ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.23: ಶನಿವಾರ ಬೆಳಗ್ಗೆ ಪ್ರತಿ ಲೀಟರ್‌ ಪೆಟ್ರೋಲ್‌ ದರ 87 ಪೈಸೆ ಮತ್ತು ಡೀಸೆಲ್ ದರ 91 ಪೈಸೆ ಮತ್ತೆ ಏರಿಕೆಯಾದ ಕಲವೇ ಕ್ಷಣದಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ದರವನ್ನು(CNG Price Hiked) ಪ್ರತಿ ಕೆ.ಜಿಗೆ ಮತ್ತೆ ₹1ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರವು ಕೂಡ ತಕ್ಷಣದಿಂದಲೇ ಜಾರಿಗೆ ಬಂದಿದೆ. ಇದು ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಅಡೆತಡೆಗಳಿಗೆ ಸಂಬಂಧಿಸಿದ ಜಾಗತಿಕ ಇಂಧನ ಬೆಲೆಗಳ ಏರಿಕೆಯ ಮಧ್ಯೆ 10 […]

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ತೆರೆ ಎಳೆದ ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಮೇ.23: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದಿಪ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳಿಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. “ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ನನ್ನ ಗಮನಕ್ಕೆ ಬಂದ ತಕ್ಷಣವೇ ಕಾರಾಗೃಹದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಷಯ ಇಲ್ಲ”

ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ತೆರೆ ಎಳೆದ ಗೃಹ ಸಚಿವ ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು

(ನ್ಯೂಸ್‌ ಕಡಬ) newskadaba.com,  ಮೇ.23: ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ನಡೆದಿದೆ…. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ

(ನ್ಯೂಸ್‌ ಕಡಬ) newskadaba.com,  ಮೇ.22: 2010 ರ ಮೇ 22 ರಂದು ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸ್ಮರಣಾರ್ಥ ಜಿಲ್ಲಾಡಳಿತ ವತಿಯಿಂದ ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ. ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮೇ.22: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಸಿಹಿ ಸುದ್ದಿ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22. ಅಪ್ಲೈ ಮಾಡುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಉದ್ಯೋಗ ವಿವರ ಮತ್ತು ವಿದ್ಯಾರ್ಹತೆ ಅಸಿಸ್ಟಂಟ್‌ ಆಡಿಟ್‌ ಆಫೀಸರ್‌,

ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಸೂರಜ್ ರೈ ನಿಧನ

(ನ್ಯೂಸ್‌ ಕಡಬ) newskadaba.com,  ಮೇ.22: ಬೆಳ್ಳಾರೆ ಮೂಲದ ಹಾಗೂ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸೂರಜ್ ರೈ (27) ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೇ 22ರಂದು ನಿಧನರಾಗಿದ್ದಾರೆ.ಮೃತ ಸೂರಜ್ ರೈ ಅವರು ಖ್ಯಾತ ಯಕ್ಷಗುರು ವಾಸುದೇವ ರೈ ಅವರ ಪುತ್ರರಾಗಿದ್ದು, ಅವರ ಅಕಾಲಿಕ ನಿಧನಕ್ಕೆ ವ್ಯಾಪಕ ಸಂತಾಪ ವ್ಯಕ್ತವಾಗಿದೆ. ಮೇ 15ರಂದು ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿಯಾಗಿ ಸೂರಜ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಅವರನ್ನು

ರಸ್ತೆ ಅಪಘಾತದಲ್ಲಿ ಬೆಳ್ಳಾರೆ ಮೂಲದ ಸಾಫ್ಟ್‌ವೇರ್ ಉದ್ಯೋಗಿ ಸೂರಜ್ ರೈ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಗಂಟಲಲ್ಲಿ ಎದೆಹಾಲು ಸಿಲುಕಿದ ಶಂಕೆ – ಮೂರು ತಿಂಗಳ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.22: ಮೂರು ತಿಂಗಳ ಗಂಡು ಮಗು ಗಂಟಲಲ್ಲಿ ಎದೆ ಹಾಲು ಸಿಲುಕಿ ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಕಾಸರಗೋಡಿನ ನೆಲ್ಲಿಕುಂಜೆ ಕಸಬಾ ತಾಯಿಲ್ ಹೌಸ್‌ನ ಶಾಜಹಾನ್‌ ಮತ್ತು ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವಿಗೀಡಾದ ಮಗು.. ಈ ಮಗುವಿಗೆ ಮೇ 19 ರಂದು ರಾತ್ರಿ ತಾಯಿ ಎದೆಹಾಲು ಉಣಿಸಿ ತೊಟ್ಟಿಲಲ್ಲಿ ಮಲಗಿಸಿದ್ದರೆನ್ನಲಾಗಿದೆ. ಮೇ 20 ರಂದು ಬೆಳಗ್ಗೆ 6 ರ ವೇಳೆಗೆ ಮಗು ಚಲನರಹಿತವಾಗಿರುವುದನ್ನು ಗಮನಿಸಿದ ಮನೆಯವರು ಮಗುವನ್ನು ತತ್‌ಕ್ಷಣ ನಗರದ ಖಾಸಗಿ

ಕಾಸರಗೋಡು : ಗಂಟಲಲ್ಲಿ ಎದೆಹಾಲು ಸಿಲುಕಿದ ಶಂಕೆ – ಮೂರು ತಿಂಗಳ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮೇ.22: ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು ಕಡಬ: ಮನೆ ಹಂಚು ತೆಗೆಯುವ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಉಳಿಪು ಎಂಬಲ್ಲಿ ನಡೆದಿದೆ. ಆರೋಪಿಗಳು ವ್ಯಕ್ತಿಯನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದಲ್ಲದೆ, ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ

ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅಗ್ರಿಕೋಲಾ ಪದಕ ಪ್ರದಾನ

(ನ್ಯೂಸ್‌ ಕಡಬ) newskadaba.com ಮೇ. 22. ಇತ್ತೀಚೆಗೆ ರೋಮ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(FAO)ಯ 2026ನೇ ಸಾಲಿನ ಪ್ರತಿಷ್ಠಿತ ಅಗ್ರಿಕೋಲಾ ಪದಕ ಪ್ರದಾನ ಮಾಡಲಾಯಿತು. ಆಹಾರ ಭದ್ರತೆ, ಸುಸ್ಥಿರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ನೀಡಿದ ವಿಶಿಷ್ಟ ನಾಯಕತ್ವದ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಪ್ರಧಾನಿಗೆ ನೀಡಲಾಗಿದೆ. ರೋಮ್‌ನಲ್ಲಿರುವ FAO ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ FAO ಮಹಾನಿರ್ದೇಶಕ ಕ್ಯೂ ಡೊಂಗ್ಯು ಅವರು ಪ್ರಧಾನಿ ಮೋದಿಗೆ

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅಗ್ರಿಕೋಲಾ ಪದಕ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮಿ ಕಂತು ವಿಳಂಬ – ಸರ್ಕಾರಕ್ಕೆ ‘ಹೈ’ ನೋಟಿಸ್

(ನ್ಯೂಸ್‌ ಕಡಬ) newskadaba.com ಮೇ. 22. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು ಕಮಲಾನಗರ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಗೃಹಲಕ್ಷ್ಮಿ ಕಂತು ವಿಳಂಬ – ಸರ್ಕಾರಕ್ಕೆ ‘ಹೈ’ ನೋಟಿಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top