ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!

(ನ್ಯೂಸ್‌ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ […]

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜೂ. 06) ಸಿಇಟಿ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಜೂ. 05. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶವನ್ನು ನಾಳೆ (ಜೂ.06) ಮಧ್ಯಾಹ್ನ 2 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರದಂದು ಪ್ರಕಟಣೆ ಹೊರಡಿಸಿರುವ ಅವರು, ಎ.23 ಮತ್ತು ಎ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ನಢೆದ ಸಿಇಟಿ ಪರೀಕ್ಷೆಗೆ 1,44,380 ಹುಡುಗರು,

ನಾಳೆ (ಜೂ. 06) ಸಿಇಟಿ ಫಲಿತಾಂಶ ಪ್ರಕಟ Read More »

ಕರ್ನಾಟಕ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ತಿಳಿಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾದ ಶ್ರೀ ಸುಬ್ರಾಯ ಬೈಪಡಿತ್ತಾಯ ಬಂಟ್ರ ಇವರು  ದೇಶಸೇವೆ ಮತ್ತು ಸಂಸ್ಕಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು.

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ವಿಶ್ವ ಪರಿಸರ ದಿನಾಚರಣೆಯನ್ನು ಕಡಬ ಪಟ್ಟಣ ಪಂಚಾಯತ್ ನ ಪನ್ಯ ವಾರ್ಡಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಸಸಿ ನೆಡುವ ಮುಖಾಂತರ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪನ್ಯ ವಾರ್ಡಿನ ಸದಸ್ಯರಾದ ಮಹಮ್ಮದ್ ಫೈಜಲ್, ಮಸೀದಿ ಅಧ್ಯಕ್ಷರಾದ ಶರೀಫ್ ಫೈಝಿ ಉಸ್ತಾದ್, ಖತೀಬರಾದ ರಝಾಕ್ ದಾರಿಮಿ ಉಸ್ತಾದ್, ಪನ್ಯ ವಾರ್ಡ್ ಅಧ್ಯಕ್ಷರಾದ ಹಮೀದ್ ಪನ್ಯ, ಇಂಥಿಯಾಜ್ ಪನ್ಯ, ಕಲೀಂ ಪನ್ಯ, ಇಬ್ರಾಹಿಂ ಪನ್ಯ, ಶಾಫಿ ಪನ್ಯ, ಖಾದರ್ ಪನ್ಯ, ಮುಸ್ತಫ ಪನ್ಯ,

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಜೂ.05:  ರಾಜ್ಯಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನೆರವೇರಿತು. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಜ್ಞಾನವಿ ಎನ್ 10ನೇ ತರಗತಿ ಮತ್ತು ಪ್ರಜ್ವಲ್ 9ನೇ ತರಗತಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ.ರೈ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.   ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

(ನ್ಯೂಸ್‌ ಕಡಬ) com,  ಜೂ.05: ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿರುವ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಶುತೋಷ್ ದೀಕ್ಷಿತ್ ಅವರು

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಜೂ.05: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 05. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡಿನ ರಾಜಕೀಯ ದಿಕ್ಕು ಮತ್ತು ಪಕ್ಷದ ಕಾರ್ಯತಂತ್ರದ ಕುರಿತು ಪಕ್ಷದ ನಾಯಕತ್ವದೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳೇ ತಮ್ಮ ನಿರ್ಧಾರಕ್ಕೆ ಕಾರಣ ಎಂದು ಹೇಳಿದ್ದಾರೆ.   ಈ ಕುರಿತು ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ಪಕ್ಷಕ್ಕೆ ಹೊರೆಯಾಗಲು ಅಥವಾ ತೊಂದರೆ ಉಂಟುಮಾಡಲು ಬಯಸದ ಕಾರಣ ಬಿಜೆಪಿಯಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top