ರಾಷ್ಟ್ರೀಯ ನ್ಯೂಸ್

crime, arrest, suspected

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯಕ್ಕೆ ಜಮ್ಮು-ಕಾಶ್ಮೀರದಿಂದ ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಸಂಚು ರೂಪಿಸಿ ಹಳಿಗಳುದ್ದಕ್ಕೂ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸಿಬ್ಬಂದಿಯೋರ್ವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಶಬೀರ್‌ ಎಂದು ಗುರುತಿಸಲಾಗಿದ್ದು, ಈತ ಮಧ್ಯಪ್ರದೇಶದಲ್ಲಿ ರೈಲ್ವೇ ಹಳಿಗಳ ಮೇಲೆ 10 ಸ್ಫೋಟಕ ವಸ್ತುಗಳನ್ನು ಇಟ್ಟು, ರೈಲು ಸ್ಫೋಟಕ್ಕೆ ಸಂಚು ರೂಪಿಸಿದ್ದ. ಆದರೆ ಅದೃಷ್ಟವಶಾತ್‌ ರೈಲ್ವೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎನ್ನಲಾಗಿದೆ. ರೈಲ್ವೇ ಸಂರಕ್ಷಣಾ ಪಡೆ ಆರೋಪಿ […]

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ

(ನ್ಯೂಸ್ ಕಡಬ) newskadaba.com  ಸೆ. 24. ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಒಂದರ ಹಿಂದೆ ಒಂದು ಕಂಪನಿಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಮಧ್ಯೆ ಹೊಸ ಹೊಸ ಕಂಪನಿಗಳು ಸೃಷ್ಟಿಯಾಗುತ್ತಿದ್ದು, ಇದೀಗ ‘ಶಂಖ್ ಏರ್’ ಎಂಬ ಏರ್ ಲೈನ್ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯವು ಅನುಮೋದನೆ ನೀಡಿದೆ. ವಿಮಾನಯಾನ ಮಹಾ ನಿರ್ದೇಶನಾಲಯದಿಂದ (ಡಿಸಿಸಿಎ) ಒಪ್ಪಿಗೆ ಮುದ್ರೆ ಪಡೆದ ಬಳಿಕ ಶಂಖ್ ಏರ್ ವಿಮಾನ ಹಾರಾಟ ಕಾರ್ಯಾರಂಭಿಸಬಹುದು. ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ನಡೆಸಲು ಮೂರು ವರ್ಷಗಳಿಗೆ ನಿರಾಕ್ಷೇಪಣ ಪತ್ರ  ನೀಡಲಾಗಿದೆ.

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ- ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 24. ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸೆಪ್ಟೆಂಬರ್ 30ರೊಳಗೆ ತಮ್ಮ ಚರ ಹಾಗೂ ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದೇಶವನ್ನು ಪಾಲಿಸುತ್ತಿರುವ ನೌಕರರನ್ನು ಸಕಾಲದಲ್ಲಿ ಪರಿಶೀಲಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿ (ಡಿಡಿಒ) ಅವರಿಗೆ ವಹಿಸಿದೆ. ಪೋರ್ಟಲ್‌ ನಲ್ಲಿ ತಮ್ಮ ಆಸ್ತಿ ವಿವರಗಳನ್ನು ಒದಗಿಸುವ ಉದ್ಯೋಗಿಗಳಿಗೆ ಮಾತ್ರ ಸೆಪ್ಟೆಂಬರ್ ಸಂಬಳವನ್ನು ನೀಡಲಾಗುತ್ತದೆ. ಕೆಲವು ನೌಕರರು ಹೆಚ್ಚಿನ

ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ- ರಾಜ್ಯ ಸರ್ಕಾರ ಆದೇಶ Read More »

ರಾಷ್ಟ್ರೀಯ ನ್ಯೂಸ್

ಶಸ್ತ್ರಾಸ್ತ್ರ ತ್ಯಜಿಸಿ ಶರಾಣಗತಿಗೆ ಸಜ್ಜಾದ 400 ಉಗ್ರರು..!

(ನ್ಯೂಸ್ ಕಡಬ) newskadaba.com ಸೆ. 24. ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ ಗೆ ಸೇರಿದವರೆನ್ನಲಾದ ತ್ರಿಪುರಾದ ಸುಮಾರು 400 ಉಗ್ರರು ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ವರದಿಯಾಗಿದೆ. ಈ ಎರಡು ಸಂಘಟನೆಗಳು ಸುಮಾರು 400 ಉಗ್ರಗಾಮಿಗಳು ಜಂಪೂಯಿಜಾಲಾದಲ್ಲಿರುವ ತ್ರಿಪುರಾ ಸ್ಟೇಟ್ ರೈಫಲ್ಸ್ ನ 7 ನೇ ಬೆಟಾಲಿಯನ್‌ನ ಪ್ರಧಾನ ಕಛೇರಿಯಲ್ಲಿ ಸಿಎಂ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು

ಶಸ್ತ್ರಾಸ್ತ್ರ ತ್ಯಜಿಸಿ ಶರಾಣಗತಿಗೆ ಸಜ್ಜಾದ 400 ಉಗ್ರರು..! Read More »

ರಾಷ್ಟ್ರೀಯ ನ್ಯೂಸ್

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ಚೆನ್ನೈ ಸೆ.23: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಪಾಠಗಳನ್ನು ಬೋಧಿಸುವಂತೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಲೇಜು ಮತ್ತು ವಿವಿಗಳಿಗೆ ಕರೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಆಂತರಿಕ ಬಲವನ್ನು ಹೆಚ್ಚಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಪುಣೆಯ ಅರ್ನಸ್ಟ್ ಆ್ಯಂಡ್ ಯಂಗ್ (EY) ಕಂಪನಿಯ ಲೆಕ್ಕ ಪರಿಶೋಧಕಿ ಅನ್ನಾ ಸೆಬಾಸ್ಟಿನ್ ಪೆರಾಯ (26) ಅವರ ಸಾವಿನ ಹಿನ್ನೆಲೆಯಲ್ಲಿ ಸೀತಾರಾಮನ್ ಅವರ ಈ ಹೇಳಿಕೆ ಹೊರಬಿದ್ದಿದೆ. 2023ರಲ್ಲಿ ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ ಆಕೆ ನಾಲ್ಕು

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಪರಿಶೀಲನೆಗೆ ನೇಮಿಸಲಾಗಿದ್ದ ಸಂಸದೀಯ ಸಮಿತಿಯು 1.2 ಕೋಟಿ ಈಮೇಲ್ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.   ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯ ಜಂಟಿ ಸಮಿತಿಯು ಮಸೂದೆ ಪರ 75,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ. ಅಲ್ಲದೇ ಈಮೇಲ್ ಪ್ರತಿಕ್ರಿಯೆಗಳನ್ನು ವರ್ಗೀಕರಿಸಲು ಮತ್ತು ಪರಿಶೀಲಿಸಲು 15 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ಸಮಿತಿಯು ಕಳೆದ ತಿಂಗಳು ಸಾರ್ವಜನಿಕರಿಂದ,

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ*

(ನ್ಯೂಸ್ ಕಡಬ) newskadaba.com ಗುಜರಾತ್ ಸೆ.23: ಬಾಲಕಿಯು ತನ್ನ ಮೇಲಾಗುವ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಪ್ರತಿರೋಧಿಸಿದಾಗ ಸರಕಾರಿ ಶಾಲೆಯ ಪ್ರಾಂಶುಪಾಲರೊಬ್ಬರು ಹತ್ಯೆಗೈದಿರುವ ಘಟನೆ ಗುಜರಾತ್‌ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕಾರ ಆರೋಪಿ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೃತದೇಹವು ಸಿಂಗ್ವಾಡ ತಾಲ್ಲೂಕಿನಲ್ಲಿರುವ ಶಾಲಾ ಆವರಣದೊಳಗೆ ಗುರುವಾರ ಪತ್ತೆಯಾಗಿದ್ದು, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಬಾಲಕಿಯು ಪ್ರತಿರೋಧಿಸಿದ್ದರಿ ರಿಂದ ಪ್ರಾಂಶುಪಾಲ ಗೋವಿಂದ್ ನಾಥ್ ಆಕೆಯನ್ನು

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ* Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ತಿರುಪತಿಯಲ್ಲಿ ಪ್ರಸಾದ ರೂಪದಲ್ಲಿ ಕೊಡಲಾಗುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳು ಕೇಳಿಬರುವ ಹಿನ್ನೆಲೆ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಕುರಿತು ವರದಿಯಾಗಿದೆ. ಆಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಸರಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುತ್ತಿದ್ದ ಲಡ್ಡಿಗೆ ಪ್ರಾಣಿಗಳ ಕೊಬ್ಬುಗಳನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು.

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೇರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯನಿರ್ವಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿ ಸ್ಥಾನಕ್ಕೆ ಕರೆತರುತ್ತಾರೆ ಎಂದು ಭಾವಿಸುತ್ತೇನೆ. ಅಲ್ಲಿಯವರೆಗೆ ಅವರ ಕುರ್ಚಿ ಸಿಎಂ ಕಚೇರಿಯಲ್ಲೇ

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ Read More »

ರಾಷ್ಟ್ರೀಯ ನ್ಯೂಸ್

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..!

(ನ್ಯೂಸ್ ಕಡಬ) newskadaba.com ಸೆ. 24. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕುರಿತು ವರದಿಯಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದ್ದು, ಗೊಲ್ಲಗುಡೆಂ ಪಂಚಾಯತ್‌ ವ್ಯಾಪ್ತಿಯ ಭಕ್ತೆಯೊಬ್ಬರು ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top