ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!
(ನ್ಯೂಸ್ ಕಡಬ) newskadaba.com, ಜೂ.05: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್ಗೆ ದೃಢವಾಗಿ ಆಗ್ರಹಿಸಿದೆ. ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ […]







