Guwahati-Chennai IndiGo flight diverted to Bengalur

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಾ. 14. ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು ಶಾರ್ಜಾವನ್ನು ಅಲ್ಲಿನ ಸಮಯ ಸಂಜೆ 4:05ಕ್ಕೆ ತಲುಪಲಿದೆ. ಏರ್ ಇಂಡಿಯಾ 6058 ಶಾರ್ಜಾದಿಂದ ಅಲ್ಲಿನ ಸಮಯ ಸಂಜೆ 5:05 ಕ್ಕೆ ಹೊರಟು ರಾತ್ರಿ 10.30ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ದುಬೈಗೆ ವಾರದಲ್ಲಿ 17, ಅಬುಧಾಬಿಗೆ […]

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ Read More »

ರಾಷ್ಟ್ರೀಯ ನ್ಯೂಸ್

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು

(ನ್ಯೂಸ್ ಕಡಬ) newskadaba.com ಮಾ. 14. ದೇಶಾದ್ಯಂತ LPG ಕೊರತೆ ಎದುರಾದ ಬೆನ್ನಲ್ಲೇ ಅನಿಲ ಮಾಹಿತಿಯ ನವೀಕರಣವನ್ನು ಪಡೆಯುವ ನೆಪದಲ್ಲಿ ಆನ್ಲೈನ್ ವಂಚಕರು ಮಹಿಳೆಯರಿಬ್ಬರಿಗೆ ವಂಚಿಸಿದ ಘಟನೆ ಮಹಾರಾಷ್ಟ್ರದ ಕಲ್ಯಾಣ-ಡೊಂಬಿವಲಿ ಪ್ರದೇಶದಿಂದ ವರದಿಯಾಗಿದೆ.     ದೂರಿನ ಪ್ರಕಾರ, ಇಬ್ಬರು ಮಹಿಳೆಯರು ಅಪರಿಚಿತ ವ್ಯಕ್ತಿಯ ಕರೆಯನ್ನು ಸ್ವೀಕರಿಸಿದ್ದರು. ತಾನು ಮಹಾನಗರ ಗ್ಯಾಸ್ ಲಿಮಿಟೆಡ್ ನಿಂದ ಮಾತನಾಡುತ್ತಿರುವುದಾಗಿ ಹೇಳಿಕೊಂಡಿದ್ದ ವ್ಯಕ್ತಿ ತಮ್ಮ ಫೋನ್‌ ನಲ್ಲಿ ಫಾರಂ ಭರ್ತಿ ಮಾಡಲು ಎಪಿಕೆ ಫೈಲ್ ಒಂದನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ತೆರೆಯುವಂತೆ

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 14. ಮರಣ ಹೊಂದಿದವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಮಾಡಿದ್ದಲ್ಲದೆ ಸರ್ಕಾರದ ಯೋಜನೆಯ ದುರ್ಲಾಭ ಪಡೆದು ಮೋಸ ಮಾಡಿರುವ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.   ಆರ್ಯಾಪು ಗ್ರಾಮದ ಮರಿಕೆ ಗುರುವ ಎಂಬವರ ಮಗ ಭಾಸ್ಕರ ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, “ತನ್ನ ಅಣ್ಣ ಬಾಬು ಎಂಬವರು, ಅವರ ಮಗಳು

ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದೇಶಾದ್ಯಂತ ಎಲ್ ಪಿಜಿ ಪೂರೈಕೆಯಲ್ಲಿ ಉಂಟಾದ ವ್ಯತ್ಯಯವನ್ನು ನಿವಾರಿಸಲು ಕೇಂದ್ರ ಸರಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಪಡಿತರ ವ್ಯವಸ್ಥೆಯ ಮೂಲಕ ನೀಡಲಾಗುವು ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆ ರಾಜ್ಯಗಳಿಗೆ ನೀಡಲಾಗುವ 1 ಲಕ್ಷ ಕಿಲೋ ಲೀಟರ್ ನಿಯಮಿತ ಕೋಟಾದ ಜೊತೆಗೆ, ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಬಿಡುಗಡೆ ಮಾಡಲು ಕೇಂದ್ರ ಆದೇಶಿಸಿದೆ. ಇದು ಪ್ರಾಥಮಿಕವಾಗಿ ಬಡ ಕುಟುಂಬಗಳಿಗೆ ಅಡುಗೆ ತಯಾರಿಸಲು ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕರಾವಳಿ ತೀರದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಧ್ವನಿಯೆತ್ತಿದ್ದಾರೆ. ನಿಯಮ 377ರಡಿ ಈ ಗಂಭೀರ ವಿಷಯ ಪ್ರಸ್ತಾಪಿಸಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ  ಅಂದರೆ ಶೇ.48.40ರಷ್ಟು ಭಾಗವು ಕೊರೆತಕ್ಕೆ ಒಳಗಾಗುತ್ತಿದೆ. ಇದು ಕರ್ನಾಟಕ ರಾಜ್ಯದ

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ Read More »

ಕರಾವಳಿ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ  ಪರೀಕ್ಷೆಗೆ  3,571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು  ಗೈರು ಹಾಜರಾಗಿದ್ದರು ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ Read More »

ಕರಾವಳಿ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಎಸ್.ಎಸ್.ಎಲ್.ಸಿ. ಪರೀಕ್ಷೆ-1 ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮಾರ್ಚ್ 18 ರಿಂದ  ಎಪ್ರಿಲ್ 2  ರವರೆಗೆ ಪರೀಕ್ಷೆ  ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ ಗುರುವಾರ ಆಫ್-ಸೈಟ್ ತುರ್ತು ಅಣಕು ಡ್ರಿಲ್ ಅನ್ನು ನಡೆಸಿತು. ಕಾರ್ಖಾನೆಗಳ ಉಪನಿರ್ದೇಶಕ ಡಾ.ರಾಜೇಶ್ ಮಿಶ್ರಿಕೋಟಿ,  ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ Read More »

ಕರಾವಳಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್‍ ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ Read More »

ಕರಾವಳಿ
Scroll to Top