ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ. 2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು. ಪ್ರಕರಣದ […]

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ Read More »

ಕರಾವಳಿ

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತ ತೀವ್ರ ಖಂಡನೆ

(ನ್ಯೂಸ್‌ ಕಡಬ) newskadaba.com,  ಮಾ.13  ನವದೆಹಲಿ: ವಿಶ್ವದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಥೈಲ್ಯಾಂಡ್‌ನ ‘ಮಯೂರಿ ನಾರಿ’ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಬುಧವಾರ ಬಲವಾಗಿ ಖಂಡಿಸಿದೆ. ಈ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಪ್ರಯಾಣಿಸುತ್ತಿದ್ದ ವೇಳೆ ಮಾರ್ಚ್ 11 ರಂದು ಈ ಅನಿರೀಕ್ಷಿತ ದಾಳಿ ನಡೆದಿದೆ. ಈ ಘಟನೆಯನ್ನು ‘ಪ್ರಚೋದನಕಾರಿಯಲ್ಲದ ದಾಳಿ’ ಎಂದು ಬಣ್ಣಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತೀವ್ರ ಕಳವಳ ವ್ಯಕ್ತಪಡಿಸಿದೆ. ದಾಳಿಗಳ ತೀವ್ರತೆ ಮತ್ತು ಮಾರಣಾಂತಿಕತೆ

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತ ತೀವ್ರ ಖಂಡನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.13: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.12, ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು,

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. . ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ:ಗ್ಯಾರಂಟಿ ಯೋಜನೆಯು ಬಡವರ, ಮಧ್ಯಮ ವರ್ಗದವರ ಜೀವನಾಡಿಯಾಗಿದ್ದು, ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಅವರು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಗ್ರಾಮ ಪಂಚಾಯತ್ ಬಿಳಿನೆಲೆ ಸಂಯುಕ್ತ ಆಶ್ರಯದಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ನಡೆದ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಮತ್ತು ಮಹಿಳಾ

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ!

(ನ್ಯೂಸ್‌ ಕಡಬ) newskadaba.com,  ಮಾ.12,ಗದಗ ಇತಿಹಾಸ ಪ್ರಸಿದ್ಧ ಲಕ್ಕುಂಡಿಯ ಪಾರಂಪರಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ನಡೆಯುತ್ತಿದ್ದ ಬೃಹತ್ ಉತ್ಖನನ ಕಾರ್ಯಕ್ಕೆ ಬುಧವಾರ ಅಧಿಕೃತವಾಗಿ ತೆರೆಬಿದ್ದಿದೆ. ಕಳೆದ 47 ದಿನಗಳಿಂದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ನಡೆದ ಈ ಕಾರ್ಯಾಚರಣೆಯಲ್ಲಿ ಹತ್ತಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದು, ಇತಿಹಾಸ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿವೆ. ಜನವರಿ 10ರಂದು ಗಂಗವ್ವ ರಿತ್ತಿ ಎಂಬುವವರ ಜಾಗದಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ, ASI ಮತ್ತು ರಾಜ್ಯ ಪುರಾತತ್ವ ಇಲಾಖೆ ಜಂಟಿಯಾಗಿ ಈ ಕಾರ್ಯಾಚರಣೆ ಆರಂಭಿಸಿದ್ದವು.ಸುಮಾರು

ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಂಡರ್ ಅಭಾವದ ನಡುವೆ ಗ್ಯಾಸ್ ಸಿಲಿಂಡರ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೃತ್ಯ!

(ನ್ಯೂಸ್‌ ಕಡಬ) newskadaba.com,  ಮಾ.12: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿಲಿಂಡರ್ ಕಳ್ಳರ ಹಾವಳಿ ಮಿತಿಮೀರಿದೆ. ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ, ಚನ್ನಪಟ್ಟಣದ ಕನಕನಗರದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ನಿವಾಸಿ ಕೃಷ್ಣಪ್ಪ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಅನ್ನು ಕಳ್ಳರು ಯಾರಿಗೂ ತಿಳಿಯದಂತೆ ಹೊತ್ತೊಯ್ದಿದ್ದಾರೆ. ಈ ಕಳ್ಳತನದ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಒಳಬಂದ ಕಳ್ಳ, ಅಡುಗೆ ಅನಿಲದಿಂದ ತುಂಬಿದ್ದ ಪೂರ್ಣ ಪ್ರಮಾಣದ

ಸಿಲಿಂಡರ್ ಅಭಾವದ ನಡುವೆ ಗ್ಯಾಸ್ ಸಿಲಿಂಡರ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೃತ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ!

(ನ್ಯೂಸ್‌ ಕಡಬ) newskadaba.com,  ಮಾ.12: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ. ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್

ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top