ರಾಷ್ಟ್ರೀಯ ನ್ಯೂಸ್

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಸೆ. 25. ಮುಂಬರುವ ಅಕ್ಟೋಬರ್ ತಿಂಗಳ 3ನೇ ತಾರೀಕಿನಂದು ಯುಎಇ ನಲ್ಲಿ ಈ ಬಾರಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪ್ರಾರಂಭಗೊಳ್ಳಲಿದ್ದು, ಇದಕ್ಕಾಗಿ ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ನ್ನು ಬಿಡುಗಡೆ ಮಾಡಿದೆ. ‘ವಾಟ್ ಎವರ್ ಇಟ್ ಟೇಕ್ಸ್’ ಎನ್ನುವ ಸಾಹಿತ್ಯದೊಂದಿಗೆ ಆ್ಯಂಥಮ್ ಸಾಂಗ್ ಪ್ರಾರಂಭವಾಗಲಿದ್ದು, ಆಲ್-ಗರ್ಲ್ ಪಾಪ್ ಗ್ರೂಪ್ W.i.S.H ತಂಡವರು ಈ ಹಾಡನ್ನು ಹಾಡಿದ್ದಾರೆ. ಇನ್ನು ಈ ಹಾಡಿಗೆ ಮೈಕಿ ಮೆಕ್‌ಕ್ಲಿಯರಿ, ಪಾರ್ಥ್ ಪರೇಖ್ ಮತ್ತು W.i.S.H ಟೀಮ್ ಸಂಗೀತ […]

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..!

(ನ್ಯೂಸ್ ಕಡಬ) newskadaba.com ಚೆನ್ನೈ (ಸೆ.25) :ಚೆನ್ನೈನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನದ ರೆಕ್ಕೆ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ ರಾತ್ರಿ 9.15 ಕ್ಕೆ ಹೊಗೆ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವಿಮಾನದ ಸಿಬ್ಬಂದಿ ಮತ್ತು ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲಿಸಿದರು ಮತ್ತು ಅಗ್ನಿಶಾಮಕ ಸಿಬ್ಭಂದಿ ಬಂದು ಸುಮಾರು 10 ನಿಮಿಷ ಕಾರ್ಯಾಚರಣೆ ನಡೆಸಿದರು. ವಿಮಾನ ಹೊರಡುವ ಮುನ್ನ, ರೆಕ್ಕೆ ಭಾಗದಿಂದ ಹೊಗೆ ಹೊರಹೊಮ್ಮಿತು ಕೂಡಲೆ ವಿಮಾನ ನಿಲ್ಲಿಸಿ

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.    

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ರದ್ದಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು’- ಕಂಗನಾ ರಣಾವತ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಭಾರತೀಯ ಜನತಾ ಪಕ್ಷದ ನಾಯಕಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳ ಸಂಬಂಧ ನೀಡಿದ ಹೇಳಿಕೆಯನ್ನು ಕೇಂದ್ರದಲ್ಲಿ ಆಡಳಿತಾರೂಢ ಪಕ್ಷವೇ ಅಲ್ಲಗಳೆದ್ದಿದೆ. ರೈತರ ಪ್ರತಿಭಟನೆ ಬಳಿಕ ರದ್ದುಪಡಿಸಲಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಹೇಳಿಕೆ ನೀಡುವ ಮೂಲಕ ಕಂಗನಾ ರಣಾವತ್ ರೈತರ ಕೆಂಗಣ್ಣಿಗೆ ಗುರಿಯಾಗಿದ್ದರು. “ರೈತರು ಸ್ವತಃ ತಾವೇ ಈ ಬೇಡಿಕೆ ಮುಂದಿಡಬೇಕು” ಎಂದು ಕಂಗನಾ ಹೇಳಿದ್ದಾರೆ.

‘ರದ್ದಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು’- ಕಂಗನಾ ರಣಾವತ್ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ ಚುನಾವಣೆ: 2ನೇ ಹಂತದ ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 25. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ 26 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. 40 ವಿಧಾನಸಭಾ ಸ್ಥಾನಗಳಿಗೆ ಮೂರನೇ ಹಂತದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದ್ದು,

ಜಮ್ಮು-ಕಾಶ್ಮೀರ ಚುನಾವಣೆ: 2ನೇ ಹಂತದ ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25): ಚಿನ್ನದ ಬೆಲೆಯ ಏರಿಕೆಯು ಮುಂದುವರೆದಿದೆ. ಷೇರುಮಾರುಕಟ್ಟೆ ಹೊಸ ದಾಖಲೆ ಎತ್ತರಕ್ಕೆ ಹೋದಂತೆ ಚಿನ್ನದ ಬೆಲೆಯೂ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ. ಭಾರತದಲ್ಲಿ ಅಪರಂಜಿ ಚಿನ್ನ ಮೊದಲ ಬಾರಿಗೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈನಲ್ಲಿ ಕಡಿಮೆ ಆದರೂ ಚೆನ್ನೈ, ಕೇರಳ ಮೊದಲಾದೆಡೆ ಹೊಸ ಏರಿಕೆ ದಾಟಿದೆ. ಅಲ್ಲೆಲ್ಲಾ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ 87 ರೂ ಬೆಲೆ ಮುಂದುವರಿದಿದೆ. ಉಳಿದ ಕಡೆ 95 ರೂ

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಸೆ. 25. 70 ವರ್ಷದ ಅಂಗವಿಕಲ ವೃದ್ದೆಯೊಬ್ಬರು ತಮ್ಮ ವೃದ್ಧಾಪ್ಯ ಪಿಂಚಣಿ ಪಡೆಯಲು ಸ್ಥಳೀಯ ಪಂಚಾಯತ್ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ತೆವಳಿಕೊಂಡು ಹೋದ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಹಿಳೆ ತೆವಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪತುರಿ ದೆಹುರಿ ಎಂಬ ಹೆಸರಿನ ವೃದ್ಧ ಮಹಿಳೆ ಜೀವನೋಪಾಯಕ್ಕಾಗಿ ತನ್ನ ಪಿಂಚಣಿಯನ್ನೇ ಅವಲಂಬಿಸಿದ್ದಾರೆ. ಅವರಿಗೆ ಈ ಹಿಂದೆ ನಡೆದ ಅಪಘಾತದಿಂದ ಅಂಗವೈಕಲ್ಯ ಉಂಟಾಗಿ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ದೇಶದಲ್ಲಿ ಆಧಾರ್‌ ನಷ್ಟೇ ಇನ್ನೊಂದು ಪ್ರಮುಖ ಗುರುತಿನ ಚೀಟಿ ಎಂದರೆ ಅದು ಪ್ಯಾನ್‌ ಕಾರ್ಡ್‌. ಪರ್ಮನೆಂಟ್‌ ಅಕೌಂಟ್‌ ನಂಬರ್‌ ಅನ್ನು ದೇಶದಲ್ಲಿ ಇದುವರೆಗೆ ಕಡ್ಡಾಯಗೊಳಿಸದಿದ್ದರೂ ಆರ್ಥಿಕ ವ್ಯವಹಾರಗಳಿಗೆ ಅತ್ಯಗತ್ಯ ದಾಖಲೆ ಎನಿಸಿಕೊಂಡಿದೆ. ಆದಾಯ ತೆರಿಗೆ ಇಲಾಖೆ ನೀಡುವ 10 ಅಂಕಿಗಳ ವಿಶಿಷ್ಟ ಗುರುತಿನ ಚೀಟಿ ಮುಖ್ಯವಾಗುತ್ತದೆ. ಅದಾಗ್ಯೂ ನೀವು ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ ಭಾರಿ ದಂಡ ಪಾವತಿಸಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..! Read More »

ರಾಷ್ಟ್ರೀಯ ನ್ಯೂಸ್
Scroll to Top