ರಾಷ್ಟ್ರೀಯ ನ್ಯೂಸ್

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು

(ನ್ಯೂಸ್ ಕಡಬ) newskadaba.com ಅ.16. ಸತತವಾಗಿ ಸುರಿದ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದ ಪಂದ್ಯ ರದ್ದುಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ಅ. 16.ಉತ್ತರಾಖಂಡ :  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತರಾಖಂಡ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂದ್ ಅವರನ್ನು ಮುನ್ಸಿಯಾರಿಗೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಉತ್ತರಾಖಂಡದ ಪಿತ್ರೊಗಢ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರಕಾರ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ Read More »

ರಾಷ್ಟ್ರೀಯ ನ್ಯೂಸ್

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಅ. 16. ಆನ್​ಲೈನ್​ನಲ್ಲಿ ಖರೀದಿಸಿದ ಬಟ್ಟೆಯನ್ನು ವಾಪಸ್ ತೆಗೆದುಕೊಳ್ಳದ ಕಂಪನಿಯೊಂದಕ್ಕೆ ಎರ್ನಾಕುಲಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಪ್ರಾಡಕ್ಟ್​ ಬೆಲೆ, ಪರಿಹಾರ ಮತ್ತು ನ್ಯಾಯಾಲಯದ ವೆಚ್ಚ ಸೇರಿದಂತೆ ಒಟ್ಟು 9,395 ರೂ.ಗಳನ್ನು ಪಾವತಿಸಲು ಕೋರ್ಟ್ ಆದೇಶಿಸಿರುವುದಾಗಿ ತಿಳಿದುಬಂದಿದೆ.   ಕೇರಳದ ಆಲಪ್ಪುಝದಲ್ಲಿರುವ ಇಹಾ ಡಿಸೈನ್ಸ್ ಬ್ರೈಡಲ್ ಸ್ಟುಡಿಯೋ ಎಂಬ ಆನ್ ಲೈನ್ ಶಾಪಿಂಗ್ ಸೆಂಟರ್ ವಿರುದ್ಧ ಎಡಪ್ಪಲ್ಲಿ ಮೂಲದ ಕೆ.ಜಿ. ಲಿಸಾ ಎಂಬವರು ನೀಡಿದ ದೂರಿನನ್ವಯ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿಯಾಗಿ ಪ್ರವೀಣ್‌ ವಸಿಷ್ಠ ನೇಮಕ

(ನ್ಯೂಸ್ ಕಡಬ) newskadaba.com ಅ.16. ಹಿರಿಯ ಐಪಿಎಸ್‌‍ ಅಧಿಕಾರಿ ಪ್ರವೀಣ್‌ ವಸಿಷ್ಠ ಅವರನ್ನು ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ)ಯನ್ನಾಗಿ ನೇಮಿಸಲಾಗಿದೆ. ಬಿಹಾರ ಕೇಡರ್‌ನ 1991-ಬ್ಯಾಚ್‌ನ ಐಪಿಎಸ್‌‍ ಅಧಿಕಾರಿ ವಶಿಷ್ಟ ಅವರು ಪ್ರಸ್ತುತ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ (ಎಂಎಚ್‌ಎ) ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯು ಹೆಚ್ಚುವರಿ ಕಾರ್ಯದರ್ಶಿಯಾಗಿ ವಸಿಷ್ಠ ಅವರ ಅಧಿಕಾರಾವಧಿಯನ್ನು ಮೊಟಕುಗೊಳಿಸಲು ಅನುಮೋದಿಸಿದೆ ಮತ್ತು 2024, ಡಿಸೆಂಬರ್‌ 31ರ ವರೆಗಿನ ಅವಧಿಗೆ ಗೃಹ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‌‍ಡಿ) ಅವರನ್ನು

ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿಯಾಗಿ ಪ್ರವೀಣ್‌ ವಸಿಷ್ಠ ನೇಮಕ Read More »

ರಾಷ್ಟ್ರೀಯ ನ್ಯೂಸ್

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಅ.16. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಚೆನ್ನೈನಲ್ಲಿ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಇಲಾಖೆ ಇಂದು

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು Read More »

ರಾಷ್ಟ್ರೀಯ ನ್ಯೂಸ್

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಚಂದ್ರಪ್ರಕಾಶ್‌ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್‌‍ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು,

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ, ಆತನ ತಂದೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಕಳೆದ ಅ.14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದ ಹಿನ್ನೆಲೆ ಏರ್‌ ಇಂಡಿಯಾ ವಿಮಾನವನ್ನು ನವದೆಹಲಿಯಲ್ಲಿ ಇಳಿಸಿ ತಪಾಸಣೆ ನಡೆಸಲಾಗಿತ್ತು. ಆದರೆ, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾದ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 16. ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಗ್ಗೆ 11:30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಆರ್ಟಿಕಲ್ 370 ರದ್ಧತಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಜಪ್ತಿಯಾಗಿದ್ದ ಮನೆಯ ಸಾಲ ತೀರಿಸಿ ಮಾನವೀಯತೆ ಮೆರೆದ ಯೂಸುಫ್ ಅಲಿ..!

(ನ್ಯೂಸ್ ಕಡಬ) newskadaba.com ಅ. 16. ಬ್ಯಾಂಕ್ ಸಾಲ ಸಂಪೂರ್ಣ ಕಟ್ಟಿ ಮನೆ ಉಳಿಸಿಕೊಡುವ ಮೂಲಕ ಬೀದಿಪಾಲಾಗುತ್ತಿದ್ದ ಕುಟುಂಬವನ್ನು ರಕ್ಷಿಸಿ ಲುಲು ಗ್ರೂಪ್ ಮಾಲೀಕ, ಉದ್ಯಮಿ ಯೂಸುಫ್ ಅಲಿ ಮಾನವೀಯತೆ ಮೆರೆದಿರುವ ಕುರಿತು ವರದಿಯಾಗಿದೆ. ಕೇರಳದ ಉತ್ತರ ಪರವೂರ್ ನ ಮಡಪ್ಲತುರಥ್ ಎಂಬಲ್ಲಿ ಸ್ಥಳೀಯ ನಿವಾಸಿ ಸಂಧ್ಯಾ ಮತ್ತು ಪತಿ 2019ರಲ್ಲಿ ಮನೆ ಕಟ್ಟಲು ಮಣಪ್ಪುರಂ ಹಣಕಾಸು ಸಂಸ್ಥೆಯಿಂದ 4 ಲಕ್ಷ ರೂ. ಸಾಲ ಪಡೆದಿದ್ದರು. 4.8 ಸೆಂಟ್ ಜಾಗದಲ್ಲಿ ಮನೆ ಕಟ್ಟಿಕೊಂಡು ಕುಟುಂಬ ಜೀವನ ನಡೆಸುತ್ತಿತ್ತು.

ಜಪ್ತಿಯಾಗಿದ್ದ ಮನೆಯ ಸಾಲ ತೀರಿಸಿ ಮಾನವೀಯತೆ ಮೆರೆದ ಯೂಸುಫ್ ಅಲಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಲಘು ವಾಹನಗಳಿಗಿಲ್ಲ ಟೋಲ್- ಸರಕಾರದಿಂದ ಮಹತ್ತರ ನಿರ್ಧಾರ

(ನ್ಯೂಸ್ ಕಡಬ) newskadaba.com ಅ. 15. ಇನ್ನೇನು ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಲು ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮಾಸ್ಟರ್ ಪ್ಲಾನ್ ಪ್ರಯೋಗಿಸಿದ್ದು, ಇನ್ಮುಂದೆ ಈ ಮಹಾನಗರವನ್ನು ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಇರೋದಿಲ್ಲ. ಈ ಕುರಿತು ಅಲ್ಲಿನ ಸರ್ಕಾರವೇ ಹೊಸ ನಿರ್ಧಾರವನ್ನು ಕೈಗೊಂಡಿರುವುದಾಗಿ ವರದಿಯಾಗಿದೆ. ಈ ಮೂಲಕ ಸೋಮವಾರ (ಅ.14) ಮಧ್ಯರಾತ್ರಿಯಿಂದ ಲಘು ಮೋಟಾರು ವಾಹನಗಳ ಮೂಲಕ ಮುಂಬೈಗೆ ಉಚಿತ ಟೋಲ್ ಪ್ರವೇಶವನ್ನು ಪಡೆಯಬಹುದು

ಇನ್ಮುಂದೆ ಲಘು ವಾಹನಗಳಿಗಿಲ್ಲ ಟೋಲ್- ಸರಕಾರದಿಂದ ಮಹತ್ತರ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top