ಕ್ರೀಡಾ ನ್ಯೂಸ್

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ

  (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ : 2025 ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಗುರುವಾರ ಟೀಂ ಇಂಡಿಯಾ ಮುಂಬೈನಿಂದ ದುಬೈ ತಲುಪಿದೆ. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಏಷ್ಯಾಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ […]

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ

(ನ್ಯೂಸ್‌ ಕಡಬ) newskadaba.com,  ಸೆ.04 : ಕೇಂದ್ರ ಸರ್ಕಾರ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿಯಾಗಲಿವೆ. ನಗದು ಸಮೃದ್ಧ ಲೀಗ್ ಅನ್ನು ತಂಬಾಕು ಉತ್ಪನ್ನಗಳು ಮತ್ತು ಬೆಟ್ಟಿಂಗ್ ಸೇವೆಗಳ ಜೊತೆಗೆ ಐಷಾರಾಮಿ ಚಟುವಟಿಕೆ ವಿಭಾಗದಲ್ಲಿ ಇರಿಸಲಾಗಿದೆ. ಇದರ ಪರಿಣಾಮವಾಗಿ ಟಿಕೆಟ್‌ಗಳು ದುಬಾರಿಯಾಗಲಿವೆ. ಐಪಿಎಲ್ ಆವೃತ್ತಿಯು ಸಾಮಾನ್ಯವಾಗಿ ಮಾರ್ಚ್‌ನಿಂದ ಮೇವರೆಗೆ ನಡೆಯಲಿದ್ದು, ದೇಶದಾದ್ಯಂತ 74 ಪಂದ್ಯಗಳನ್ನು ಆಡಲಾಗುತ್ತದೆ. ಹಣಕಾಸು ಸಚಿವಾಲಯದ ಜಿಎಸ್‌ಟಿ

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ

(ನ್ಯೂಸ್‌ ಕಡಬ) newskadaba.com,  ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್  ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು  ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು. “ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿತು” ಎಂದು ಈ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಕೂಡ

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ

(ನ್ಯೂಸ್‌ ಕಡಬ) newskadaba.com,  ಸೆ.02 ಕೊಲಂಬೊ:ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 80 ಮೀಟರ್‌ಗಳವರೆಗಿನ ಬೌಂಡರಿ ಅಂತರವನ್ನು ಹೊಂದಿರುವ ಹತ್ತು ಸೆಂಟರ್ ವಿಕೆಟ್‌ಗಳನ್ನು ಒಳಗೊಂಡಂತೆ 48 ಎಕರೆಗಳಲ್ಲಿಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತದೆ. 40,000 ಪ್ರೇಕ್ಷಕರ ಸಾಮರ್ಥ್ಯವಿರಲಿದೆ. ಈ ಸ್ಟೇಡಿಯಂನಲ್ಲಿ ಈಜುಕೊಳ, ಮಲ್ಟಿ-ಪಾರ್ಲರ್ ಒಳಾಂಗಣ ಕ್ರೀಡಾಂಗಣ, ಸ್ಟಾರ್ ಕ್ಲಾಸ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಜತೆಗೆ ಶಾಪಿಂಗ್ ಮಾಲ್ ಮತ್ತು ಮನರಂಜನಾ ಸೌಲಭ್ಯಗಳು ಸೇರಿದೆ.  ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಯುದ್ಧಪೀಡಿತ ಜಾಫ್ನಾ ಪ್ರದೇಶದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ 2025: 122 ಕೋಟಿ ರೂ ಬಹುಮಾನ ಘೋಷಿಸಿದ ಐಸಿಸಿ

(ನ್ಯೂಸ್ ಕಡಬ) newskadaba.com ಸೆ. 01. ಇದೇ ಸೆಪ್ಟೆಂಬರ್ 30 ರಿಂದ ನವೆಂಬರ್ 2ರ ವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ದಾಖಲೆಯ 122.56 ಕೋಟಿ ರೂ. ಮೊತ್ತದ ಬಹುಮಾನ ಘೋಷಿಸಿದೆ. ಇದು ಈವರೆಗಿನ ಬಹುಮಾನಕ್ಕಿಂತ 297% ಹೆಚ್ಚಳವಾಗಿದೆ ಎಂದು ಐಸಿಸಿ ಅಧ್ಯಕ್ಷ ಜಯ್ ಶಾ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವಕಪ್ ಬಹುಮಾನದ ಒಟ್ಟು ಮೊತ್ತವನ್ನು 13.88 ಮಿಲಿಯನ್ ಅಂದ್ರೆ ಸರಿಸುಮಾರು 122.55

ಮಹಿಳಾ ಏಕದಿನ ವಿಶ್ವಕಪ್ 2025: 122 ಕೋಟಿ ರೂ ಬಹುಮಾನ ಘೋಷಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ವಿಶಾಖಪಟ್ಟಣಂ : ಕೇವಲ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವದಾದ್ಯಂತ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ ಇದೀಗ ಕಬಡ್ಡಿ ಅಂಗಳದಲ್ಲೂ ಕಾಣಿಸಿಕೊಂಡಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ವೈಭವ್ ಅವರನ್ನು ನೋಡಿದ ತಕ್ಷಣ ಅಭಿಮಾನಿಗಳ ಹರ್ಷೋದ್ಘಾರ

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.!

(ನ್ಯೂಸ್‌ ಕಡಬ) newskadaba.com ಆ. 29. ಭಾರತದ ತಾರಾ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಈ ಬಾರಿ ಡೈಮಂಡ್‌ ಲೀಗ್‌ ಫೈನಲ್‌ ಗೆಲ್ಲಲು ವಿಫಲರಾಗಿದ್ದಾರೆ. 2022ರಲ್ಲಿ ಚಾಂಪಿಯನ್‌ ಆಗಿದ್ದ ನೀರಜ್‌, ಸ್ವಿಜರ್‌ಲೆಂಡ್‌ನ ಜ್ಯುರಿಚ್‌ನಲ್ಲಿ ನಡೆದ 2025ರ ಫೈನಲ್‌ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದು ಅವರಿಗೆ ಸತತ 3ನೇ ಡೈಮಂಡ್‌ ಲೀಗ್‌ ಬೆಳ್ಳಿಯಾಗಿದೆ. 2022ರ ಫೈನಲ್‌ ಜ್ಯುರಿಚ್‌ನಲ್ಲೇ ನಡೆದಿತ್ತು. ಅದರಲ್ಲಿ ನೀರಜ್‌ ಚಿನ್ನ ಗೆದ್ದಿದ್ದರು. ಬಳಿಕ 2023, 2024ರ ಫೈನಲ್‌ಗಳಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ ಚಿನ್ನದ

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top