ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು

(ನ್ಯೂಸ್‌ ಕಡಬ) newskadaba.com, ಜೂ.04: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ ಆನ್‌ಲೈನ್ ಕೌಶಲ್ಯದ ಆಟಗಳ ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ […]

ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅರಣ್ಯ ಅಧಿಕಾರಿ ಜೀಪ್‌ ಕಳವು – ಆರೋಪಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com, ಜೂ.04: ಪಡೀಲ್‌ನ ಅರಣ್ಯ ಇಲಾಖೆಯ ವಸತಿ ಗೃಹದ ಬಳಿ ನಿಲ್ಲಿಸಿದ್ದ ಅರಣ್ಯ ಸಂಚಾರಿದಳದ RFO ಜೀಪನ್ನು ಕದ್ದು ಕುಂದಾಪುರದತ್ತ ತೆಗೆದು ಕೊಂಡು ಹೋಗಿದ್ದ ವಿದೇಶದಲ್ಲಿ ಉದ್ಯೋದಲ್ಲಿದ್ದ ಆರೋಪಿಯನ್ನು ಕುಂದಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಕೋಟೇಶ್ವರ ಸಮೀಪದ ಮೂಡುಗೋಪಾಡಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ ನದೀಮ್ (23) ಬಂಧಿತ ಆರೋಪಿ. ಘಟನೆ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು : ಅರಣ್ಯ ಅಧಿಕಾರಿ ಜೀಪ್‌ ಕಳವು – ಆರೋಪಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ರದ್ದು ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್

(ನ್ಯೂಸ್‌ ಕಡಬ) newskadaba.com, ಜೂ.04: ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್: ಸರ್ಕಾರಿ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ಸಂಪೂರ್ಣ ರದ್ದು!   ನವದೆಹಲಿ: ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ವಿದೇಶಿ ಬಂಡವಾಳವನ್ನು ದೊಡ್ಡ ಪ್ರಮಾಣದಲ್ಲಿ ಆಕರ್ಷಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಭಾರತೀಯ ಸರ್ಕಾರಿ ಬಾಂಡ್‌ಗಳಲ್ಲಿ (Government Securities – G-Secs) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ಬಂಡವಾಳ ಲಾಭ ತೆರಿಗೆಯನ್ನು (Capital Gains Tax)

ಭಾರತೀಯ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ರದ್ದು ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲ ಎದುರಿಸಲು ಮೆಸ್ಕಾಂ ಸಜ್ಜು- 489 ಮಂದಿಯ ವಿಶೇಷ ಕಾರ್ಯಪಡೆ ನಿಯೋಜನೆ

(ನ್ಯೂಸ್ ಕಡಬ) newskadaba.com ಜೂ. 04.  ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯದ ಸವಾಲುಗಳನ್ನು ಎದುರಿಸಲು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಸನ್ನದ್ಧವಾಗಿದ್ದು, ಮೆಸ್ಕಾಂ ವ್ಯಾಪ್ತಿಗೆ ಬರುವ ನಾಲ್ಕು ಜಿಲ್ಲೆಗಳ 14 ವಿಭಾಗಗಳಲ್ಲಿ ಒಟ್ಟು 489 ಸಿಬ್ಬಂದಿಗಳನ್ನು ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲು ಕಾರ್ಯಪಡೆಗಳಲ್ಲಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 62 ವಾಹನಗಳ ವ್ಯವಸ್ಥೆ ಮಾಡಲಾಗಿದೆ ಮತ್ತು ದೂರವಾಣಿ ಕರೆಗಳು ಮತ್ತು ದೂರುಗಳನ್ನು ನಿರ್ವಹಿಸಲು 23 ಸಿಬ್ಬಂದಿಯ ವಿಶೇಷ ತಂಡವನ್ನು ರಚಿಸಲಾಗಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುರ್ತು ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಅತ್ತಾವರದಲ್ಲಿ

ಮಳೆಗಾಲ ಎದುರಿಸಲು ಮೆಸ್ಕಾಂ ಸಜ್ಜು- 489 ಮಂದಿಯ ವಿಶೇಷ ಕಾರ್ಯಪಡೆ ನಿಯೋಜನೆ Read More »

ಕರಾವಳಿ

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

(ನ್ಯೂಸ್‌ ಕಡಬ) newskadaba.com, ಜೂ.04: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್‌.ಅನುರಾಧ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆಯ

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಂಸ್ಕೃತಿಕ ತಂಡಗಳಿಗೆ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಅವಕಾಶ

(ನ್ಯೂಸ್ ಕಡಬ) newskadaba.com ಜೂ. 04.  ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (Indian Council Cultural Relations) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಐ.ಸಿ.ಸಿ.ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾ ತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ (Empanel) ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು

ಸಾಂಸ್ಕೃತಿಕ ತಂಡಗಳಿಗೆ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಅವಕಾಶ Read More »

ಕರಾವಳಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 04.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು  ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ Read More »

ಕರ್ನಾಟಕ

ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 04.  2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಾಗಿದೆ. ಕೋರ್ಸ್ ವಿವರ ಮತ್ತು ಪ್ರೋತ್ಸಾಹಧನ ಮೊತ್ತ ಎಸ್.ಎಸ್.ಎಲ್.ಸಿ ಯಲ್ಲಿ  ಶೇ.60 ರಿಂದ 74.99 ಅಂಕ ಪಡೆದವರಿಗೆ 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ, ಪಿ.ಯು.ಸಿ, ಪಾಲಿಟೆಕ್ನಿಕ್ ಡಿಪ್ಲೊಮಾ- 20 ಸಾವಿರ,  ಪದವಿ( ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಬಿ.ಪಿ.ಎಡ್- 25

ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ

(ನ್ಯೂಸ್‌ ಕಡಬ) newskadaba.com, ಜೂ.04: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿರಿಯ ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಈ ಬಾರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡಲು ವಿಫಲವಾಗಿದೆ. ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರ ಹೆಸರು ಸಂಭಾವ್ಯ

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ

(ನ್ಯೂಸ್‌ ಕಡಬ) newskadaba.com, ಜೂ.04: ತೈಲ ಬೆಲೆಗಳು ಭಾರಿ ಏರಿಕೆಯಾಗಿವೆ. ಇದರಿಂದ ಡಾಲರ್ ಮೌಲ್ಯವೂ ಬಲಗೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗಳ ಈ ಬೆಳವಣಿಗೆಗಳು ಚಿನ್ನ ಬೆಳ್ಳಿ ಬೆಲೆ ಮೇಲೆ ಒತ್ತಡ ಸೃಷ್ಟಿಸಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 4 2026 ಗುರುವಾರದಂದು, 24 ಕ್ಯಾರೆಟ್ 10 ಗ್ರಾಂ ಬೆಲೆ 1,56,110 ರೂಪಾಯಿ ದಾಖಲಾಗಿದೆ. 1 ಗ್ರಾಂ ಬೆಲೆ, 15,611 ರೂ ದಾಖಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನದ

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top