ರಾಷ್ಟ್ರೀಯ ನ್ಯೂಸ್

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ:  ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆಯಡಿ ಪುನರ್ ಉತ್ಪಾದಿಸುವ ಇಂಧನ ವಲಯಕ್ಕೆ 500 ಕೋಟಿ ರೂಪಾಯಿ ಮೀಸಲಿರಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪಿಎಂ ಸೂರ್ಯ ಘರ್ ಯೋಜನೆಯಡಿ ಹೊಸ ಯೋಜನೆಗಳ ಅನುಷ್ಠಾನ ಮತ್ತು ಘಟಕಕ್ಕಾಗಿ ₹500 ಕೋಟಿ ಇರಿಸಿ ಮೊನ್ನೆಯಷ್ಟೇ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದ್ದಾರೆ. ಸ್ಕೀಮ್ ಕಾಂಪೊನೆಂಟ್ ‘ಇನ್ನೋವೇಟಿವ್ ಪ್ರಾಜೆಕ್ಟ್’ನಡಿ ರೂಫ್‌ಟಾಪ್ ಸೌರ ತಂತ್ರಜ್ಞಾನ, ವ್ಯವಹಾರ ಮಾದರಿಗಳು ಮತ್ತು ಏಕೀಕರಣ ತಂತ್ರಗಳಲ್ಲಿ ಪ್ರಗತಿಗೆ ಈ ಮೊತ್ತ

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು Read More »

ರಾಷ್ಟ್ರೀಯ ನ್ಯೂಸ್

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 12. ಕೆಲವು ತಿಂಗಳ ಹಿಂದೆ ಪಂಜಾಬ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಮುಖಂಡ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಸಂಘಟನೆ ಮುಖ್ಯಸ್ಥ ವಾಧವಾ ಸಿಂಗ್ ಮತ್ತು ಇತರ ಐವರು ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಏಪ್ರಿಲ್ 13ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್‌ನಲ್ಲಿರುವ ಅವರ ಮಿಠಾಯಿ ಅಂಗಡಿಯಲ್ಲಿ ಬಿಕೆಐ ಮಾಡ್ಯೂಲ್‌ಗೆ ಸೇರಿದ

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ವಿಶ್ವದ ಅತಿದೊಡ್ಡ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾವಿಗೆ ಬಿದ್ದ ಕಾರು- ದಂಪತಿ ಪವಾಡ ಸದೃಶ ಪಾರು

(ನ್ಯೂಸ್ ಕಡಬ) newskadaba.com ಅ. 12. ಯುವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರೊಂದು 15 ಅಡಿ ಆಳದ ಬಾವಿಗೆ ಬಿದ್ದಿದ್ದು, ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಕೊಚ್ಚಿಯ ಪಟ್ಟಿಮಟ್ಟಂ ಬಳಿ ನಡೆದಿದೆ. ಕಾರು ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಾಗ ಬಾವಿಯಲ್ಲಿ ಐದು ಅಡಿ ನೀರಿತ್ತು ಎಂದೆನ್ನಲಾಗಿದೆ. ಅಗ್ನಿಶಾಮಕ ಠಾಣೆಯ ಅಧಿಕಾರಿಯ ಪ್ರಕಾರ, ದಂಪತಿಗೆ ತಿಳಿದಿಲ್ಲದ ರಸ್ತೆಯಲ್ಲಿ ತಗ್ಗು ಇದ್ದುದರಿಂದ ಮತ್ತು ಕಾರು ಆ ದಾರಿಯಾಗಿ ಸಂಚರಿಸಿದಾಗ ನಿಯಂತ್ರಣ ತಪ್ಪಿ ಪಕ್ಕದ ಅಂಗಡಿಗೆ ಡಿಕ್ಕಿ ಹೊಡೆದು ನಂತರ ಹತ್ತಿರದ

ಬಾವಿಗೆ ಬಿದ್ದ ಕಾರು- ದಂಪತಿ ಪವಾಡ ಸದೃಶ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ)newskadaba.com, ಅ. 12 ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಿಸಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್

27 ಸಾವಿರ ಕೋಟಿ ವೆಚ್ಚದಲ್ಲಿ ಬಾಹ್ಯಾಕಾಶ ಕಣ್ಗಾವಲು ಯೋಜನೆಗೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 12. ಬಾಹ್ಯಾಕಾಶದಿಂದ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ಪೇಸ್ ಬೇಸ್ಡ್ ಸರ್ವೈವಲೆನ್ಸ್ (ಎಸ್ಬಿಎಸ್-3) ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ. ಈ ಯೋಜನೆಯಡಿ ಹಲವು ಬೇಹುಗಾರಿಕೆ ಉಪಗ್ರಹಗಳನ್ನು ಕೆಳ ಭೂ ಮತ್ತು ಭೌಗೋಳಿಕ ಕಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ. “ಇತ್ತೀಚೆಗೆ ನಡೆದ ಸಿಸಿಎಸ್ ಸಭೆಯಲ್ಲಿ ಎಸ್ಬಿಎಸ್-3 ಯೋಜನೆಯಡಿ 52 ಉಪಗ್ರಹಗಳನ್ನು ಉಡಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಸುಮಾರು 27

27 ಸಾವಿರ ಕೋಟಿ ವೆಚ್ಚದಲ್ಲಿ ಬಾಹ್ಯಾಕಾಶ ಕಣ್ಗಾವಲು ಯೋಜನೆಗೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚೆನೈ,ಅ. 12.  ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.   ಹಳಿತಪ್ಪಿದ ಬಾಗ್ಮತಿ ಎಕ್ಸ್‌ ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top