ರಾಷ್ಟ್ರೀಯ ನ್ಯೂಸ್

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. […]

‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಭೇಟಿಯಾದ ಸಿಎಂ

(ನ್ಯೂಸ್ ಕಡಬ) newskadaba.com ದೆಹಲಿ, ನ. 21. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ವೇಳೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ನಿರ್ಮಲ ಸೀತರಾಮನ್‌ಗೆ ಮಾಡಿದರು. ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.  

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಭೇಟಿಯಾದ ಸಿಎಂ Read More »

ರಾಷ್ಟ್ರೀಯ ನ್ಯೂಸ್

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ವಿಶ್ವದ ಅಗ್ರ 100 ಅತ್ಯಂತ ಕಲುಷಿತ ನಗರಗಳಲ್ಲಿ ಅರ್ಧಕ್ಕಿಂತ ಹೆಚ್ಚು (53 ನಗರಗಳು) ಭಾರತೀಯ ಉಪಖಂಡದಲ್ಲಿವೆ. ಭಾರತವು ಎಲೆಕ್ಟ್ರೀಕ್ ವಾಹನಗಳತ್ತ ಹೊರಳಬೇಕಾದ ಅಗತ್ಯವನ್ನುS&P ಅಧ್ಯಯನವು ಎತ್ತಿ ತೋರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಬಗ್ಗೆ ಕಳವಳವನ್ನು ಸಹ ವ್ಯಕ್ತಪಡಿಸಿದೆ. ಸಂಚಾರ ದಟ್ಟಣೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 430 ವಾಹನಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದೆ 308 ವಾಹನಗಳೊಂದಿಗೆ ಕೋಲ್ಕತ್ತಾ ಎರಡನೇ ಸ್ಥಾನ, ಪುಣೆ 248, ಮತ್ತು ದೆಹಲಿಯು ಪ್ರತಿ ಕಿಮೀಗೆ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ Read More »

ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ತಾರಾ ಬಳಗ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ನ. 20. ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಅಕ್ಷಯ್ ಕುಮಾರ್ ಮತ್ತು ರಾಜ್‌ಕುಮಾರ್ ರಾವ್ ಅವರು ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ 2024 ರಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆಯಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಮತದಾನ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಕ್ಷಯ್ ಕುಮಾರ್ ಮತದಾನ ಮಾಡುವಂತೆ ಸ್ಪಷ್ಟನೆ ನೀಡಿದ್ದಾರೆ. ಮತಗಟ್ಟೆಯಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಶ್ಲಾಘಿಸಿದ ಅಕ್ಷಯ್

ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ತಾರಾ ಬಳಗ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ದೆಹಲಿ ಹಾಗೂ ಸುತ್ತಮುತ್ತ ವಾಯುಗುಣಮಟ್ಟದ ಹದಗೆಡುವಿಕೆ ಮುಂದುವರೆದಿದ್ದು ರೈಲು, ವಿಮಾನ ಸಂಚಾರ ಹಾಗೂ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಸಾಲದ್ದಕ್ಕೆ ಜನರ ಉಸಿರಾಟಕ್ಕೂ ಸಮಸ್ಯೆ ಆಗುತ್ತಿದ್ದು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಶೇ.300ರಷ್ಟು ಏರಿದೆ. ದಿಲ್ಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) ಅತಿ ಗಂಭೀರ ಎಂದು ಪರಿಗಣಿಸಲಾಗುವ 488 ಅಂಕ ತಲುಪಿದೆ. ಈ ಪೈಕಿ ದಿಲ್ಲಿಯ ಅಲಿಪುರ ಹಾಗೂ ಸೋನಿಯಾ ವಿಹಾರ ಪ್ರದೇಶದಲ್ಲಿ 500 ಅಂಕ ದಾಖಲಾಗಿದೆ.

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ

(ನ್ಯೂಸ್ ಕಡಬ) newskadaba.com ಗಾಂಧಿನಗರ, ನ. 14. ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ನ. 18ರ ಮಧ್ಯಾಹ್ನ 3:30ರ ಸುಮಾರಿಗೆ ಮೀನುಗಾರಿಕೆ ರಹಿತ ಪ್ರದೇಶದಲ್ಲಿ ಭಾರತೀಯ ಮೀನುಗಾರರ ದೋಣಿ ಕಂಡಿದ್ದು, ಬಳಿಕ ಇನ್ನೊಂದು ದೋಣಿ ‘ಕಾಲ್ ಭೈರವ್’ ಅನ್ನು ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ ತಡೆಹಿಡಿದಿದೆ. ಜೊತೆಗೆ ಆ ಹಡಗಿನಲ್ಲಿ 7 ಮೀನುಗಾರರು ಇರುವುದಾಗಿ

ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ Read More »

ರಾಷ್ಟ್ರೀಯ ನ್ಯೂಸ್

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ

(ನ್ಯೂಸ್ ಕಡಬ) newskadaba.com  ನ. 19 ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ಹೀಗಾಗಿ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, ‘ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ Read More »

ರಾಷ್ಟ್ರೀಯ ನ್ಯೂಸ್

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ

(ನ್ಯೂಸ್ ಕಡಬ) newskadaba.com  ನ. 19 ದೆಹಲಿ: ದೇಶದಬಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ Read More »

ರಾಷ್ಟ್ರೀಯ ನ್ಯೂಸ್

ಶರವೇಗದಲ್ಲಿದೆ ಭಾರತದ ಪ್ರಗತಿ

(ನ್ಯೂಸ್ ಕಡಬ) newskadaba.com  ನ. 19. ನವದೆಹಲಿ: ಭಾರತವು ಜಿ 7 ಗುಂಪಿನ 19 ದೇಶಗಳ ಪೈಕಿಯಲ್ಲಿ 2024ನೇ ಸಾಲಿನಲ್ಲಿ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಬ್ರೆಝಿಲ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಜಿ 20’ ಶೃಂಗಸಭೆಯ ನೇಪಥ್ಯದಲ್ಲಿ ಬಿಡುಗಡೆ ಮಾಡಲಾದ ಅಂಕಿ-ಅಂಶಗಳಲ್ಲಿ ಭಾರತದ ಸಾಧನೆ ಗಮನ ಸೆಳೆದಿದೆ. ”2024ನೇ ಸಾಲಿಗೆ ಭಾರತವು ವಾರ್ಷಿಕ ಶೇ. 7ರಷ್ಟು ಜಿಡಿಪಿ ಪ್ರಗತಿಯೊಂದಿಗೆ ಮುಂಚೂಣಿ ಸ್ಥಾನ ಪಡೆದಿದೆ. ಈ ಸಾಧನೆಯು ಭಾರತದ ಆರ್ಥಿಕತೆಯ ಸದೃಢತೆಯನ್ನು ಒತ್ತಿ ಹೇಳುತ್ತದೆ. ಜಾಗತಿಕ

ಶರವೇಗದಲ್ಲಿದೆ ಭಾರತದ ಪ್ರಗತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top