ರಾಷ್ಟ್ರೀಯ ನ್ಯೂಸ್

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ

(ನ್ಯೂಸ್ ಕಡಬ)newskadaba.com, ಅ. 09ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ‘ ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ […]

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ: ಮಣಿಪುರದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್‌ ಪೂರ್ವ ಜಿಲ್ಲೆಯ ಚಂಪೈ ಬೆಟ್ಟದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಎಂ-16 ರೈಫಲ್‌ ಮತ್ತು .22 ರೈಫಲ್‌‍, ಎರಡು ಎಸ್‌‍ಎಲ್‌ಆರ್‌, ಒಂದು ದೇಶ ನಿರ್ಮಿತ ಸ್ಟೆನ್‌ ಗನ್‌‍, ಎರಡು ಕಾರ್ಬೈನ್‌ಗಳು, ಎಂಟು ದೇಶೀಯ ನಿರ್ಮಿತ 9 ಎಂಎಂ ಪಿಸ್ತೂಲ್‌ಗಳು, ಮೂವತ್ತು ವ್ಯಾಗಜೀನ್‌ಗಳನ್ನು ವಶಪಡಿಸಿಕೊಂಡಿವೆ.   ಮಂಗಳವಾರ ಇಂಫಾಲ್‌

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ರಾಷ್ಟ್ರೀಯ ನ್ಯೂಸ್

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು

(ನ್ಯೂಸ್ ಕಡಬ) newskadaba.com ಅ. 09. ಹರಿಯಾಣದಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆಯಾದ ಬಳಿಕ ಕಾಂಗ್ರೆಸ್ ನಾಯಕರು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ನೀಡಿ ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.   20 ಸ್ಥಾನಗಳಲ್ಲಿ ಹ್ಯಾಕಿಂಗ್ ನಡೆದಿದೆ ಎಂದು ಪಕ್ಷದ ವಕ್ತಾರ ಪವನ್ ಖೇರಾ ಆರೋಪಿಸಿದ್ದಾರೆ. ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ಅವರು ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ನೀಡಿದ್ದಾರೆ.  ಇನ್ನುಳಿದ 13 ಕ್ಷೇತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು 48 ಗಂಟೆಯೊಳಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು Read More »

ರಾಷ್ಟ್ರೀಯ ನ್ಯೂಸ್

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಅ. 09. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆದಿದ್ದು, ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಚಿತ್ರದ ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರಪ್ರಶಸ್ತಿ ದಕ್ಕಿದ್ದು,

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 09. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ86 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು,

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಟಾಟಾ ಟ್ರಸ್ಟ್ನ ಮುಖ್ಯ ಕಾರ್ಯ ನಿರ್ವಾಹಕ ಸಿದ್ಧಾರ್ಥ್ ಶರ್ಮಾ ಅವರು “ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ” ಎಂದು ಹೇಳಿದ್ದಾರೆ. ಟಾಟಾ ಸಮೂಹಗಳಲ್ಲಿ ಕಾರ್ಯ ನಿರ್ವ ಹಿಸುವ ಪ್ರತಿಯೊಬ್ಬರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಶರ್ಮಾ ತಿಳಿಸಿದ್ದಾರೆ. ಟಾಟಾ ಟ್ರಸ್ಟ್ ಲಾಭೋದ್ದೇಶವಿಲ್ಲದ ಸಮೂಹವಾಗಿದ್ದು, ಉಪ್ಪಿನಿಂದ ಸಾಫ್ಟವೇರ್‌ ಉದ್ಯಮದವರೆಗೂ ಮುಂ‍ಚುಣಿಯಲ್ಲಿದೆ. ಟಾಟಾ ಟ್ರಸ್ಟ್‌ ಅಧ್ಯಕ್ಷರಾಗಿದ್ದ ರತನ್ ಟಾಟಾ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣಕ್ಕೆ

ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ Read More »

ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ  ಸಮೂಹದ ಮುಖ್ಯಸ್ಥ ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ರಾಜ್ಯದ ಪ್ರಮುಖ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಅ.10. ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಯೋಸಹಜ ಖಾಯಿಲೆಯಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರನ್ನು ಕಳೆದ ಸೋಮವಾರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿದ್ದ ರತನ್

ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’- ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಹರಿಯಾಣ ಸೋಲಿನ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,

‘ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’- ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..!

(ನ್ಯೂಸ್ ಕಡಬ)newskadaba.com ಶ್ರೀನಗರ, ಅ. 09. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ದಕ್ಷಿಣ ಕಾಶ್ಮೀರದ ಕೋಕರ್‌ನಾಗ್ ಅರಣ್ಯದಲ್ಲಿ ರಾತ್ರೋರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 26 ವರ್ಷದ ಪ್ರಾದೇಶಿಕ ಸೇನಾ ಸಿಬ್ಬಂದಿಯನ್ನು ಅಪಹರಿಸಿದ್ದರು ಎಂದು ಸೇನೆ ಇಂದು ದೃಢಪಡಿಸಿದೆ.

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top