ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್‌ ಕಡಬ) newskadaba.com ಮಾ. 17. ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ 5 ವರ್ಷದ ಬಾಲಕಿ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಸಮೀಪ ನಡೆದಿದೆ.   ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್‌ ಎಂಬವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ ವಿರುದ್ದ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. […]

ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.17 ಬೆಂಗಳೂರು: ‘ಕಾನೂನು ಪ್ರಕಾರ ಬಾಲ್ಯವಿವಾಹ ನಿಷೇಧಿಸಲಾಗಿದೆ’ ಎಂಬ ಫಲಕಗಳನ್ನು ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಸೇರಿದಂತೆ ವಿವಾಹಗಳು ನಡೆಯುವ ಎಲ್ಲಾ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ದೇವನಹಳ್ಳಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಎನ್. ಮಂಜುನಾಥ್ ಸೇರಿ ಐವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ನ್ಯಾಯಪೀಠವು ಬಾಲ್ಯವಿವಾಹ ಪ್ರಕರಣಗಳ ಏರಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ‘ಬಾಲ್ಯವಿವಾಹ ನಿರ್ಮೂಲನೆ

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಸಮುದಾಯ ಸೇವೆ ವೈರಲ್ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com  ಸುಳ್ಯ, ಮಾ. 17. ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ಎಂಬಾತನು, ನ್ಯಾಯಾಲಯದ ಆದೇಶದಂತೆ  ಮಾ.15ರಂದು ಸಮುದಾಯ ಸೇವೆಯ ಭಾಗವಾಗಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ನಿಯಂತ್ರಣ ಕಾರ್ಯವನ್ನು ನಿರ್ವಹಿಸಿದ್ದಾನೆ. ಇದಾದ ಬಳಿಕ, ತಾನು ನಡೆಸಿದ ಸಮುದಾಯ ಸೇವೆಯ ಕುರಿತ ಚಿತ್ರಗಳು ಮತ್ತು ಮಾಹಿತಿ ವಿವಿಧ ಸಾಮಾಜಿಕ

ಸುಳ್ಯ: ಸಮುದಾಯ ಸೇವೆ ವೈರಲ್ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ

(ನ್ಯೂಸ್‌ ಕಡಬ) newskadaba.com,  ಮಾ.17 ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ೧೮ ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ ೧:೧೫ ರವರೆಗೆ ಪರೀಕ್ಷೆಗಳು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಡಬ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com  ಕಡಬ, ಮಾ. 17. ದೀರ್ಘಕಾಲದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಪೆರಾಬೆ ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಪೆರಾಬೆ ಗ್ರಾಮದ ನಡ್ಡೋಟ್ಟು ಮನೆ ನಿವಾಸಿ ಸಂಜೀವ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಾರ್ಚ್ 13ರಂದು ಸಂಜೀವ ಪೂಜಾರಿಯವರ ಪತ್ನಿ ಪುಷ್ಪವತಿ ಅವರು ಪಡಿತರ ತರಲು

ಕಡಬ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ

(ನ್ಯೂಸ್‌ ಕಡಬ) newskadaba.com,  ಮಾ.17 ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್(KSTA) ಸವಣೂರು ವಲಯದ ಸಾಮಾನ್ಯ ಸಭೆಯು ಸವಣೂರಿನಲ್ಲಿ ಸಮಿತಿಯ ಅಧ್ಯಕ್ಷರಾದ ಮೋಹನ್ ಕೆಡೆಂಜಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೊಸ ಸದಸ್ಯರ ಸೇರ್ಪಡೆ, ರಿನೀವಲ್‌ ಹಾಗೂ ಕಾರ್ಮಿಕ ಆಯುಕ್ತರ ಮುಖಾಂತರ NPS ಪಿಂಚಣಿ ಯೋಜನೆ ಹಾಗೂ ಸ್ಮಾರ್ಟ್ ಕಾರ್ಡ್ ಮಾಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಗನ್ನಾಥ ಅಮೈ ಬೇಬಿ ಕುಮಾರಮಂಗಲ, ಸರಸ್ವತಿ ಶುಭಲಕ್ಷ್ಮಿ ಪ್ರಮೀಳಾ ಇಡ್ಯಾಡಿ,ಜಯಂತಿ, ಮೋಹಿನಿ,ಗೌತಮಿ ಸುನಿತಾ,ನೇತ್ರಾವತಿ, ಬೇಬಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSF ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಕೂಟ ಮತ್ತು ಪ್ರಾರ್ಥನಾ ಸಂಗಮ ಯುವ ಸಮೂಹವನ್ನು ಆದ್ಯಾತ್ಮಿಕತೆಯೆಡೆಗೆ ಕೊಂಡೊಯ್ಯುವ ಸಂಘಟನೆಗಳ ಪಾತ್ರ ಮಹತ್ವದ್ದು- ಮಜೀದ್ ಸಖಾಫಿ ಅಮ್ಮುoಜೆ

(ನ್ಯೂಸ್‌ ಕಡಬ) newskadaba.com  ಉಪ್ಪಿನಂಗಡಿ, ಮಾ. 17. SSF ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಇಫ್ತಾರ್ ಕೂಟ ಹಾಗೂ ಪ್ರಾರ್ಥನಾ ಸಂಗಮ ಕಾರ್ಯಕ್ರಮ ಸೋಮವಾರದಂದು ಸಂಜೆ ಭಕ್ತಿಭಾವದಿಂದ ನಡೆಯಿತು. ರಮಳಾನ್ ನ ಆತ್ಮೀಯತೆಯ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಮತ್ತು ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.   ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಿದ ಖತೀಬ್ ಅಬ್ದುಲ್ ಮಜೀದ್ ಸಖಾಫಿ ಅಮ್ಮುಂಜೆ ಮಾತನಾಡಿ, ಯುವ ಸಮೂಹವನ್ನು ಅಧ್ಯಾತ್ಮಿಕತೆಯತ್ತ ಕೊಂಡೊಯ್ಯುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ

SSF ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಕೂಟ ಮತ್ತು ಪ್ರಾರ್ಥನಾ ಸಂಗಮ ಯುವ ಸಮೂಹವನ್ನು ಆದ್ಯಾತ್ಮಿಕತೆಯೆಡೆಗೆ ಕೊಂಡೊಯ್ಯುವ ಸಂಘಟನೆಗಳ ಪಾತ್ರ ಮಹತ್ವದ್ದು- ಮಜೀದ್ ಸಖಾಫಿ ಅಮ್ಮುoಜೆ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.17 ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರ್ಚ್ 17 : ವಿಶ್ವ ಗ್ರಾಹಕರ ದಿನಾಚರಣೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮಾ. 17. ದಕ್ಷಿಣ ಕನ್ನಡ ಜಿಲ್ಲಾಡಳಿತ,  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಮಾರ್ಚ್ 17 ರಂದು ಬೆಳಿಗ್ಗೆ 10.30

ಮಾರ್ಚ್ 17 : ವಿಶ್ವ ಗ್ರಾಹಕರ ದಿನಾಚರಣೆ Read More »

ಕರಾವಳಿ

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಾ. 17. ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ನೋಂದಣಿಗೊಂಡಿರುವ ಎಲ್ಲಾ ಇ-ಆಟೋ ರಿಕ್ಷಾದ ಮಾಲಕರು ಮಾರ್ಚ್ 31 ರೊಳಗಾಗಿ ಇ-ಆಟೋ ರಿಕ್ಷಾ ಪರವಾನಿಗೆಯನ್ನು ಪಡೆಯಲು ಅರ್ಜಿ ಸಲ್ಲಿಸಬೇಕು. ಈ ಕುರಿತು ಮಾಹಿತಿಗೆ ಮಂಗಳೂರು  ಆರ್.ಟಿ.ಓ ಕಛೇರಿಯನ್ನು ಸಂಪರ್ಕಿಸುವಂತೆ ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಪ್ರಕಟಣೆ  ತಿಳಿಸಿದೆ.

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ Read More »

ಕರಾವಳಿ
Scroll to Top