ಕ್ರೀಡಾ ನ್ಯೂಸ್

ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB

(ನ್ಯೂಸ್ ಕಡಬ) newskadaba.com ದುಬೈ, ಸೆ.29. ಐಪಿಎಲ್ ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 150 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅರ್ಧಶತಕದ ಸಹಾಯದಿಂದ ಆರ್’ಸಿಬಿ ಜಯವನ್ನು ದಾಖಲಿಸಿತು. ಇನಿಂಗ್ಸ್ ಆರಂಭಿಸಿದ ನಾಯಕ […]

ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

24 ಗಂಟೆಗಳಲ್ಲಿ 134 ಕಿಮೀ ಮ್ಯಾರಥಾನ್ ಓಡಿದ ಕಡಬದ ಹರೀಶ್ ಕರ್ಕೇರ ➤ ದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಓಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ಏಜೀಸ್ ಫೆಡರಲ್ ಲೈಫ್ ಇನ್ಸೂರೆನ್ಸ್ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 24 ಗಂಟೆಗಳ ಸ್ಟೇಡಿಯಂ ಓಟವನ್ನು ಪೂರ್ತಿಗೊಳಿಸಿ ಕಡಬದ ಹರೀಶ್ ಕರ್ಕೇರ ಅವರು ನವದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಮ್ಯಾರಥಾನ್ ಓಟಕ್ಕೆ ಆಯ್ಕೆಯಾಗಿದ್ದಾರೆ. ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಮುಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ – ಮೋಹಿನಿ ದಂಪತಿಯ ಪುತ್ರನಾಗಿರುವ ಹರೀಶ್ ಕರ್ಕೇರ ಅವರು 24 ಗಂಟೆಗಳಲ್ಲಿ 134 ಕಿಲೋಮೀಟರ್ ಓಟವನ್ನು ಪೂರ್ಣಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರು ಬೆಂಗಳೂರಿನ

24 ಗಂಟೆಗಳಲ್ಲಿ 134 ಕಿಮೀ ಮ್ಯಾರಥಾನ್ ಓಡಿದ ಕಡಬದ ಹರೀಶ್ ಕರ್ಕೇರ ➤ ದೆಹಲಿಯಲ್ಲಿ ನಡೆಯಲಿರುವ 36 ಗಂಟೆಗಳ ಓಟಕ್ಕೆ ಆಯ್ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಲಂಡನ್, ಆ.16. ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಾಟದಲ್ಲಿ ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಳ್ಳುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 272 ರನ್ ಗಳ ಗುರಿ ಹೊಂದಿದ್ದ ಇಂಗ್ಲೆಂಡ್ 51.5 ಓವರ್ ಗಳಲ್ಲಿ 120 ರನ್ ಗಳಿಸಿ ಆಲ್ಔಟ್ ಆಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.  

ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ Read More »

ಕ್ರೀಡಾ ನ್ಯೂಸ್

ಇಂದಿನಿಂದ ಜೂ.19ರ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರೀಯ NCC ಶಿಬಿರ ➤ ಮರ್ಕಂಜದ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.06. ಎನ್ಎಂಸಿ ಸುಳ್ಯದ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ.ಪಿ.ಯವರು ಉತ್ತರಕಾಶಿ, ಉತ್ತರಾಖಂಡದಲ್ಲಿ ಎನ್.ಸಿ.ಸಿ. ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ 19 ಕೆಎಆರ್ ಬೆಟಾಲಿಯನ್ , ಎನ್.ಸಿ.ಸಿ. ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿನಿ ಯಾಗಿದ್ದಾರೆ. 2021 ಜೂನ್ 6 ರಿಂದ ಜೂನ್ 19 ರವರೆಗೆ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಅಡ್ವೆಂಚರ್ಸ್ ಕೋರ್ಸ್ ಕ್ಯಾಂಪ್ ಇದಾಗಿದೆ. ಇವರಿಗೆ ಎನ್ಎಂಸಿ ಕಾಲೇಜಿನ ಎನ್.ಸಿ.ಸಿ ಘಟಕದ ಎಎನ್ಒ ಲೆಫ್ಟಿನೆಂಟ್ ಸೀತರಾಮ ಎಂ.ಡಿ.

ಇಂದಿನಿಂದ ಜೂ.19ರ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರೀಯ NCC ಶಿಬಿರ ➤ ಮರ್ಕಂಜದ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರ್ಧದಲ್ಲಿ ನಿಂತ ಐಪಿಎಲ್ ಪುನರಾರಂಭ ➤ ಬಿಸಿಸಿಐ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) Newskadaba.com ದೆಹಲಿ, ಮೇ. 26. ಕೊರೊನಾ ಎರಡನೇ ಅಲೆಯಿಂದಾಗಿ ಅರ್ಧದಲ್ಲಿ ಸ್ಥಗಿತಗೊಂಡಿರುವ 2021ನೇ ಐಪಿಎಲ್ ಆವೃತ್ತಿಯನ್ನು ಯುಎಇಯಲ್ಲಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14ನೇ‌‌ ಆವೃತ್ತಿ ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿರುವ ಈ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅರ್ಧದಲ್ಲೇ ನಿಂತು ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಶೆಯನ್ನು ನೀಗಿಸಲು ಬಿಸಿಸಿಐ ಚಿಂತಿಸುತ್ತಿರುವುದು

ಅರ್ಧದಲ್ಲಿ ನಿಂತ ಐಪಿಎಲ್ ಪುನರಾರಂಭ ➤ ಬಿಸಿಸಿಐ ಮಹತ್ವದ ನಿರ್ಧಾರ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ ಬೆಥನಿ ಐಟಿಐ ರಜತೋತ್ಸವದ ಪ್ರಯುಕ್ತ ಶಟ್ಲ್ ಬ್ಯಾಡ್ಮಿಂಟನ್ ➤ ಮ್ಯಾನೇಜ್ಮೆಂಟ್ ತಂಡ ಪ್ರಥಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.19. ಬೆಥನಿ ಐಟಿಐನ ರಜತೋತ್ಸವದ ಪ್ರಯುಕ್ತ ಮ್ಯಾನೇಜ್ಮೆಂಟ್, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೋಸ್ಕರ ನಡೆಸಲ್ಪಟ್ಟ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರೆ|ಫಾ| ಡಾ| ವರ್ಗೀಸ್ ಕೈಪನಡುಕ್ಕ ಒಐಸಿ ಮತ್ತು ರೆ|ಫಾ। ಮ್ಯಾಥ್ಯೂ ಪ್ರಫುಲ್ ಒಐಸಿ ನೇತೃತ್ವದ ಮ್ಯಾನೇಜ್‌ಮೆಂಟ್ ತಂಡ ಪ್ರಥಮ ಸ್ಥಾನ ಗಳಿಸಿದೆ. ಕಿರಿಯ ತರಬೇತಿ ಅಧಿಕಾರಿಗಳಾದ ವಿನ್ಸೆಂಟ್ ಸಿ.ಎಸ್. ಮತ್ತು ಸುನಿಲ್ ಜೋಸೆಫ್ ನೇತೃತ್ವದ ತಂಡ ದ್ವಿತೀಯ ಹಾಗೂ ವಿದ್ಯಾರ್ಥಿಗಳಾದ ರಾಧಾಕೃಷ್ಣ ಮತ್ತು ಜಗದೀಶ್ ನೇತೃತ್ವದ ತಂಡ ತೃತೀಯ ಸ್ಥಾನ ಗಳಿಸಿದೆ ಎಂದು

ನೆಲ್ಯಾಡಿ ಬೆಥನಿ ಐಟಿಐ ರಜತೋತ್ಸವದ ಪ್ರಯುಕ್ತ ಶಟ್ಲ್ ಬ್ಯಾಡ್ಮಿಂಟನ್ ➤ ಮ್ಯಾನೇಜ್ಮೆಂಟ್ ತಂಡ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್

ಕೊರೋನಾ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಎ. 09) ಐಪಿಎಲ್ ಆರಂಭ ➤ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವೆ ಮೊದಲ ಪಂದ್ಯಾಟ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಎ. 09. ದಿನದಿಂದ ದಿನಕ್ಕೆ ಕೋವಿಡ್ ಹಾವಳಿ ಹೆಚ್ಚುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಬಂಧಗಳ ನಡುವೆಯೂ ಈ ಬಾರಿಯ ಐಪಿಎಲ್‌ ಇಂದಿನಿಂದ ಆರಂಭವಾಗಲಿದೆ. ಎಲ್ಲ ರೀತಿಯ ಸವಾಲುಗಳ ನಡುವೆಯೂ ಬಿಸಿಸಿಐ ಎ. 9ರಿಂದ ಮೇ 30ರ ವರೆಗೆ ಐಪಿಎಲ್ ಕೂಟವನ್ನು ನಡೆಸಲಿದೆ. ಇದರ ಉದ್ಘಾಟನೆಯು ಇಂದು ಚೆನ್ನೈಯಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ನಡೆಯಲಿದ್ದು, ಮೇ 30ರಂದು ಅಹಮದಾಬಾದ್‌ನ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಫೈನಲ್‌

ಕೊರೋನಾ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಎ. 09) ಐಪಿಎಲ್ ಆರಂಭ ➤ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವೆ ಮೊದಲ ಪಂದ್ಯಾಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 27. “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ಕಡಬ ಇದರ ವತಿಯಿಂದ ಶನಿವಾರ ಸಂಜೆ 6:30ಕ್ಕೆ ಕಡಬದ ಹಳೆ ಸ್ಟೇಷನ್ ಬಳಿ ಕಡಬ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾಟವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ಕಡಬ ತಾಲೂಕಿನ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕಡಬ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಆಟಗಾರರು ಮತ್ತು ಕ್ರೀಡಾಭಿಮಾನಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಹಾಗೂ

ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 22. ಕ್ಲಾಸಿಕ್ ಅರಂತೋಡು ಇದರ ಅಶ್ರಯದಲ್ಲಿ ಪ್ರಥಮ ವರ್ಷದ 60 ಕೆ.ಜಿ ವಿಭಾಗದ ಪುರುಷರ ಸೂರ್ಯ ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಭಾನುವಾರದಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಗಮಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವಾಧ್ಯಕ್ಷರಾದ ಡಾ.ಬಿ.ರಘು

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಕೊನೆಗೂ ಐಪಿಎಲ್ ಗೆ ಮುಹೂರ್ತ ಫಿಕ್ಸ್ ➤ ಎ. 09ರಿಂದ ಪ್ರಾರಂಭ, ಮೆ. 30ರಂದು ಮೋದಿ ಸ್ಟೇಡಿಯಂನಲ್ಲಿ ಅದ್ದೂರಿ ಫೈನಲ್

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 07. ಕಳೆದ ಬಾರಿ ಕೊರೋನಾ ಕಾರಣದಿಂದಾಗಿ ಕ್ರಿಕೆಟ್ ಪ್ರಿಯರಿಗೆ ವಂಚಿತವಾಗಿದ್ದ ಐಪಿಎಲ್ ಪಂದ್ಯಾವಳಿಯು ಈ ಬಾರಿ ಎಪ್ರಿಲ್ 9ರಿಂದ ಎಂದಿನ ಶೈಲಿಯಲ್ಲೇ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಭಾರತದ ವಿವಿಧ ನಗರಗಳಲ್ಲಿ ನಡೆಯುವ ಐಪಿಎಲ್ ಪಂದ್ಯಾಟದ ವೇಳಾಪಟ್ಟಿಯನ್ನು ಬಿಸಿಸಿಐ ಈಗಾಗಲೆ ಬಿಡುಗಡೆ ಮಾಡಿದೆ. ಎರಡು ವರ್ಷಗಳ ನಂತರ ಐಪಿಎಲ್ ಪಂದ್ಯಾಟ ಈ ಬಾರಿ ದೆಹಲಿ, ಚೆನ್ನೈ, ಬೆಂಗಳೂರು, ಕಲ್ಕತ್ತಾ, ಮುಂಬೈ ಹಾಗೂ ಅಹ್ಮದಾಬಾದ್ ನಗರದಲ್ಲಿ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಕೊನೆಗೂ ಐಪಿಎಲ್ ಗೆ ಮುಹೂರ್ತ ಫಿಕ್ಸ್ ➤ ಎ. 09ರಿಂದ ಪ್ರಾರಂಭ, ಮೆ. 30ರಂದು ಮೋದಿ ಸ್ಟೇಡಿಯಂನಲ್ಲಿ ಅದ್ದೂರಿ ಫೈನಲ್ Read More »

ಕ್ರೀಡಾ ನ್ಯೂಸ್
Scroll to Top