ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ!

(ನ್ಯೂಸ್‌ ಕಡಬ) newskadaba.com,  ಆ.24: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಸವಾಲಿನ ಘಾಟ್ ಪ್ರದೇಶದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲು ಪುತ್ತೂರು ಮಾರ್ಗವಾಗಿ ಮಂಗಳೂರು ತಲುಪಿದೆ. ಇಳಿಜಾರು ಹಾಗೂ ತಿರುವುಗಳಿಂದ ಕೂಡಿದ ಘಾಟ್‌ ಮಾರ್ಗದಲ್ಲಿ ರೈಲಿನ ಭದ್ರತೆ, ವೇಗ ಮತ್ತು ಹಳಿಯ ತಾಂತ್ರಿಕ ಅಂಶಗಳನ್ನು ರೈಲ್ವೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.ಅಧಿಕಾರಿಗಳ ಅಂತಿಮ ಮೌಲ್ಯಮಾಪನ ಹಾಗೂ ವರದಿ ಬಳಿಕ ಮಂಗಳೂರು–ಸಕಲೇಶಪುರ ನಡುವೆ ನಿಯಮಿತ ಸಂಚಾರ ದಿನಾಂಕ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಮಾರ್ಗದ ಪ್ರಮುಖ […]

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಪಿಎಲ್ ದಂಪತಿಗಳಿಗೆ ಉಚಿತ IVF: ಕರ್ನಾಟಕ ಸರ್ಕಾರದಿಂದ ಆಯುಷ್ಮಾನ್ ಕೊಡುಗೆ!

(ನ್ಯೂಸ್‌ ಕಡಬ) newskadaba.com,  ಆ.24: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ IVF (ಇನ್ ವಿಟ್ರೊ ಫರ್ಟಿಲೈಸೇಶನ್), ICSI ಹಾಗೂ FET ನಂತಹ ಉನ್ನತ ಫಲವತ್ತತೆ ಚಿಕಿತ್ಸೆಗಳನ್ನು ಸೇರಿಸಲಾಗಿದೆ.ಪ್ರಾಯೋಗಿಕವಾಗಿ 1 ವರ್ಷದ ಅವಧಿಗೆ 120 ಬಿಪಿಎಲ್ (BPL) ಹಾಗೂ ಆದ್ಯತಾ (PHH) ಪಡಿತರ ಚೀಟಿದಾರ ಕುಟುಂಬಗಳಿಗೆ ಈ ಉಚಿತ ಸೌಲಭ್ಯ ಲಭ್ಯವಾಗಲಿದೆ. ಬಂಜೆತನದಿಂದ ನ ಬಳಲುತ್ತಿರುವ, ದುಬಾರಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವುದು…ಪ್ರಾಯೋಗಿಕ ಹಂತದ ಯಶಸ್ಸನ್ನು ಆಧರಿಸಿ ಮುಂದಿನ ದಿನಗಳಲ್ಲಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ

ಬಿಪಿಎಲ್ ದಂಪತಿಗಳಿಗೆ ಉಚಿತ IVF: ಕರ್ನಾಟಕ ಸರ್ಕಾರದಿಂದ ಆಯುಷ್ಮಾನ್ ಕೊಡುಗೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಆ.24: ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹60 ರಿಂದ ₹75 ತಲುಪಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ₹10 ರಿಂದ ₹20 ಹೆಚ್ಚಳವಾಗಿದೆ.ಮುಂಗಾರು ಮಳೆ ಅಭಾವದಿಂದ ಶೇ. 70ರಷ್ಟು ಇಳುವರಿ ಕುಸಿತಗೊಂಡಿದ್ದು, ದಾಸ್ತಾನು ಕೊರತೆ ಉಂಟಾಗಿದೆ. ರಫ್ತು ಮುಂದುವರಿದಿದ್ದು, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿದೆ.ಶ್ರಾವಣ ಮತ್ತು ಹಬ್ಬದ ಋತು ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕೆ.ಜಿ.ಗೆ ₹100 ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಮ್ ಕಾರ್ಡ್ ನಿಯಮ ಕಟ್ಟುನಿಟ್ಟು: ಮಿತಿ ಮೀರಿದರೆ ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರೆಕಾರ್ಡ್

(ನ್ಯೂಸ್‌ ಕಡಬ) newskadaba.com,  ಆ.22  ಕೇಂದ್ರ ಸರ್ಕಾರ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಗರಿಷ್ಠ 9 ಸಿಮ್ ಕನೆಕ್ಷನ್‌ಗಳನ್ನು ಮಾತ್ರ ಹೊಂದಲು ಅವಕಾಶವಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳನ್ನು ಹೊಂದಿರುವವರಿಗೆ ಹೊಸ ಸಿಮ್ ಕಾರ್ಡ್ ನೀಡದಂತೆ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ. ಮಿತಿಗಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಹೊಂದಿರುವ ಗ್ರಾಹಕರ ಹೆಸರು ಮತ್ತು ಫೋಟೋಗಳನ್ನು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗುತ್ತದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳು ಸಕ್ರಿಯವಾಗಿರುವುದು

ಸಿಮ್ ಕಾರ್ಡ್ ನಿಯಮ ಕಟ್ಟುನಿಟ್ಟು: ಮಿತಿ ಮೀರಿದರೆ ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರೆಕಾರ್ಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಆ.22  ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್

(ನ್ಯೂಸ್‌ ಕಡಬ) newskadaba.com,  ಆ.22  ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪಿಕಪ್ ವಾಹನವು ಪಾಲಡ್ಕದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ವೇಳೆ ಮಿತ್ತಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ರಸ್ತೆಯ ಮಧ್ಯದಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಕೆಲಕಾಲ ಟ್ರಾಫಿಕ್

ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಆ.22  ಪುತ್ತೂರು: ದರ್ಬೆಯ ‘ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರ’ದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ಆರೋಪಿ ಸುದರ್ಶನ್ ಪೈ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ನೀಡಿದ ದೂರಿನನ್ವಯ, ಆಗಸ್ಟ್ 21ರಂದು ನೀಡಿದ್ದ ದಾಖಲೆ ಲ್ಯಾಮಿನೇಷನ್ ವೇಳೆ ಹಾನಿಗೊಳಗಾಗಿತ್ತು. ಅದನ್ನು ಸರಿಪಡಿಸಿಕೊಡುವಂತೆ ಅಥವಾ

ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!

(ನ್ಯೂಸ್‌ ಕಡಬ) newskadaba.com,  ಆ.22: ತಮಿಳುನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ. ದೇವಾಲಯದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಗರ್ಭಗುಡಿ ಸೇರಿದಂತೆ ದೇವಾಲಯದೊಳಗೆ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣವನ್ನು ತಡೆಯುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ದರ್ಶನದ ಸಂದರ್ಭದಲ್ಲಿ ಭಕ್ತರು ಮೊಬೈಲ್ ಅಥವಾ ಕ್ಯಾಮೆರಾ ಬಳಸುವುದರಿಂದ ಸಮಯ ವ್ಯರ್ಥವಾಗುವುದರ

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ‘ಅನಲಾಗ್ ಪನ್ನೀರ್’ ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ

(ನ್ಯೂಸ್‌ ಕಡಬ) newskadaba.com,  ಆ.22: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ‘ಅನಲಾಗ್ ಪನ್ನೀರ್’ ಬಳಕೆಯನ್ನು 1 ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ  ಮತ್ತು ಕೆಮಿಕಲ್‌ಗಳನ್ನು ಬಳಸಿ ಕೃತಕ ಪನ್ನೀರ್ ತಯಾರಿಸಿ ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಕೃತಕ ಪನ್ನೀರ್‌ನಲ್ಲಿರುವ ರಾಸಾಯನಿಕಗಳು ಮತ್ತು ಕಳಪೆ ಕೊಬ್ಬಿನಾಂಶದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಹಾನಿಯುಂಟಾಗುವ ಸಾಧ್ಯತೆಯಿದೆ. ಪನ್ನೀರ್ ತಯಾರಿಕೆಗೆ ಕಡ್ಡಾಯವಾಗಿ

ರಾಜ್ಯದಲ್ಲಿ ‘ಅನಲಾಗ್ ಪನ್ನೀರ್’ ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ Read More »

ಅಡುಗೆ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬ್ಬು ಬೆಳೆ ಹಾನಿಯಿಂದ ಸಕ್ಕರೆ ಉತ್ಪಾದನೆ ಕುಸಿತ; ಬೆಲೆ ಏರಿಕೆಗೆ ಎಥೆನಾಲ್ ಕಾರಣವಲ್ಲ ಎಂದ ಕೇಂದ್ರ

(ನ್ಯೂಸ್‌ ಕಡಬ) newskadaba.com,  ಆ.22: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಗೆ ಎಥೆನಾಲ್ ಉತ್ಪಾದನೆ ಕಾರಣ ಎಂಬ ಆರೋಪಗಳನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ತಳ್ಳಿಹಾಕಿದೆ. ದೇಶೀಯ ಉತ್ಪಾದನೆಯಲ್ಲಿನ ಇಳಿಕೆ, ಹಬ್ಬದ ಋತುವಿನ ಬೇಡಿಕೆ ಹಾಗೂ ಜಾಗತಿಕ ಪೂರೈಕೆಯ ಬಿಗಿ ಕ್ರಮಗಳೇ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಎಥೆನಾಲ್ ಉತ್ಪಾದನೆಗೆ ಬಳಸುವ ಸಕ್ಕರೆಯ ಪ್ರಮಾಣವು 2022-23ರಲ್ಲಿ ಶೇ. 12 ರಷ್ಟಿದ್ದು, 2025-26ರ ಋತುವಿನಲ್ಲಿ ಶೇ. 9ಕ್ಕೆ ಇಳಿಕೆಯಾಗಿದೆ.

ಕಬ್ಬು ಬೆಳೆ ಹಾನಿಯಿಂದ ಸಕ್ಕರೆ ಉತ್ಪಾದನೆ ಕುಸಿತ; ಬೆಲೆ ಏರಿಕೆಗೆ ಎಥೆನಾಲ್ ಕಾರಣವಲ್ಲ ಎಂದ ಕೇಂದ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top