸಲಿದ್ದಾರೆ. ಸೋಮವಾರ ರಾತ್ರಿ 7.00 ಗಂಟೆಗೆ ವಿಶೇಷ ವಿಮಾನದ ಮೂಲಕ ಬಜಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ‌. ಡಿಸೆಂಬರ್ 19 ಮಂಗಳವಾರದಂದು ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ Read More »

ರಾಷ್ಟ್ರೀಯ ನ್ಯೂಸ್

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಡಿ.17. ದುಬಾರಿ ಬೆಲೆಯ ಬೈಕೊಂದು ಅಪಘಾತವಾಗಿ ತಾನು ಧರಿಸಿದ್ದ 50 ಸಾವಿರ ಬೆಲೆಬಾಳುವ ಹೆಲ್ಮೆಟ್ ಯುವಕನೋರ್ವನ ಪ್ರಾಣಕ್ಕೆ ಕುತ್ತಾದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಜೈಪುರ ನಿವಾಸಿ ಆಟೋಮೊಬೈಲ್ ಸಂಸ್ಥೆಯೊಂದರ ಸೇಲ್ಸ್ ಮ್ಯಾನೇಜರ್ ರೋಹಿತ್ ಸಿಂಗ್ ಶೆಖಾವತ್(30) ಎಂಬಾತ ತನ್ನ ಸುಮಾರು 22 ಲಕ್ಷ ಬೆಲೆಬಾಳುವ ಕವಾಸಾಕಿ ನಿಂಜಾ ಝೆಡ್ಎಕ್ಸ್ 10 ಆರ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿದ್ದು, ರೋಹಿತ್ ಧರಿಸಿದ್ದ ನೂತನ ತಂತ್ರಜ್ಞಾನದ ಹೆಲ್ಮೆಟ್ ತೆಗೆಯಲಾಗದೆ ಮೆದುಳಿನ ರಕ್ತಸ್ರಾವ ಉಂಟಾಗಿದೆ‌.

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದ ಯುವಕ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.16. ಕ್ರಿಕೆಟ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಶನಿವಾರದಂದು ನಡೆದಿದೆ. ಮೃತನನ್ನು ಉಪ್ಪಳ ಸಮೀಪದ ಜೋಡುಕಲ್ಲು ಕಯ್ಯಾರ ನಿವಾಸಿ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಪದ್ಮನಾಭ ಸ್ಥಳೀಯ ಮೀಯಪದವು ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದ ಓವರಿನ ಕೊನೆಯ ಒಂದು ಎಸೆತದ ವೇಳೆ ಪದ್ಮನಾಭ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಜೊತೆಯಲ್ಲಿದ್ದ ಆಟಗಾರರು ಈತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವಷ್ಟರಲ್ಲಿ ದಾರಿ

ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದ ಯುವಕ ► ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಇಸ್ಕಾನ್ ಸಂಸ್ಥೆಯು ಧರ್ಮ ಪ್ರಚಾರಾರ್ಥ ಹಾಗೂ ಹರಿನಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ 34 ನೇ ವರ್ಷದ ಅಖಿಲ ಭಾರತ ಪಾದಯಾತ್ರೆ ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರದಂದು ತಲುಪಲಿದೆ. 1984 ರಲ್ಲಿ ಪ್ರಾರಂಭವಾದ ಈ ರಥಯಾತ್ರೆಯು 5 ಬಾರಿ ಭಾರತ ದೇಶವನ್ನು ಪ್ರದಕ್ಷಿಣೆಗೈದಿದ್ದು, 6 ಸಲ ಕರ್ನಾಟಕ ರಾಜ್ಯವನ್ನು ಪ್ರವೇಶಿಸಿದೆ. ದ್ವಾರಕೆಯಿಂದ ಹೊರಟು ಕುರುಕ್ಷೇತ್ರ ಬದರಿನಾಥ, ಹರಿದ್ವಾರ, ವೃಂದಾವನ, ಮಾಯಾಪುರ,

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು Read More »

ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ನದಿಗೆ ಉರುಳಿದ ಪ್ರವಾಸಿ ಬಸ್ ► ಮೂವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12. ಬೆಂಗಳೂರಿನಿಂದ ಕಣ್ಣೂರಿನ ತಲಶ್ಶೇರಿಯತ್ತ ಪ್ರಯಾಣ ಬೆಳಿಸಿದ್ದ ಪ್ರವಾಸಿ ಬಸ್‌ವೊಂದು ನಿಯಂತ್ರಣ ತಪ್ಪಿ ನದಿಗೆ ಉರುಳಿದ ಘಟನೆ ಪೆರಿಂಗತ್ತೂರ್‌ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಈ ಅವಘಡದಲ್ಲಿ ಮಹಿಳೆ, ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹಲವರು ಗಾಯಗೊಂಡಿದ್ದಾರೆ‌. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪೆರಿಂಗತ್ತೂರ್ ಎಂಬಲ್ಲಿನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ನದಿಗೆ ಉರುಳಿದೆ. ಚಾಲಕ ಬಸ್‌ನಿಂದ ಜಿಗಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೇತುವೆಯಿಂದ ನದಿಗೆ ಉರುಳಿದ ಪ್ರವಾಸಿ ಬಸ್ ► ಮೂವರು ಮೃತ್ಯು, ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವವರಿಗೆ ಸಂತೋಷದ ವಿಷಯವೊಂದಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ಮೂಲಕ ಕೇವಲ 1.00 ರೂ.ನಲ್ಲಿ ಕಾರನ್ನು ನೀಡಲು ಮುಂದಾಗಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ. 1.00 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ

ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.08. ಟಿವಿಎಸ್ ಮೋಟಾರ್ ಕಂಪನಿಯ ಬಹು ನಿರೀಕ್ಷಿತ ಬೈಕ್ ಗಳಲ್ಲಿ ಒಂದಾದ ಅಪಾಚಿ ಆರ್ ಆರ್ 310 ಮೋಟಾರ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಪೋರ್ಟ್ಸ್ ಬೈಕ್ ಮಾದರಿಯ ಆರ್ ಆರ್ 310 ಫೋರ್ ಸ್ಟ್ರೋಕ್, ಫೋರ್ ವ್ಯಾಲ್ಯು, ಸಿಂಗಲ್ ಸಿಲಿಂಡರ್ ಗಳನ್ನು ಒಳಗೊಂಡಿರಲಿದೆ.‌ 312 ಸಿಸಿ ಇಂಜಿನ್ ಸಾಮರ್ಥ್ಯದ ಈ ಬೈಕ್ 33.5 ಬಿಎಚ್ ಪಿ ಒಳಗೊಂಡಿದೆ. 9700 ಆರ್ ಪಿಎಂ ಮತ್ತು 27.3 ಎನ್ ಎಂ ಒಳಗೊಂಡಿದೆ.

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310 Read More »

ರಾಷ್ಟ್ರೀಯ ನ್ಯೂಸ್
Scroll to Top