ತೋಳಗಳ ಸಂತತಿ ವೃದ್ಧಿ: ಪಿಲಿಕುಳ ಉದ್ಯಾನವನಕ್ಕೆ ಏಳು ಹೊಸ ಅತಿಥಿಗಳ ಆಗಮನ

(ನ್ಯೂಸ್‌ ಕಡಬ) newskadaba.com,ಮಾ.19 :  ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ‘ಗೀತಾ’ ಎಂಬ ಭಾರತೀಯ ತೋಳವು ಏಳು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳಲ್ಲಿ ನಾಲ್ಕು ಗಂಡು ಹಾಗೂ ಮೂರು ಹೆಣ್ಣು ತೋಳಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಭಾರತೀಯ ತೋಳಗಳನ್ನು ಉದ್ಯಾನವನದಲ್ಲಿ ಇರಿಸಲಾಗಿದ್ದು, ಈ ಸೌಲಭ್ಯದಲ್ಲಿ ಈ ಜಾತಿಯ ಮೊದಲ ಯಶಸ್ವಿ ಸಂತಾನೋತ್ಪತ್ತಿ ಇದಾಗಿದೆ. ಅಧಿಕಾರಿಗಳು ಇದನ್ನು ಉದ್ಯಾನವನದ ಸೆರೆಯಲ್ಲಿರುವ ಸಂತಾನೋತ್ಪತ್ತಿ ಮತ್ತು ಸಂರಕ್ಷಣಾ ಉಪಕ್ರಮಗಳಲ್ಲಿ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ತಾಯಿ […]

ತೋಳಗಳ ಸಂತತಿ ವೃದ್ಧಿ: ಪಿಲಿಕುಳ ಉದ್ಯಾನವನಕ್ಕೆ ಏಳು ಹೊಸ ಅತಿಥಿಗಳ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,ಮಾ.19   ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ ಸಂಸ್ಥೆ ಪ್ರಮುಖರು, ಗ್ರಾಮಸ್ಥರು ಭಾಗವಹಿಸಿದ್ದರು. ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಅಡಿಯಲ್ಲಿ ಕೋಟಿ ವೆಚ್ಚದ

ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಮಾ.19 : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಯುಗಾದಿ ಹಬ್ಬದ ತಯಾರಿ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇಂದು ಕೂಡಾ ಮಳೆರಾಯ ತಂಪೆರೆಯಲಿದ್ದಾನೆ. ಕರ್ನಾಟಕದ 9 ಜಿಲ್ಲೆಗಳಲ್ಲಿ

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೋಟೆಲ್ ಗಳಿಗೆ ಸದ್ಯಕ್ಕೆ ಗ್ಯಾಸ್ ಇಲ್ಲ, ಎಲೆಕ್ಟ್ರಿಕ್ ಸ್ಟೌವ್ ಬಳಸಿ – ಸಚಿವ ಮುನಿಯಪ್ಪ

(ನ್ಯೂಸ್‌ ಕಡಬ) newskadaba.com ಮಾ. 17. ಹೋಟೆಲ್‌ ಗಳಿಗೆ ಸದ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲು ಸಾಧ್ಯವಿಲ್ಲ, ವಿದ್ಯುತ್‌ ಸ್ಟೌವ್‌ ಗಳನ್ನು ಬಳಸಿ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದ್ದಾರೆ. ತೈಲ ಪೂರೈಕೆ ಕಂಪನಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಪರಿಸ್ಥಿತಿ ಗಂಭೀರವಾಗಿದ್ದು, ಆದ್ದರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಗಳ ವಿತರಣೆಯಲ್ಲಿ ಅಡಚಣೆಯಾಗಲಿದೆ. ಇದನ್ನು ಸರಿದೂಗಿಸಲು ಎಲೆಕ್ಟ್ರಿಕ್‌ ಸ್ಟೌವ್‌ ಗಳನ್ನು ಬಳಬೇಕೆಂದು ಸಚಿವರು

ಹೋಟೆಲ್ ಗಳಿಗೆ ಸದ್ಯಕ್ಕೆ ಗ್ಯಾಸ್ ಇಲ್ಲ, ಎಲೆಕ್ಟ್ರಿಕ್ ಸ್ಟೌವ್ ಬಳಸಿ – ಸಚಿವ ಮುನಿಯಪ್ಪ Read More »

ಕರ್ನಾಟಕ

ರಾಜ್ಯದ ವಿವಿಧೆಡೆ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಸಿಲಿಂಡರ್ ಗಳು ವಶ

(ನ್ಯೂಸ್‌ ಕಡಬ) newskadaba.com ಮಾ. 17. ರಾಜ್ಯದ ವಿವಿಧೆಡೆ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್‌ ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲೀಸ್‌‍ ಸಹಕಾರದೊಂದಿಗೆ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್‌ಗಳನ್ನು ಪತ್ತೆ ಹಚ್ಚಿ ವಿದ್ಯಾನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್‌ ಸಹ ಮಾಲೀಕರ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ನೀಡಿದ್ದಾರೆ.   ಗೋ ಗ್ಯಾಸ್‌‍ ಕಂಪನಿಯಿಂದ ಪೂರೈಕೆಯಾಗುವ ಅನಿಲದ

ರಾಜ್ಯದ ವಿವಿಧೆಡೆ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಸಿಲಿಂಡರ್ ಗಳು ವಶ Read More »

ಕರ್ನಾಟಕ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ದೂರು ದಾಖಲು

(ನ್ಯೂಸ್‌ ಕಡಬ) newskadaba.com ಮಾ. 17. ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ನಿವೃತ್ತಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ವಾಟ್ಸ್‌ ಆ್ಯಪ್‌ ಮೂಲಕ ಬಂದ ಟ್ರೇಡಿಂಗ್ ಮಾಹಿತಿಯ ಸಂದೇಶವನ್ನು ಪರಿಶೀಲಿಸಿ, ಸಂದೇಶ ಕಳುಹಿಸಿದವರೊಂದಿಗೆ ವಾಟ್ಸ್‌ ಆ್ಯಪ್‌ ನಲ್ಲಿ ಚಾಟಿಂಗ್ ನಡೆಸಿದ್ದರು. ಬಳಿಕ ಆರೋಪಿಗಳು ವಿವಿಧ ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೆ ಅವರನ್ನು ಸೇರಿಸಿ ಶೇ.25 ಲಾಭಾಂಶ ನೀಡಲಾಗುವುದು ಎಂದು ತಿಳಿಸಿ ಜ.21ರಿಂದ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.17 ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ರವಿರಾಜ್ ಎಚ್. ಪಿ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.17 ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ…. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.17 ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ) ಬಸ್ ಮೈಮೇಲೆ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ. ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಮಾ. 17. ಸಾರ್ವಜನಿಕ ಸ್ಥಳದಲ್ಲಿ ವಿವಿಧೆಡೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿಯಲ್ಲಿ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕಿರಣ ಪ್ರಸಾದ್ (22), ಸಲ್ಮಾನ್ (18), ಪ್ರಜ್ವಲ್ (23), ಕಾರ್ತಿಕ್ (24), ಪ್ರಜ್ವಲ್ ಅಶ್ವತ್ಥ್ ವೇಗಸ್ (25) ಮತ್ತು ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ (24) ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಸೇವನೆ ಆರೋಪ- 6 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top