ರಾಷ್ಟ್ರೀಯ ನ್ಯೂಸ್

ಉತ್ತರಕಾಶಿ ಮೇಘಸ್ಫೋಟ: ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.07: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ ಸಂಭವಿಸಿದೆ. ಇದರಿಂದ ದಿಢೀರ್‌ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯಿಂದ ಉತ್ತರಕಾಶಿ-ಹರ್ಸಿಲ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕುಸಿತದ ನಡುವೆ ಭಾರೀ ಮಳೆ ಮುಂದುವರಿದ […]

ಉತ್ತರಕಾಶಿ ಮೇಘಸ್ಫೋಟ: ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ್ ಮೇಘಸ್ಫೋಟ – ಪ್ರಧಾನಿ ಮೋದಿ ಸಂತಾಪ

(ನ್ಯೂಸ್‌ ಕಡಬ) newskadaba.com, ಆ.07: ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದ ಬಗ್ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರ್ಣಯಿಸಲು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ. ದಿಢೀರ್ ಪ್ರವಾಹದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಉತ್ತರಕಾಶಿಯ

ಉತ್ತರಾಖಂಡ್ ಮೇಘಸ್ಫೋಟ – ಪ್ರಧಾನಿ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ

(ನ್ಯೂಸ್‌ ಕಡಬ) newskadaba.com, ಆ.06:‌ ಆರ್‌ಬಿಐನ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಆಗಿಲ್ಲ. ರೆಪೋ ದರ ಶೇ.5.5ರಲ್ಲೇ ಮುಂದುವರಿಸಲು ಆರ್‌ಬಿಐ ತೀರ್ಮಾನಿಸಿದೆ. ಆ.4ರಿಂದ 6ರವರೆಗೆ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರ, ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಶೇ.5.5ರಲ್ಲೇ ಮುಂದುವರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ Read More »

ರಾಷ್ಟ್ರೀಯ ನ್ಯೂಸ್

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಹಲವಾರು ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಹಿರಿಯ ರಾಜಕಾರಣಿ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ.   ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಲಿಕ್ ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..!

(ನ್ಯೂಸ್‌ ಕಡಬ) newskadaba.com, ಆ.05: ಕೇಂದ್ರ ಸಚಿವ ಅಮಿತ್‌ ಶಾ ಆವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅಮಿತ್‌ ಶಾ ಅವರು ಲಾಲ್‌ ಕೃಷ್ಣ ಅಡ್ವಾಣಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೇಂದ್ರ ಸಚಿವರಾಗಿ ಅಮಿತ್‌ ಶಾ ಅವರು 2019ರ ಮೇ.30ರಿಂದ ಆ.4ವರೆಗೆ ಒಟ್ಟು 2,258 ದಿನಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಒಟ್ಟು 2,256 ದಿನಗಳನ್ನು

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..! Read More »

ರಾಷ್ಟ್ರೀಯ ನ್ಯೂಸ್

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್‌ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು “ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ವಿಪಕ್ಷಗಳ ಮೇಲೆ ಮೋದಿ ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್‌ ಮಲಿಕ್‌ ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top