ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!

(ನ್ಯೂಸ್‌ ಕಡಬ) newskadaba.com,  ಜೂ.05: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್‌ಗೆ ದೃಢವಾಗಿ ಆಗ್ರಹಿಸಿದೆ. ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ […]

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಜೂ.05: : ಅಮೆರಿಕ- ಇರಾನ್ ನಡುವೆ ಮುಂದುವರಿದ ಮಾತುಕತೆ, ಇತ್ತ ತೈಲ ಬೆಲೆ ಏರಿಕೆಯಿಮದಾಗಿ ಚಿನ್ನದ ಮೇಲೆ ನಿರಂತರವಾಗಿ ಒತ್ತಡ ಸೃಷ್ಟಿಯಾಗಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಸತತ ಕಳೆದ 10 ದಿನದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 5 2026 ಶುಕ್ರವಾರದಂದು, ಗ್ರಾಂ ಬೆಲೆಯಲ್ಲಿ 38 ರೂ ಕಡಿತವಾಗಿ, 15,573 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 380 ರೂ ಕಡಿತಗೊಂಡು,

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್

(ನ್ಯೂಸ್‌ ಕಡಬ) newskadaba.com,  ಜೂ.05: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ ಹೌದು. ನಮ್ಮಿಬ್ಬರ ಮಧ್ಯೆ

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು ಕೆಲಸ ಮಾಡುತ್ತಿರುವುದನ್ನ ಮೇಲ್ವಿಚಾರಣೆ ಮಾಡಿಕೊಂಡು ವಾಪಸ್‌ ಮನೆಗೆ ಮರಳುತ್ತಿದ್ದರು. ಈ ವೇಳೆ ಏಕಾಏಕಿ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂ. 5-7ರ ವರೆಗೆ ಕಾಸರಗೋಡು ಸಹಿತ ಕೇರಳದ ಏಳು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com,  ಜೂ.05: ಕಾಸರಗೋಡು ಸಹಿತ ರಾಜ್ಯದ ಏಳು ಜಿಲ್ಲೆಗಳಲ್ಲಿ ಜೂ.5 ರಿಂದ 7ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ, ಮಲಪ್ಪುರಂ, ಪಾಲ್ಘಾಟ್‌ ಮತ್ತು ತೃಶ್ಶೂರು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೇರಳದಲ್ಲಿ ಜೂ. 9ರ ಮಧ್ಯರಾತ್ರಿಯಿಂದ ಜು. 31ರ ಮಧ್ಯರಾತ್ರಿ ವರೆಗೆ ಯಾಂತ್ರೀಕೃತ ದೋಣಿಗಳು ಹಾಗೂ ಆಳ ಸಮುದ್ರ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಬೋಟುಗಳು ಜೂ. 9ರ ಒಳಗೆ ಕೇರಳದಿಂದ

ಜೂ. 5-7ರ ವರೆಗೆ ಕಾಸರಗೋಡು ಸಹಿತ ಕೇರಳದ ಏಳು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC

(ನ್ಯೂಸ್ ಕಡಬ) newskadaba.com ಜೂ. 05. ಇನ್ನುಮುಂದೆ ರೈಲು ಪ್ರಯಾಣಿಕರು ದೃಢೀಕೃತ ಟಿಕೆಟ್ ಕಾಯ್ದಿರಿಸುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಐಆರ್‌ಸಿಟಿಸಿ ಮೂರು ಕೋಟಿ ಸಂಶಯಾಸ್ಪದ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿರುವ ಕುರಿತು ವರದಿಯಾಗಿದೆ. ಇದೀಗ 800ಕ್ಕೂ ಅಧಿಕ ಪಾಕಶಾಲೆಗಳ ಮೇಲೆ 2,394 ಏಐ-ಆಧರಿತ ಕ್ಯಾಮೆರಾಗಳು ಕಣ್ಣಾವಲು ಇರಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ರೈಲ್ವೇ ಆಹಾರ ಅನೈರ್ಮಲ್ಯಕ್ಕೆ ಕಾರಣವಾಗುವ ಅಂಶಗಳನ್ನು ಪತ್ತೆ ಮಾಡಬಹುದಾಗಿದೆ. ಅಲ್ಲದೇ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಹೆಡ್‌ಕ್ಯಾಪ್ ಕಡ್ಡಾಯವಾಗಿ

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC Read More »

ರಾಷ್ಟ್ರೀಯ ನ್ಯೂಸ್

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

(ನ್ಯೂಸ್‌ ಕಡಬ) newskadaba.com,  ಜೂ.05: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026, ಕಲಂ 303(2) ಬಿಎನ್‌ಎಸ್-2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆಯ ವೇಳೆ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22)

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಹೊಸ ಕಟ್ಟಡವೊಂದರ ನಾಲ್ಕನೆ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರೊಬ್ಬರು ಮೃತಪಟ್ಟ ಘಟನೆ ಮಂಗಳೂರು ಪದವಿನಂಗಡಿ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ ಪೂಜಾರಿ (45) ಎಂದು ಗುರುತಿಸಲಾಗಿದೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿದ್ದ ಸಂತೋಷ್ ಪೂಜಾರಿ ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರೂ ಆಗಿದ್ದರು. ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸಂತೋಷ್ ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಸಂತೋಷ್‌ರ ತಲೆಗೆ

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್

(ನ್ಯೂಸ್‌ ಕಡಬ) newskadaba.com,  ಜೂ.05: ಬುಧವಾರ (ಜೂನ್ 3) ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂತು, ಒಂದು ದಿನದ ನಂತರ ಖಾತೆ ಹಂಚಿಕೆಯಾಯಿತು. ಇದಾದ ಮರುದಿನವೇ, ಒಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಈಗ, ಇವರ ಹಿಂದೆಯೇ, ಇನ್ನೊಬ್ಬರು ಸಚಿವರು, ಬಹಿರಂಗವಾಗಿ ಅಸಮಾಧಾವನ್ನು ಹೊರಹಾಕಿದ್ದಾರೆ… ಬೆಂಗಳೂರು ಅಭಿವೃದ್ದಿ ಬಯಸಿದ್ದ ರಾಮಲಿಂಗಾ ರೆಡ್ಡಿಗೆ ಸಂಪದ್ಭರಿತ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ಕೃಷ್ಣ ಬೈರೇಗೌಡರಿಗೆ, ಬೆಂಗಳೂರು ಅಭಿವೃದ್ದಿ ನೀಡಲಾಗಿತ್ತು. ಇದಕ್ಕೆ ಬೇಸರ ವ್ಯಕ್ತ ಪಡಿಸಿ ರಾಮಲಿಂಗಾ ರೆಡ್ಡಿ ರಾಜೀನಾಮೆಯನ್ನು ನೀಡಿದ್ದಾರೆ. ಇವರ

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 05. ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ Read More »

ಕರಾವಳಿ
Scroll to Top