ರಾಷ್ಟ್ರೀಯ ನ್ಯೂಸ್

ಜಿಯೋದಿಂದ 1500 ರೂಪಾಯಿಗೆ ಹೊಸ ಸ್ಮಾರ್ಟ್ ಫೋನ್ ಬಿಡುಗಡೆ ► 153 ರೂ.ಗೆ ಅನ್‍ಲಿಮಿಟೆಡ್ ಡಾಟಾ

(ನ್ಯೂಸ್ ಕಡಬ) newskadaba.com ಮುಂಬೈ, ಜು.21.  ಉಚಿತವಾಗಿ ಡೇಟಾ ಆಫರ್ ನೀಡಿ ಟೆಲಿಕಾಂ ವಲಯವನ್ನೇ ಅಲ್ಲೋಲಕಲ್ಲೋಲ ಮಾಡಿದ್ದ ರಿಲಾಯನ್ಸ್ ಜಿಯೋ ಇದೀಗ ಅತೀ ಕಡಿಮೆ ಬೆಲೆಯ ಕೇವಲ 1500 ರೂ. ಮುಖಬೆಲೆಯ 4ಜಿ ಫೀಚರ್ ಫೋನನ್ನು ಬಿಡುಗಡೆಗೊಳಿಸಿದೆ. ವೈಶಿಷ್ಟ್ಯಗಳು: ಭಾರತದ ಇಂಟಲಿಜೆಂಟ್ ಸ್ಮಾರ್ಟ್ ಫೋನ್’ ಎಂದು ಬಣ್ಣಿಸಲಾಗಿರುವ ಈ ಫೋನನ್ನು ಮೂರು ವರ್ಷದ ಬಳಿಕ ಹಿಂತಿರುಗಿಸಿದರೆ ಫೋನ್‍ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ. ಈ ಫೋನಿನ ಬೀಟಾ […]

ಜಿಯೋದಿಂದ 1500 ರೂಪಾಯಿಗೆ ಹೊಸ ಸ್ಮಾರ್ಟ್ ಫೋನ್ ಬಿಡುಗಡೆ ► 153 ರೂ.ಗೆ ಅನ್‍ಲಿಮಿಟೆಡ್ ಡಾಟಾ Read More »

ರಾಷ್ಟ್ರೀಯ ನ್ಯೂಸ್

ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು.20. ಎನ್‌ಡಿಎ ನೇತೃತ್ವದ ಅಭ್ಯರ್ಥಿ ರಾಮನಾಥ್ ಕೋವಿಂದ್ ಭಾರತದ 14ನೆ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಮನಾಥ್ ಕೋವಿಂದ್ ಒಟ್ಟು 7,02, 044 ಮತಗಳನ್ನು ಪಡೆದರೆ, ಮೀರಾಕುಮಾರ್ 3,67,314 ಮತಗಳನ್ನು ಪಡೆದಿದ್ದಾರೆ. ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾಕುಮಾರ್‌ರನ್ನು ಕೋವಿಂದ್ 3,34,730 ಮತಗಳ ಅಂತರದಿಂದ ಮಣಿಸಿದ್ದಾರೆ.

ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಬದುಕಿದ್ದವರನ್ನು ಸತ್ತಿದ್ದಾರೆಂದು ಹೇಳಿ ವಿವಾದ ಸೃಷ್ಟಿಸಿದ ಸಂಸದೆ ► ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಯಡವಟ್ಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.19. ರಾಜ್ಯದಲ್ಲಿ ಕೋಮು ಗಲಭೆಯನ್ನು ಪ್ರಸ್ತಾಪಿಸುವ ಭರದಲ್ಲಿ ಬಿಜೆಪಿ ಸಂಸದೆ ಯಡವಟ್ಟು ಮಾಡಿಕೊಂಡಿದ್ದಾರೆ. ಕೇಂದ್ರವನ್ನು ಓಲೈಸುವ ಭರದಲ್ಲಿಯೋ ಅಥವಾ ಕಾಂಗ್ರೆಸ್ ಸರಕಾರವನ್ನು ಹಣಿಯುವ ಭರದಲ್ಲೋ ಯಾವುದೇ ಪರಿಶೀಲನೆ ಮಾಡದೆ ಅನೌಪಚಾರಿಕವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಡವಟ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಬಿಜೆಪಿಯ ಈ ಯಡವಟ್ಟು ಮತ್ತಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸಂಸದೆ ಶೋಭಾ ಕರಂದ್ಲಾಜೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಕೊಲೆಯಾದವರ ಪಟ್ಟಿಯಲ್ಲಿ  ಸೇರಿಸಿದ್ದಾರೆ. ಅಲ್ಲದೆ

ಬದುಕಿದ್ದವರನ್ನು ಸತ್ತಿದ್ದಾರೆಂದು ಹೇಳಿ ವಿವಾದ ಸೃಷ್ಟಿಸಿದ ಸಂಸದೆ ► ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಯಡವಟ್ಟು Read More »

ರಾಷ್ಟ್ರೀಯ ನ್ಯೂಸ್

ಅರ್ಧ ಗಂಟೆಯಲ್ಲಿ 7000 ಕೋಟಿ ಕಳೆದುಕೊಂಡ ಎಲ್ಐಸಿ

ಮುಂಬೈ, ಜು.18. ಐಟಿಸಿ ಷೇರುಗಳ ಮೇಲೆ ಅವಲಂಬಿತವಾಗಿದ್ದ ಜೀವ ವಿಮಾ ನಿಗಮ (ಎಲ್ಐಸಿ) ಸಂಸ್ಥೆಯು ಮಂಗಳವಾರ ಮಧ್ಯಾಹ್ನದ ವೇಳೆಗೆ ಭಾರಿ ನಷ್ಟ ಅನುಭವಿಸಿದ್ದು, ಷೇರುಪೇಟೆಯಲ್ಲಿ ಅರ್ಧ ಗಂಟೆಯಲ್ಲಿ 7,000 ಕೋಟಿ ರೂ. ಕಳೆದುಕೊಂಡಿದೆ. ಐಟಿಸಿ ಷೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಶೇ 15ರಷ್ಟು ಕುಸಿತ ಕಂಡಿದ್ದು, ಎಲ್ಐಸಿಗೆ ಮಾರಕವಾಗಿ ಪರಿಣಮಿಸಿದೆ. ಜೂನ್ 30, 2017ರಂತೆ ಸಿಗರೇಟ್ ತಯಾರಕ ಸಂಸ್ಥೆಯಲ್ಲಿ ಶೇ 16.29ರಷ್ಟು ಪಾಲನ್ನು ಎಲ್ಐಸಿ ಹೊಂದಿದೆ. 1992ರ ನಂತರ ಇದೇ ಮೊದಲ ಬಾರಿಗೆ ಐಟಿಸಿ ಈ ಪ್ರಮಾಣದಲ್ಲಿ ಕುಸಿತ

ಅರ್ಧ ಗಂಟೆಯಲ್ಲಿ 7000 ಕೋಟಿ ಕಳೆದುಕೊಂಡ ಎಲ್ಐಸಿ Read More »

ರಾಷ್ಟ್ರೀಯ ನ್ಯೂಸ್

ಸಮುದ್ರದಲ್ಲಿ ದೋಣಿ ಪಲ್ಟಿ: ಓರ್ವ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.12. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮಗುಚಿಬಿದ್ದ ಪರಿಣಾಮ ಓರ್ವ ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ಬೇಕಲ ಪಳ್ಳಿಕೆರೆಯಲ್ಲಿ ನಡೆದಿದೆ. ಈ ವೇಳೆ ದೋಣಿಯಲ್ಲಿದ್ದ ಇತರ ನಾಲ್ವರು ಈಜಿ ದಡ ಸೇರಿದ್ದಾರೆ. ತೃಕ್ಕನಾಡಿನ ಕೊಟ್ಟನ್( 54) ನಾಪತ್ತೆಯಾದವರು. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಈ ದುರಂತೆ ಸಂಭವಿಸಿದೆ. ಕೊಟ್ಟನ್ ಸೇರಿದಂತೆ ಐವರು ಬೆಸ್ತರು ಪಳ್ಳಿಕೆರೆ ತೀರದಿಂದ ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದರು. ಅಲ್ಪಮುಂದೆ ಸಾಗುತ್ತಿದ್ದಂತೆ ಕಡಲಿನ ತೆರೆಗಳ ಅಬ್ಬರಕ್ಕೆ ದೋಣಿ ಮಗುಚಿ

ಸಮುದ್ರದಲ್ಲಿ ದೋಣಿ ಪಲ್ಟಿ: ಓರ್ವ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು.08. ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥಹ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು

(ನ್ಯೂಸ್ ಕಡಬ) newskadaba.com ಬಿಹಾರ, ಜು.06. ಊರಿನ ಮುಸ್ಲಿಮರು ಇಸ್ಲಾಂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಅರೋಪಿಸಿ ಮುಸ್ಲಿಂ ವಕೀಲರೋರ್ವರು ತನ್ನ ಇಬ್ಬರು ಪುತ್ರರೊಂದಿಗೆ ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯ ಪೊಖಾರಿಯ ಎಂಬ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮುಹಮ್ಮದ್ ಅನ್ವರ್(46) ತನ್ನ ಪುತ್ರರಾದ ಮುಹಮ್ಮದ್ ಅಮೀರ್(11) ಹಾಗೂ ಮುಹಮ್ಮದ್ ಶಬೀರ್‌(9) ರೊಂದಿಗೆ ಮತಾಂತರಗೊಂಡಿದ್ದಾರೆ. ಇವರು ತಮ್ಮ ಹೆಸರನ್ನು ಆನಂದ್ ಭಾರ್ತಿ, ಅಮನ್ ಭಾರ್ತಿ ಹಾಗೂ ಸುಮನ್ ಭಾರ್ತಿ ಎಂದು ಮರು ನಾಮಕರಣ ಮಾಡಿಕೊಂಡಿದ್ದಾರೆ.

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು Read More »

ರಾಷ್ಟ್ರೀಯ ನ್ಯೂಸ್

ದುಬಾರಿಯಾದ ಟೊಮ್ಯಾಟೊ ► ಕಿಲೋವೊಂದಕ್ಕೆ 120 ರೂಪಾಯಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.5. 2017ನೇ ವರ್ಷಾರಂಭದಲ್ಲಿ ಅಗ್ಗದ ಬೆಲೆಯಿಂದಾಗಿ ರೈತರಿಗೆ ಕೈಕೊಟ್ಟಿದ್ದ ಟೊಮೆಟೊ ಇದೀಗ ಮಧ್ಯಮ ವರ್ಗದ ಜನರಿಗೆ ಕೈಗೆಟುಕುತ್ತಿಲ್ಲ. ಅಹ್ಮದಾಬಾದ್‌ನ ಜಮಾಲ್‌ಪುರ ಎಪಿಎಂಸಿಯಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೆಟೊವನ್ನು ಪ್ರತಿ ಕೆಜಿಗೆ 120 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಮಂಗಳವಾರ 56 ಕೆಜಿ ಇದ್ದ ಟೊಮೆಟೊ ಬೆಲೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಇತರ ತರಕಾರಿಗಳ ದರವೂ ಪ್ರತಿ ಕೆಜಿಗೆ 100 ರೂ. ತಲುಪಿದೆ. ನಗರದಲ್ಲಿ ಭಾರೀ ಮಳೆ ಬಿದ್ದಿರುವ ಕಾರಣ ತರಕಾರಿಗಳ

ದುಬಾರಿಯಾದ ಟೊಮ್ಯಾಟೊ ► ಕಿಲೋವೊಂದಕ್ಕೆ 120 ರೂಪಾಯಿ Read More »

ರಾಷ್ಟ್ರೀಯ ನ್ಯೂಸ್

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಕಳೆದ ಕೆಲವು ವರ್ಷಗಳಿಂದ ಪ್ರಾಣಿದಯಾ ಸಂಘದವರ ಕೆಂಗಣ್ಣಿಗೆ ಗುರಿಯಾಗಿ ಕೋರ್ಟು ಮೆಟ್ಟಿಲು ಹತ್ತಿದ್ದ ಕರಾವಳಿಯ ಕ್ರೀಡೆಯಾದ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಂಬಳ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಅಂತಿಮ ಮುದ್ರೆ ಹಾಕಿರುವುದರಿಂದಾಗಿ ಕಂಬಳವನ್ನು ಮುಂದುವರಿಸಲು ಅನುಮತಿ ಸಿಕ್ಕಂತಾಗಿದೆ. ಕಂಬಳವನ್ನು ಉಳಿಸಬೇಕೆಂಬ ಕೂಗು ಕರಾವಳಿಯಲ್ಲಿ ಜೋರಾಗಿತ್ತಾದರೂ, ರಾಜ್ಯದಲ್ಲೆಡೆ ಸಂಪೂರ್ಣ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೆ ಈ ಬಗ್ಗೆ ರಾಜ್ಯ ವಿಧಾನಮಂಡಲದಲ್ಲೂ ವಿಧೇಯಕವನ್ನು ಮಂಡಿಸಲಾಗಿತ್ತು. ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ಪುತ್ತೂರು

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ Read More »

ರಾಷ್ಟ್ರೀಯ ನ್ಯೂಸ್

ಜಿಎಸ್‍ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಸ್ವಾತಂತ್ರ್ಯಾನಂತರದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಜುಲೈ 1ರಿಂದ ಜಾರಿಗೆ ಬಂದಿದೆ. ಜಿಎಸ್‍ಟಿ ಜೊತೆ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಜುಲೈ 1ರಿಂದ ಇತರೇ ಕ್ಷೇತ್ರಗಳಲ್ಲೂ ಕೆಲ ಬದಲಾವಣೆಯಾಗಿದೆ‌. ಹೀಗಾಗಿ ದೇಶದಲ್ಲಿ ಮತ್ತು ವಿಶ್ವದಲ್ಲಿ ಏನು ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. 1. ಐಟಿ ರಿಟರ್ನ್: ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು

ಜಿಎಸ್‍ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…? Read More »

ರಾಷ್ಟ್ರೀಯ ನ್ಯೂಸ್
Scroll to Top