ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.14: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್‌ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.13: ಬೆಂಗಳೂರು,ಏ.13- ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್‌ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಏಳು ದಿನಗಳೊಳಗೆ ಆಹ್ವಾನಿಸಲಾಗಿದೆ. ಈಗಾಗಲೇ ಎಸ್‌‍ಎಸ್‌‍ಎಲ್‌ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು, ಫಲಿತಾಂಶವನ್ನು ಏ.24 ರಂದು ಪ್ರಕಟಿಸುವ ಸಾಧ್ಯತೆ ಇದೆ.ಕರಡು ಅಧಿಸೂಚನೆಯ ಪ್ರಕಾರ, ತೃತೀಯ ಭಾಷೆ ಹಾಗೂ ಎನ್‌ಎಸ್‌‍ಕ್ಯೂಎಫ್‌

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್‌ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೈಕ್ ಸವಾರರೇ ಎಚ್ಚರ! ಮೈಲೇಜ್ ಡಿವೈಸ್ ಅಳವಡಿಸುವ ನೆಪದಲ್ಲಿ ಹಣ ಪೀಕುತ್ತಿರುವ ಗ್ಯಾಂಗ್

(ನ್ಯೂಸ್‌ ಕಡಬ) newskadaba.com,  ಎ.13:  ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರರನ್ನು ತಡೆದು, ಬೈಕ್‌ಗೆ ಹೆಚ್ಚಿನ ಮೈಲೇಜ್ ನೀಡುವ ಸಾಧನ ಅಳವಡಿಸಿಕೊಡುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿರುವ ಗ್ಯಾಂಗ್‌ವೊಂದರ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಅಂಡರ್‌ಪಾಸ್ ಬಳಿ ಟೈಲರ್ ಒಬ್ಬರನ್ನು ತಡೆದ ಅಪರಿಚಿತ ವ್ಯಕ್ತಿಯೊಬ್ಬ, ನಿಮ್ಮ ಬೈಕ್‌ಗೆ ಮೈಲೇಜ್ ಹೆಚ್ಚಿಸುವ ಡಿವೈಸ್ ಅಳವಡಿಸುತ್ತೇನೆ ಎಂದು ಹೇಳಿ 1,000 ರೂಪಾಯಿ ಬೇಡಿಕೆಯಿಟ್ಟಿದ್ದಾನೆ. ಈ ವಿಚಾರವಾಗಿ ಸವಾರ ಮತ್ತು ಆ ವ್ಯಕ್ತಿಯ ನಡುವೆ

ಪುತ್ತೂರು: ಬೈಕ್ ಸವಾರರೇ ಎಚ್ಚರ! ಮೈಲೇಜ್ ಡಿವೈಸ್ ಅಳವಡಿಸುವ ನೆಪದಲ್ಲಿ ಹಣ ಪೀಕುತ್ತಿರುವ ಗ್ಯಾಂಗ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

LPG ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಭಾರಿ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಎ.13:  ಕಡಬ/ಬೆಂಗಳೂರು: ನೀವು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗಾಗಿ. ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಬೇಕಾಬಿಟ್ಟಿ ಸಿಲಿಂಡರ್ ಬುಕ್ ಮಾಡಲು ಅವಕಾಶ ಇರುವುದಿಲ್ಲ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಉದ್ವಿಗ್ನತೆಯಿಂದಾಗಿ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿದೂಗಿಸಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ​ಹೊಸ ನಿಯಮಗಳ ಮುಖ್ಯಾಂಶಗಳು: ​ಮಾಸಿಕ ಮಿತಿ: ಭಾರತ್ ಪೆಟ್ರೋಲಿಯಂ (BPCL) ನಿಯಮದಂತೆ, ಇನ್ಮುಂದೆ

LPG ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಭಾರಿ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಗೆ ಕನ್ನ ಹಾಕಿ ಪುರುಷರಿಗೂ ಉಚಿತ ಟಿಕೆಟ್‌ ನೀಡಿ ದುಡ್ಡು ಮಾಡಿದ ಬಿಎಂಟಿಸಿ ಕಂಡಕ್ಟರ್‌ಗಳು!

(ನ್ಯೂಸ್ ಕಡಬ) newskadaba.com, ಎ.13: ಮಹಾನಗರ ಸಾರಿಗೆ ಸಂಸ್ಥೆ (BMTC) ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆ ದುರುಪಯೋಗವಾಗಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಈ ಯೋಜನೆಯನ್ನು ಕೆಲವು ನಿರ್ವಾಹಕರು (ಕಂಡಕ್ಟರ್‌ಗಳು) ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದ ಐವರು ಕಂಡಕ್ಟರ್‌ಗಳನ್ನು ತಕ್ಷಣ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಶಕ್ತಿ ಯೋಜನೆಯ ದುರುಪಯೋಗ ಹೇಗೆ? ರಾಜ್ಯ ಸರ್ಕಾರ

ಶಕ್ತಿ ಯೋಜನೆಗೆ ಕನ್ನ ಹಾಕಿ ಪುರುಷರಿಗೂ ಉಚಿತ ಟಿಕೆಟ್‌ ನೀಡಿ ದುಡ್ಡು ಮಾಡಿದ ಬಿಎಂಟಿಸಿ ಕಂಡಕ್ಟರ್‌ಗಳು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: 2026-27ರಿಂದ ಉಚಿತ ಪಠ್ಯಪುಸ್ತಕ ವಿತರಣೆ

(ನ್ಯೂಸ್‌ ಕಡಬ) newskadaba.com,  ಎ.13:  ಇದುವರೆಗೆ 10ನೇ ತರಗತಿಯವರೆಗೆ ಮಾತ್ರ ಇದ್ದ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು 2026-27ನೇ ಸಾಲಿನಿಂದ ಪದವಿ ಪೂರ್ವ (ಪಿಯು) ಕಾಲೇಜಿನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ತಮ ಪಠ್ಯಪುಸ್ತಕಗಳನ್ನು ಉಚಿತವಾಗಿ ಪಡೆಯಲಿದ್ದಾರೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ. ಈ ಮೂಲಕ ಮೊದಲ ಬಾರಿಗೆ 1ರಿಂದ 12ನೇ ತರಗತಿ

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: 2026-27ರಿಂದ ಉಚಿತ ಪಠ್ಯಪುಸ್ತಕ ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

(ನ್ಯೂಸ್‌ ಕಡಬ) newskadaba.com,  ಎ.13: ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಇದರಿಂದ ಕಚ್ಚಾ ತೈಲ ಬೆಲೆ (Crude Oil Price) ಶೇ.11 ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ 105 ಡಾಲರ್‌ (9,774 ರೂ.) ತಲುಪಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರಲ್‌ಗೆ 104.25 ಡಾಲರ್‌ (9,704 ರೂ.) ನಷ್ಟಿದ್ದರೆ,

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ಐತಿಹಾಸಿಕ ಸಾಧನೆ ​ವಿಶ್ವ ದಾಖಲೆ ಬರೆದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ

(ನ್ಯೂಸ್‌ ಕಡಬ) newskadaba.com,  ಎ.13: ಕಲೆ ಮತ್ತು ಸಾಹಸಕ್ಕೆ ಸಾಟಿಯಿಲ್ಲ ಎಂಬುದನ್ನು ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಅಭಿಷೇಕ್ ಕಣ್ಮರಡ್ಕ ಸಾಬೀತುಪಡಿಸಿದ್ದಾರೆ. ಸತತ 24 ಗಂಟೆಗಳ ಕಾಲ ನಿರಂತರವಾಗಿ ಕುಚಿಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಅವರು ಪ್ರತಿಷ್ಠಿತ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಸಾಧನೆಗೆ ಭಾಜನರಾಗಿದ್ದಾರೆ. ​ದಾಖಲೆಯ ಹಾದಿ: ಏಪ್ರಿಲ್ 11ರಂದು ಸಂಜೆ 6:30ಕ್ಕೆ ನೆಹರೂ ಮೆಮೊರಿಯಲ್ ಕಾಲೇಜಿನ ಸಭಾಂಗಣದಲ್ಲಿ ಆರಂಭವಾದ ನೃತ್ಯ ಪ್ರದರ್ಶನವು, ಏಪ್ರಿಲ್ 12ರ ಸಂಜೆ 6:30ರವರೆಗೆ

ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ಐತಿಹಾಸಿಕ ಸಾಧನೆ ​ವಿಶ್ವ ದಾಖಲೆ ಬರೆದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.13: ಕಳೆದ ವಾರಾಂತ್ಯ ತುಸು ಏರಿಕೆ ಕಂಡಿದ್ದ ಚಿನ್ನ ಬೆಳ್ಳಿ ದರದಲ್ಲಿ ಈ ವಾರದ ಆರಂಬದಲ್ಲಿ ಮತ್ತೆ ಇಳಿಕೆ ಕಂಡಿದೆ. ಅಮೆರಿಕ- ಇರಾನ್ ನಡುವೆ ಕುಸಿದು ಬಿದ್ದ ಒಪ್ಪಂದ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 13, 2026, ಸೋಮವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 380 ರೂ ಇಳಿಕೆ ಆಗಿ,1,52,460 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 38 ರೂ

ಇಂದು ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮದುವೆ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ತೊಂದರೆ; ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.13: ಮಂಗಳೂರು: ನಗರದ ಹೊರವಲಯದ ಗಂಜಿಮಠ ಸಮೀಪದ ಮುಚ್ಚೂರು ಕ್ರಾಸ್‌ನಲ್ಲಿ ಮದುವೆ ಸಮಾರಂಭವೊಂದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ, ಬಜಪೆ ಪೊಲೀಸರು ಮದುವೆ ಮಂಟಪದ ಮಾಲೀಕರು ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 12ರ ಭಾನುವಾರದಂದು ಗಂಜಿಮಠದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮಗಳು ಜರುಗಿದ್ದವು. ಮಧ್ಯಾಹ್ನ 12ರಿಂದ 2 ಗಂಟೆಯ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳ ವಾಹನಗಳಿಗೆ ಸಂಘಟಕರು

ಮಂಗಳೂರು: ಮದುವೆ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ತೊಂದರೆ; ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top