ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ. 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರದೇ ಮೇಲುಗೈ

(ನ್ಯೂಸ್‌ ಕಡಬ) newskadaba.com,  ಎ.17 ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು 2026ನೇ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ ಒಟ್ಟಾರೆ ಶೇ. 93.70ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ. ಕಳೆದ ವರ್ಷಕ್ಕೆ (ಶೇ. 93.66) ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಶೇ. 0.04ರಷ್ಟು ಅಲ್ಪ ಏರಿಕೆ ಕಂಡುಬಂದಿದೆ. ​ಪ್ರಮುಖ ಮುಖ್ಯಾಂಶಗಳು: ​ಬಾಲಕಿಯರ ಸಾಧನೆ: ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ. […]

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ. 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರದೇ ಮೇಲುಗೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.17:  ​ ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ… ಇಂದಿನಿಂದ ಮಾ.18ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.15  ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಸನಾತನ ಕಿಸಾನ್ (35) ಎಂದು ಗುರುತಿಸಲಾಗಿದೆ.ಇವರು ‘ಈಶನಿಧಿ’ ಎಂಬ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮೀನುಗಾರಿಕಾ ಚಟುವಟಿಕೆಗಳು ಕ್ಷೀಣಿಸಿದ್ದರಿಂದ, ಬೋಟ್ ಅನ್ನು ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿತ್ತು. ಸನಾತನ ಅವರು ಮಾರ್ಚ್ 31 ರಂದು ರಾತ್ರಿ 9:30 ರ ಸುಮಾರಿಗೆ ಬೋಟ್‌ನಲ್ಲಿ

ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ!

(ನ್ಯೂಸ್‌ ಕಡಬ) newskadaba.com,  ಎ.15  ದೇಶದಲ್ಲಿ ಎಲ್‌ಪಿಜಿ(LPG) ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡ‌ರ್ ಮಾರಾಟ ತಡೆಗಟ್ಟಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ದೇಶದಾದ್ಯಂತ ಅಭಿಯಾನ ಕೈಗೊಂಡಿದೆ. ಗ್ರಾಹಕರಿಗೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಜಾಗೃತೆ ವಹಿಸಲು ಈ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರಾದ್ಯಂತ ಕೈಗೊಂಡ ಅಭಿಯಾನದ ಭಾಗವಾಗಿ ಮನೆ ಬಳಕೆ ಎಲ್‌ಪಿಜಿ ಸರಬರಾಜಿನಲ್ಲಿ ವ್ಯತ್ಯಯ ಪತ್ತೆ‌ ಹಚ್ಚುವ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಪಾರದರ್ಶಕತೆ ಸಾಧಿಸುವ ನಿಟ್ಟಿನಲ್ಲಿ ಏ.11ರಂದು 2700 ತಪಾಸಣೆ ಮತ್ತು ದಾಳಿಯನ್ನು

ಎಲ್‌ಪಿಜಿ ಅಕ್ರಮ ತಡೆಗಟ್ಟಲು ಸರ್ಕಾರದಿಂದ ರಾಷ್ಟ್ರವ್ಯಾಪಿ ಅಭಿಯಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’

(ನ್ಯೂಸ್‌ ಕಡಬ) newskadaba.com,  ಎ.15  ನೈಜ ಜಗತ್ತಿನ ಸಮಸ್ಯೆಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು, ಪ್ರಮುಖ ಐಟಿ ಸಂಸ್ಥೆ ‘ಕಾಗ್ನಿಜೆಂಟ್‌’ ತನ್ನ ಪ್ರತಿಷ್ಠಿತ ‘ಟೆಕ್ನೋವರ್ಸ್ ಹ್ಯಾಕಥಾನ್ 2026’ಗೆ ಚಾಲನೆ ನೀಡಿದೆ. ಈ ಹಿಂದೆ ಪ್ರಾದೇಶಿಕ ಮಟ್ಟಕ್ಕೆ ಸೀಮಿತವಾಗಿದ್ದ ಈ ಸ್ಪರ್ಧೆಯು, ತನ್ನ ಮೂರನೇ ಆವೃತ್ತಿಯಲ್ಲಿ ರಾಷ್ಟ್ರೀಯ ಮಟ್ಟಕ್ಕೇರಿದೆ. ಭಾರತದಾದ್ಯಂತ 400ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿಂದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 20,000ಕ್ಕೂ ಅಧಿಕ ವಿದ್ಯಾರ್ಥಿಗಳು ಈ

ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜಾತ್ರೆ ಜತೆಗೆ ಬಿಸು ಸಂಭ್ರಮ

(ನ್ಯೂಸ್‌ ಕಡಬ) newskadaba.com,  ಎ.15  ಪುತ್ತೂರು: ತುಳುನಾಡಿನಲ್ಲಿ ಹೊಸ ವರ್ಷವನ್ನು ಸೌರಮಾನ ಯುಗಾದಿ ದಿನದಿಂದ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಜಾತ್ರಾ ಉತ್ಸವದೊಂದಿಗೆ ವಿಷು ಕಣಿ ಸಂಭ್ರಮ ಎ.೧೫ ರಂದು ವಿಶೇಷವಾಗಿ ಸಾಂಪ್ರದಾಯಿಕ ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ನಡೆಯಲಿವೆ. ಮಳೆಗಾಗಿಯೂ ಪ್ರಾರ್ಥನೆ ಮೇಷ ಸಂಕ್ರಮಣದ ದಿನ ರಾತ್ರಿ ದೇವರ ದೈನಂದಿನ ಪೇಟೆ ಸವಾರಿ ಮುಗಿದು, ದೇವಾಲಯದ ಆಡಳಿತದವರು, ಭಕ್ತಾಧಿಗಳು ಸೇರಿ ಕಾಲ ಕಾಲಕ್ಕೆ ಮಳೆ-ಬೆಳೆ ಸಮೃದ್ಧಿಯಾಗಿ ಸುಭಿಕ್ಷೆ ಉಂಟಾಗಲಿ ಎಂದು ದೇವಳದ ತಂತ್ರಿಗಳ ಮೂಲಕ

ಪುತ್ತೂರು: ಜಾತ್ರೆ ಜತೆಗೆ ಬಿಸು ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿರಿಂಜ್ ಮರುಬಳಕೆ ದುರಂತ: ಪಾಕಿಸ್ತಾನದಲ್ಲಿ 331 ಮಕ್ಕಳಿಗೆ HIV ಸೋಂಕು

(ನ್ಯೂಸ್‌ ಕಡಬ) newskadaba.com,  ಎ.15:  Pakistanದ Punjab ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸಿರಿಂಜ್‌ಗಳ ಮರುಬಳಕೆಯಿಂದ 331 ಮಕ್ಕಳಿಗೆ HIV ಸೋಂಕು ತಗುಲಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತನಿಖಾ ವರದಿಗಳ ಪ್ರಕಾರ, ಅಸುರಕ್ಷಿತ ಇಂಜೆಕ್ಷನ್ ಪದ್ಧತಿ ಹಾಗೂ ಕಲುಷಿತ ಔಷಧ ಬಾಟಲುಗಳ ಬಳಕೆಯೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ. ಮಕ್ಕಳಲ್ಲಿ ಹಠಾತ್ ಸೋಂಕು ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರು ಪರಿಶೀಲನೆ ನಡೆಸಿದಾಗ ಈ ಗಂಭೀರ ನಿರ್ಲಕ್ಷ್ಯ ಬಹಿರಂಗವಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರನ್ನು ಅಮಾನತುಗೊಳಿಸಲಾಗಿದ್ದು,

ಸಿರಿಂಜ್ ಮರುಬಳಕೆ ದುರಂತ: ಪಾಕಿಸ್ತಾನದಲ್ಲಿ 331 ಮಕ್ಕಳಿಗೆ HIV ಸೋಂಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಎ.15:  ಅಮೆರಿಕ- ಇರಾನ್ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಹರ್ಮುಜ್ ನಿರ್ಬಂಧದಿಂದ ತೈಲ ಬೆಲೆಗಳು ಏರಿಕೆ ಆಗಿವೆ. ಹಣದುಬ್ಬರದ ಭೀತಿಯಿಂದ ಜನ ಸುರಕ್ಷತೆಯ ಹೂಡಿಕೆಯತ್ತ ಮುಖ ಮಾಡುತ್ತಿದ್ದು, ಚಿನ್ನ ಬೆಳ್ಳಿ ದರದ ಏರಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 15, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 1420 ರೂ ಏರಿಕೆ ಆಗಿ,1,55,350 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 142 ರೂ

ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ- ಇಲ್ಲದಿದ್ದರೆ ಪರವಾನಗಿ ರದ್ದು

(ನ್ಯೂಸ್‌ ಕಡಬ) newskadaba.com,  ಎ.15:   ರಾಜ್ಯದ ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು, ಇಲ್ಲದಿದ್ದರೆ ಅವರ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. . ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಈ ನಿಯಮವನ್ನು ಮಹಾರಾಷ್ಟ್ರ ದಿನವಾದ ಮೇ 1 ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ. ಪ್ರತಾಪ್ ಸರ್ನಾಯಕ್ ಅವರು ಮಾತನಾಡಿ, ಮಹಾರಾಷ್ಟ್ರ ದಿನಾಚರಣೆಯ ಜೊತೆಜೊತೆಗೆ ಮೇ

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ- ಇಲ್ಲದಿದ್ದರೆ ಪರವಾನಗಿ ರದ್ದು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೂನ್ 12 ರಿಂದ 14 ರವರೆಗೆ ‘ಕುಡ್ಲ ಪೆಲಕಾಯಿ ಪರ್ಬ

(ನ್ಯೂಸ್‌ ಕಡಬ) newskadaba.com,  ಎ.15:  ಜನಪ್ರಿಯ ‘ಕುಡ್ಲ ಪೆಲಕಾಯಿ ಪರ್ಬ’ (ಮಂಗಳೂರು ಹಲಸಿನ ಹಣ್ಣು ಉತ್ಸವ) ಜೂನ್ 12, 13 ಮತ್ತು 14 ರಂದು ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೇಂಟ್ ಆಗ್ನೆಸ್ ಕಾಲೇಜು ಬಳಿಯ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಐಎಎಸ್ ಅವರು ಕಾರ್ಯಕ್ರಮದ ಪೋಸ್ಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಉತ್ಸವದ ಸಂಚಾಲಕ ಅಶ್ವಿನ್ ಸಿಕ್ವೇರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರೊಂದಿಗೆ

ಮಂಗಳೂರು: ಜೂನ್ 12 ರಿಂದ 14 ರವರೆಗೆ ‘ಕುಡ್ಲ ಪೆಲಕಾಯಿ ಪರ್ಬ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top