ಇಚಿಲಂಪಾಡಿ ಚರ್ಚ್ ಸೇರಿದಂತೆ 30ಕ್ಕೂ ಅಧಿಕ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಆರೋಪಿಗಳಿಬ್ಬರ ಸೆರೆ – ಪ್ರಮುಖ ಆರೋಪಿ ಪರಾರಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29. ಕಳೆದ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿನ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಬೆಳ್ತಂಗಡಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಆರೋಪಿಗಳನ್ನು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾನಸಂದ್ರ ಪಾಳ್ಯ ನಿವಾಸಿ ಉಮೇಶ್ ಬಿ.ಎನ್(30) ಮತ್ತು ಬೆಂಗಳೂರಿನ ಕುಂಬಳಗೋಡು ಗೇರುಪಾಳ್ಯ ನಿವಾಸಿ ವೆಂಕಟೇಶ್(38) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಬೆಂಗಳೂರು ನಿವಾಸಿ ನವೀನ್ ಪರಾರಿಯಾಗಿದ್ದಾನೆ. ಕಳ್ಳರಿಂದ ಬುಲೆಟ್, ಕೆಟಿಎಂ ಡ್ಯೂಕ್, […]










