ರಾಷ್ಟ್ರೀಯ ನ್ಯೂಸ್

ಚೀನಾದಲ್ಲಿ ಜಲಪ್ರಳಯ: ಪ್ರವಾಹದ ಬೆನ್ನಲ್ಲೇ ವಸತಿ ಪ್ರದೇಶಗಳಿಗೆ ನುಗ್ಗಿದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು!

(ನ್ಯೂಸ್‌ ಕಡಬ) newskadaba.com,  ಜು.10 :ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 1.3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿಶ್ವದ ಅತಿದೊಡ್ಡ ಹಾವು ಸಾಕಣೆ ಕೇಂದ್ರಗಳಿರುವ ಈ ಪ್ರಾಂತ್ಯದಲ್ಲಿ ಪ್ರವಾಹದ ನೀರು ನುಗ್ಗಿದ ಪರಿಣಾಮ, 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ಪಂಜರಗಳಿಂದ ತಪ್ಪಿಸಿಕೊಂಡು ವಸತಿ ಪ್ರದೇಶಗಳಿಗೆ ನುಗ್ಗಿವೆ. ಹೆಂಗ್‌ಝೌ ನಗರದಲ್ಲಿ ಹಾವಿನ ಕಡಿತಕ್ಕೊಳಗಾದ ಮಹಿಳೆಯೊಬ್ಬರು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಸ್ಥಳೀಯ […]

ಚೀನಾದಲ್ಲಿ ಜಲಪ್ರಳಯ: ಪ್ರವಾಹದ ಬೆನ್ನಲ್ಲೇ ವಸತಿ ಪ್ರದೇಶಗಳಿಗೆ ನುಗ್ಗಿದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ

(ನ್ಯೂಸ್‌ ಕಡಬ) newskadaba.com,  ಜು.10 : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗುರುವಾರ ಶೋಧ ಕಾರ್ಯಾಚರಣೆಯ ವೇಳೆ ದುರಂತದ ಸ್ಥಳ ಹಾಗೂ ಸಮೀಪದ ನದಿಯಿಂದ ಒಟ್ಟು ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಕೋಝಿಕ್ಕೋಡ್

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.10  ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರೀಡಾ ಬಾಂಧವ್ಯ ಬಲಪಡಿಸಲು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (MCC) ಜೊತೆಗಿನ ಈ ಸಹಭಾಗಿತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್ ಹಾಗೂ ಕಬಡ್ಡಿ ಕ್ರೀಡೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ, ತಳಮಟ್ಟದಲ್ಲೇ ಯುವ ಕ್ರೀಡಾಪಟುಗಳನ್ನು ಗುರುತಿಸಿ ವಿಶ್ವದರ್ಜೆಯ ತರಬೇತಿ ನೀಡುವುದು.ಮತ್ತು ಕ್ರೀಡಾ ವಿಜ್ಞಾನ ಮತ್ತು ತಾಂತ್ರಿಕ ಪರಿಣತಿ ವಿನಿಮಯದ ಮೂಲಕ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಿಗೆ ಭಾರತೀಯ ಅಥ್ಲೀಟ್‌ಗಳನ್ನು ಸಜ್ಜುಗೊಳಿಸುವುದು.

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡು ಭೂಕುಸಿತ- ಹಲವರು ಸಿಲುಕಿರುವ ಆತಂಕ, ರಕ್ಷಣಾ ಕಾರ್ಯಾಚರಣೆ ಚುರುಕು

(ನ್ಯೂಸ್ ಕಡಬ) newskadaba.com ಜು. 07. ಕೇರಳದ ವಯನಾಡು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮಂಗಳವಾರ ಭಾರೀ ಭೂಕುಸಿತ ಸಂಭವಿಸಿದೆ. ಇದರ ಪರಿಣಾಮ ಮೇಪ್ಪಾಡಿಯಲ್ಲಿರುವ ನಿರ್ಮಾಣ ಹಂತದ ಸುರಂಗ ರಸ್ತೆ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಹಲವರು ಸಿಲುಕಿರುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿದೆ. ​ ನಿರಂತರ ಮಳೆಯ ಪರಿಣಾಮ ಮೀನಾಕ್ಷಿ ಸೇತುವೆ ಸಮೀಪದ ಬೆಟ್ಟ ಕುಸಿದಿದ್ದು, ನಿರ್ಮಾಣ ಹಂತದ ಸುರಂಗ ರಸ್ತೆ ಯೋಜನೆ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ ಸಂಭವಿಸಿದೆ. ​ ಭೂಕುಸಿತದ ಹೊಡೆತಕ್ಕೆ ರಸ್ತೆ ಮತ್ತು ಸಮೀಪದ

ವಯನಾಡು ಭೂಕುಸಿತ- ಹಲವರು ಸಿಲುಕಿರುವ ಆತಂಕ, ರಕ್ಷಣಾ ಕಾರ್ಯಾಚರಣೆ ಚುರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!!

(ನ್ಯೂಸ್ ಕಡಬ) newskadaba.com ಜು. 06. ಜಾಗತಿಕ ಮಾರುಕಟ್ಟೆಯಲ್ಲಿ ವಿಮಾನ ಇಂಧನ ದರಗಳು ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆ, ಅಂತರರಾಷ್ಟ್ರೀಯ ವಿಮಾನ ಟಿಕೆಟ್‌ ಗಳ ಮೇಲಿನ ಇಂಧನ ಚಾರ್ಜ್ ಅನ್ನು ಸಂಸ್ಥೆಯು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ಭೀತಿ ತಿಳಿಯಾಗುತ್ತಿದ್ದಂತೆ ಕಚ್ಚಾ ತೈಲ ಬೆಲೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ. ಇದು ಇಂಧನ ಸಚಾರ್ಜ್ ಕಡಿತಕ್ಕೆ ಪ್ರಮುಖ ಕಾರಣವಾಗಿದೆ. ಏರ್ ಇಂಡಿಯಾದ ಈ ಮಹತ್ವದ ನಿರ್ಧಾರದಿಂದಾಗಿ ಭಾರತದಿಂದ ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ಯುನೈಟೆಡ್

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!! Read More »

ರಾಷ್ಟ್ರೀಯ ನ್ಯೂಸ್

ವೆನೆಜುವೆಲಾ ಅವಳಿ ಭೂಕಂಪ ದುರಂತ: ಮೃತರ ಸಂಖ್ಯೆ 2,595ಕ್ಕೆ ಏರಿಕೆ, 11,000ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಜು.03: ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅವಳಿ ಭೂಕಂಪ ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಅವಳಿ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 2,595ಕ್ಕೆ ಏರಿಕೆಯಾಗಿದೆ ಎಂದು ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅಧಿಕೃತವಾಗಿ ತಿಳಿಸಿದ್ದಾರೆ.ದುರಂತದಲ್ಲಿ 11,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ. ಕುಸಿದಿರುವ ಕಟ್ಟಡಗಳ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗುತ್ತಿದೆ. ಮೃತರ ಗೌರವಾರ್ಥವಾಗಿ ಯಾವುದೇ ಸಾಮೂಹಿಕ ಸಮಾಧಿಗಳನ್ನು ನಿರ್ಮಿಸುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ವೆನೆಜುವೆಲಾದ

ವೆನೆಜುವೆಲಾ ಅವಳಿ ಭೂಕಂಪ ದುರಂತ: ಮೃತರ ಸಂಖ್ಯೆ 2,595ಕ್ಕೆ ಏರಿಕೆ, 11,000ಕ್ಕೂ ಹೆಚ್ಚು ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ

(ನ್ಯೂಸ್‌ ಕಡಬ) newskadaba.com, ಜು.02: ಕರ್ನಾಟಕ ಸರ್ಕಾರವು ನಾಲ್ಕು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC ಮತ್ತು KKRTC) ಸುಮಾರು 1.05 ಲಕ್ಷ ನೌಕರರ ಮೂಲ ವೇತನವನ್ನು 12.5% ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವೇತನವು ಜುಲೈ ತಿಂಗಳಿನಿಂದ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗಲಿದೆ.ನೌಕರರಿಗೆ ಪಾವತಿಸಬೇಕಿರುವ ಹಳೆಯ ವೇತನ ಹಿಂಬಾಕಿಯ (Arrears) ಮೊದಲ ಕಂತಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವೇತನ ಪರಿಷ್ಕರಣೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

(ನ್ಯೂಸ್‌ ಕಡಬ) newskadaba.com, ಜು.02: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬನಾದ ಪುನೀತ್ ,ಕೊಲೆಯ ಬಳಿಕ ಶವ ವಿಲೇವಾರಿ ಮಾಡಲು ಸಂದೀಪ್‌ಗೆ ಸ್ಕಾರ್ಪಿಯೋ ಕಾರು ನೀಡಿದ್ದ ಹಾಗೂ ನಂತರ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪ್ರಮುಖ ಸಾಕ್ಷಿಯಾಗಿದ್ದಾನೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಸುಳ್ಳು ಹೇಳಿಕೆ ನೀಡುವಂತೆ ಸಂದೀಪ್‌ ಮೇಲೆ ಪುನೀತ್ ಒತ್ತಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಹಸು ವಧೆ ಸಂಪೂರ್ಣ ನಿಷೇಧ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

(ನ್ಯೂಸ್‌ ಕಡಬ) newskadaba.com, ಜು.02:ಬಕ್ರೀದ್ ಸೇರಿದಂತೆ ಯಾವುದೇ ದಿನಗಳಲ್ಲಿ ಹಸು ಮತ್ತು ಕರುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸರ್ಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಮೂಲಕ ಈ ಅರ್ಜಿ ಸಲ್ಲಿಕೆಯಾಗಿದೆ. ಕೊಯಂಬತ್ತೂರಿನ ಸಾರ್ವಜನಿಕ ಸ್ಥಳಗಳಲ್ಲಿ ಬಕ್ರೀದ್ ವೇಳೆ ಹಸು ವಧೆ ತಡೆಯುವ ಕುರಿತು ಮಾತ್ರ ಮೂಲ ಅರ್ಜಿ ಇತ್ತು. ಆದರೆ ಹೈಕೋರ್ಟ್ ತನ್ನ ವ್ಯಾಪ್ತಿ ಮೀರಿ ರಾಜ್ಯಾದ್ಯಂತ ಸಂಪೂರ್ಣ ನಿಷೇಧ

ಹಸು ವಧೆ ಸಂಪೂರ್ಣ ನಿಷೇಧ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,   ಜು.01::ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.ಹರಿದ್ವಾರದಿಂದ ಮಧ್ಯಪ್ರದೇಶದ ಇಂದೋರ್‌ಗೆ ಹೊರಟಿದ್ದ ‘ಹ್ಯಾನ್ಸ್ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಬಸ್, ಕೊಲಾವಾ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 39 ಪ್ರಯಾಣಿಕರಿದ್ದರು. ದೌಸಾ ಪೊಲೀಸ್ ವರಿಷ್ಠಾಧಿಕಾರಿ

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top