ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಜೂ.06 ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿದ್ದ ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ (6E-6283) ಹಕ್ಕಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದಾಗ ಹಕ್ಕಿ ಡಿಕ್ಕಿ ಹೊಡೆದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್ ವಿಮಾನವನ್ನು ಮತ್ತೆ ನಿಲ್ದಾಣಕ್ಕೆ ಮರಳಿಸಿದರು. ಬಳಿಕ ತಾಂತ್ರಿಕ ಸಿಬ್ಬಂದಿ ಏರ್‌ಬಸ್ ಎ321 ನಿಯೋ ವಿಮಾನದ ಎರಡೂ ಎಂಜಿನ್‌ಗಳು ಸೇರಿದಂತೆ ಅಗತ್ಯ ತಪಾಸಣೆ ನಡೆಸಿ, ಸುರಕ್ಷಿತವೆಂದು ಘೋಷಿಸಿದರು. ಸಂಜೆ 7:04ಕ್ಕೆ ಹೊರಡಬೇಕಿದ್ದ ವಿಮಾನವು ಈ ತಪಾಸಣೆಯಿಂದಾಗಿ ಒಂದು […]

ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್: ದೇಶದಲ್ಲೇ ಮೊದಲ ಬಾರಿಗೆ ‘ಎಥನಾಲ್ ಅಡುಗೆ ಸ್ಟವ್’ ಬಿಡುಗಡೆ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ: ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಪರ್ಯಾಯ ಮತ್ತು ಪರಿಸರಸ್ನೇಹಿ ಉಪಾಯವೊಂದನ್ನು ಪರಿಚಯಿಸಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಎಲ್‌ಪಿಜಿಗಿಂತ ಕಡಿಮೆ ವೆಚ್ಚದ ‘ಎಥನಾಲ್ ಆಧಾರಿತ ಅಡುಗೆ ಸ್ಟವ್’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಕಬ್ಬು, ಮೆಕ್ಕೆಜೋಳ ಮತ್ತು ಕೃಷಿ ಜೈವಿಕ ರಾಶಿಯಿಂದ ದೇಶೀಯವಾಗಿಯೇ ಎಥನಾಲ್ ಉತ್ಪಾದಿಸುವುದರಿಂದ, ವಿದೇಶಿ ಕಚ್ಚಾ ತೈಲ ಹಾಗೂ ಗ್ಯಾಸ್ ಆಮದಿನ ಮೇಲಿನ ಅವಲಂಬನೆ ತಪ್ಪಲಿದೆ. ಇದು

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್: ದೇಶದಲ್ಲೇ ಮೊದಲ ಬಾರಿಗೆ ‘ಎಥನಾಲ್ ಅಡುಗೆ ಸ್ಟವ್’ ಬಿಡುಗಡೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:  ಚಿನ್ನದ ಬೆಲೆಯಲ್ಲಿ ಇಂದು ಒಂದೇ ದಿನ ಭಾರಿ ಕುಸಿತ ಕಂಡುಬಂದಿದೆ. ಇಂದು 10 ಗ್ರಾಮ್ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹3,000 ಇಳಿಕೆಯಾಗಿದೆ. ಇದರೊಂದಿಗೆ ಪ್ರತಿ ಗ್ರಾಮ್ ಬೆಲೆ ₹15,273ಕ್ಕೆ ತಲುಪಿದೆ. ಕಳೆದ ಮೇ 30ರಂದು ಇದರ ಬೆಲೆ ₹15,784 ಇತ್ತು. ಸಾಮಾನ್ಯವಾಗಿ ಗ್ರಾಹಕರು ಖರೀದಿಸುವ 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲೂ ಭಾರಿ ಇಳಿಕೆಯಾಗಿದೆ. 10 ಗ್ರಾಮ್ 22 ಕ್ಯಾರಟ್ ಚಿನ್ನದ ದರದಲ್ಲಿ ಇಂದು ₹2,750

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! Read More »

ಕರಾವಳಿ

ಭಾರತದ ಇಂಧನ ಭದ್ರತೆಗೆ ದಾರಿದೀಪ: ‘ಆಯಿಲ್ ಇಂಡಿಯಾ’ ಸಾಧನೆ

  (ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ: ಭಾರತದ ಇಂಧನ ಸ್ವಾವಲಂಬನೆ ಮತ್ತು ಭದ್ರತೆಯ ಕನಸಿಗೆ ದಾರಿದೀಪವೆಂಬಂತೆ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದೆ. ಈ ಐತಿಹಾಸಿಕ ಮೈಲಿಗಲ್ಲು ಭವಿಷ್ಯದಲ್ಲಿ ವಿದೇಶಿ ಇಂಧನ ಆಮದಿನ ಮೇಲಿನ ಭಾರತದ ಅವಲಂಬನೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿದೆ. ಸರ್ಕಾರಿ ಸ್ವಾಮ್ಯದ ಪ್ರಮುಖ ಇಂಧನ ಸಂಸ್ಥೆಯಾದ ಆಯಿಲ್ ಇಂಡಿಯಾ ಲಿಮಿಟೆಡ್ ಈ ಮಹತ್ತರ ಪರಿಶೋಧನೆಯನ್ನು ಕೈಗೊಂಡಿದೆ. ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15

ಭಾರತದ ಇಂಧನ ಭದ್ರತೆಗೆ ದಾರಿದೀಪ: ‘ಆಯಿಲ್ ಇಂಡಿಯಾ’ ಸಾಧನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:ಭಾರತದ 20 ವರ್ಷದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಪ್ರತಿಷ್ಠಿತ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಸತತ ಸೋಲು ಕಂಡು ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ಅದ್ಭುತವಾಗಿ ಪುಟಿದೆದ್ದು ಸತತ 4 ಪಂದ್ಯಗಳನ್ನು ಗೆದ್ದರು.ಕೊನೆಯ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಕಡ್ಡಾಯವಾಗಿ ಗೆಲ್ಲಬೇಕಾದ ಒತ್ತಡದಲ್ಲೂ ಭರ್ಜರಿ ಜಯ ಸಾಧಿಸಿ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಕಾರ್ಲ್‌ಸನ್‌ಗೆ ‘ಡಬಲ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾತೆಗಾಗಿ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ ಅವರ ತಗಾದೆ ಬಳಿಕ ಮತ್ತೊಬ್ಬ ಸಚಿವರು ಸಿಡಿಮಿಡಿಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟುಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಸತೀಶ್‌ ಜಾರಕಿಹೊಳಿ ಲೋಕೋಪಯೋಗಿ ಖಾತೆ ಜೊತೆಗೆ ಅಥವಾ ಬದಲಾಗಿ ಸಮಾಜಕಲ್ಯಾಣ ಖಾತೆ ನೀಡುವಂತೆ ಒತ್ತಡ ಹೇರಿದ್ದು, ಕಾಂಗ್ರೆಸ್‌‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಮಾಜ ಕಲ್ಯಾಣ ಖಾತೆಯ ಮೇಲೆ ಸಚಿವ ಕೆ.ಎಚ್‌. ಮುನಿಯಪ್ಪ ಕೂಡ ಕಣ್ಣಿಟ್ಟಿದ್ದಾರೆ. ನಮಗೂ ಅದೇ ಖಾತೆ ಬೇಕೆಂದು ಸತೀಶ್‌ ಜಾರಕಿಹೊಳಿ, ಹೈಕಮಾಂಡ್‌

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿಗೆ ಅಧಿಕಾರವೇ ಇಲ್ಲ, ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ

(ನ್ಯೂಸ್‌ ಕಡಬ) newskadaba.com ಜೂ.06: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಖಾತೆ ಹಂಚಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಒಳಜಗಳದ ಕಾರಣದಿಂದ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದರು. ಅಲ್ಲದೆ, ಮುನಿಯಪ್ಪ ಕೂಡ ತಮ್ಮ

ಡಿಕೆಶಿಗೆ ಅಧಿಕಾರವೇ ಇಲ್ಲ, ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ Read More »

ಕರ್ನಾಟಕ

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಮಹಿಳೆಯೊಬ್ಬಳನ್ನು ಪೆರುಂಬಾವೂರ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಕರ್ನಾಟಕದ ಕೊಪ್ಪ ಮೂಲದ ರಾಧಾ (49) ಎಂದು ಗುರುತಿಸಲಾಗಿದೆ. ಪೆರುಂಬಾವೂರ್ ಪ್ರೈವೇಟ್ ಬಸ್ ಸ್ಟ್ಯಾಂಡ್‌ನಲ್ಲಿ ಬಸ್ ನಿಂತಾಗ ಪ್ರಯಾಣಿಕರು ಇಳಿಯುತ್ತಿದ್ದ ಸಂದರ್ಭ ಕೊಂಬನಾಡ್ ತೆಕ್ಕುಪುರಂ ನಿವಾಸಿಯೊಬ್ಬರ ಬ್ಯಾಗ್‌ನಲ್ಲಿದ್ದ ಹಣ, ಎಟಿಎಂ ಕಾರ್ಡ್ ಮತ್ತು ಪೆನ್‌ಡ್ರೈವ್ ಇದ್ದ ಪರ್ಸ್ ಅನ್ನು ಆರೋಪಿ ರಾಧಾ ಕದ್ದಿದ್ದಳು. ಈ ಕಳ್ಳತನದ ವಿಡಿಯೋ

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.      1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ Read More »

ಕರಾವಳಿ

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com ಜೂ. 06. ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್‌ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ.   ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top