ಗೃಹಲಕ್ಷ್ಮಿ ಕಂತು ವಿಳಂಬ – ಸರ್ಕಾರಕ್ಕೆ ‘ಹೈ’ ನೋಟಿಸ್

(ನ್ಯೂಸ್‌ ಕಡಬ) newskadaba.com ಮೇ. 22. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು ಕಮಲಾನಗರ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ […]

ಗೃಹಲಕ್ಷ್ಮಿ ಕಂತು ವಿಳಂಬ – ಸರ್ಕಾರಕ್ಕೆ ‘ಹೈ’ ನೋಟಿಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ

(ನ್ಯೂಸ್‌ ಕಡಬ) newskadaba.com ಮೇ. 22. ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.   ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಎಂಬವರ ಮೃತದೇಹವು ಪಾಣೆಮಂಗಳೂರು ನೂತನ ಸೇತುವೆ ಕೆಳಭಾಗದಲ್ಲಿ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೋಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ,

ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಹಣ ಬಾರದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.15: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸತ್ತ ಬೆಂಗಳೂರಿನ ಇಬ್ಬರು ಮಹಿಳೆಯರು ಇದೀಗ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯೋಜನೆ ಅಡಿ ಬರಬೇಕಿರುವ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹಿಳೆಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದು, ಹೈಕೋರ್ಟ್ ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಬಸವೇಶ್ವರ

ಗೃಹಲಕ್ಷ್ಮಿ ಹಣ ಬಾರದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್‌ಲೈನ್‌ನಲ್ಲಿ ಹವಾ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಸುಪ್ರೀಂ ಸಿಜೆಐ ಹೇಳಿಕೆಗೆ ಟಕ್ಕರ್ ನೀಡಿದ ಜೆನ್ ಝೀ

(ನ್ಯೂಸ್ ಕಡಬ) newskadaba.com, ಮೇ.21: ಸಾಮಾಜಿಕ ಮಾಧ್ಯಮದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಲ್ಲರ ಗಮನ ಸೆಳೆಯುತ್ತಿದೆ. ಇದು ನಿಜವಾದ ರಾಜಕೀಯ ಪಕ್ಷವಲ್ಲ, ಬದಲಾಗಿ ಆನ್‌ಲೈನ್‌ನಲ್ಲಿ ಹುಟ್ಟಿಕೊಂಡ ವಿಡಂಬನಾತ್ಮಕ ಅಭಿಯಾನವಾಗಿದೆ. ‘ಸೋಮಾರಿಗಳ ಮತ್ತು ನಿರುದ್ಯೋಗಿಗಳ ಧ್ವನಿ’ ಎಂಬ ಟ್ಯಾಗ್‌ಲೈನ್ ಹೊಂದಿರುವ ಕಾಕ್ರೋಚ್ ಜನತಾ ಪಾರ್ಟಿಯು, ‘ವ್ಯವಸ್ಥೆಯು ಲೆಕ್ಕ ಹಾಕಲು ಮರೆತುಹೋದ ಜನರನ್ನು ನಾವು ಪ್ರತಿನಿಧಿಸುತ್ತೇವೆ’ ಎಂದಿದೆ. ಇದು ಜೆನ್ ಝೀ ಯುವಕರ ಅತ್ಯಂತ ಶಕ್ತಿಶಾಲಿ ಡಿಜಿಟಲ್ ಪ್ರತಿಭಟನೆಯಾಗಿ ಮಾರ್ಪಡುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಎಂಬ ಹೆಸರಿನಲ್ಲಿ

ಆನ್‌ಲೈನ್‌ನಲ್ಲಿ ಹವಾ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಸುಪ್ರೀಂ ಸಿಜೆಐ ಹೇಳಿಕೆಗೆ ಟಕ್ಕರ್ ನೀಡಿದ ಜೆನ್ ಝೀ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ!

(ನ್ಯೂಸ್‌ ಕಡಬ) newskadaba.com,  ಮೇ.21: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜನರಿಗೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದ ಜನಪ್ರಿಯ ಹಾಲು ಬ್ರಾಂಡ್ ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟ ‘ಮಿಲ್ಮಾ’ ಹಾಲಿನ ದರವನ್ನು ಲೀಟರ್‌ಗೆ ರೂ. 4 ಹೆಚ್ಚಳ ಮಾಡಲಾಗಿದೆ. ಜೂನ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಈ ಕ್ರಮ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, “ನಾವು ಹೊಸದಾಗಿ ದರ ಏರಿಕೆ ಮಾಡಿಲ್ಲ. ಹಿಂದಿನ ಸರ್ಕಾರ ಕೈಗೊಂಡಿದ್ದ

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಮೇ.21: ಕಳೆದ ವಾರ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.21: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ (Govt Degree College) ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ (Department of College Education) ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ  ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇ. 22ರಂದು ವೆನ್ಲಾಕ್ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ  ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮೇ. 22ರಂದು ಬೆಳಿಗ್ಗೆ 11.10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ

ಮೇ. 22ರಂದು ವೆನ್ಲಾಕ್ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ Read More »

ಕರಾವಳಿ

ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. 2010 ರ ಮೇ ತಿಂಗಳಿನಲ್ಲಿ ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ. ಪ್ರತೀ ವರ್ಷದಂತೆ

ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ Read More »

ಕರಾವಳಿ

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಕರಾವಳಿ
Scroll to Top