ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ!

(ನ್ಯೂಸ್‌ ಕಡಬ) newskadaba.com,  ಮಾ.12: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ. ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್ […]

ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.12: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಮಾ.11: ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪಿಯನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಪೆರಂಬರ ಕೋರನ್ಕಂಡಿ ಮೀಥಲ್ ನಿವಾಸಿ ಮೊಹಮ್ಮದ್ ಶಾಮಿಲ್ (21) ಬಂಧಿತ ಆರೋಪಿ. ಪೊಲೀಸರು ಗಸ್ತಿನಲ್ಲಿರುವಾಗ ಸೋಮವಾರ ರಾತ್ರಿ 10 ಗಂಟೆ ವೇಳೆಗೆ ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಕದ್ರಿ ಠಾಣೆಯಲ್ಲಿ

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಮಾ.11:  ಕಳೆದ ಸುಮಾರು 13 ವರ್ಷಗಳಿಂದ ಶಾಶ್ವತ ಕೋಮಾ ಸ್ಥಿತಿಯಲ್ಲಿದ್ದ ಗಾಜಿಯಾಬಾದ್‌ನ ಹರೀಶ್‌ ರಾಣಾ ಎಂಬ ವ್ಯಕ್ತಿಗೆ ದಯಾ ಮರಣ ಕಲ್ಪಿಸಲು ಸರ್ವೋಚ್ಚ ನ್ಯಾಯಲಯ ಅನುಮತಿ ನೀಡಿದೆ. ಆತನ ಕುಟುಂಬವು ಜೀವರಕ್ಷಕ ವೈದ್ಯಕೀಯ ಸಹಾಯವನ್ನು ಹಿಂಪಡೆಯಲು ಮತ್ತು ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಲು ಅನುಮತಿ ಕೋರಿ ನ್ಯಾಲಯಲದ ಮೆಟ್ಟಿಲು ಏರಿದ್ದರು. ರಾಣಾ ವಿದ್ಯಾರ್ಥಿಯಾಗಿದ್ದಾಗ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡ ನಂತರ 2013 ರಿಂದ ಹಾಸಿಗೆ ಹಿಡಿದಿದದ್ದರು. ಅವರ ಕುರಿತಾದ

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳ 51 ಸಾವಿರ ಅತಿಥಿ ಶಿಕ್ಷಕರಿಗೆ 4 ತಿಂಗಳಿನಿಂದ ವೇತನ ಪಾವತಿಸಿಲ್ಲ!

(ನ್ಯೂಸ್‌ ಕಡಬ) newskadaba.com,  ಮಾ.11: ರಾಜ್ಯದ ಸರ್ಕಾರಿ ಶಾಲೆಗಳು, ಈಗಾಗಲೇ ಶಿಕ್ಷಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದರ ಜೊತೆಗೆ ನವೆಂಬರ್ 2025 ರಿಂದ ಇಲ್ಲಿಯವರೆಗೆ ಸುಮಾರು 51,000 ಅತಿಥಿ ಶಿಕ್ಷಕರ ವೇತನ ಪಾವತಿಸಲು ಸರ್ಕಾರ ವಿಫಲವಾಗಿದೆ. ನಮ್ಮ ಬೋಧನಾ ಅನುಭವವನ್ನು ಅವಲಂಬಿಸಿ ನಮಗೆ 10,000 ರಿಂದ 12,000 ರೂ.ಗಳನ್ನು ಪಾವತಿಸಲಾಗುತ್ತಿದೆ. ನವೆಂಬರ್‌ನಿಂದ ನಮಗೆ ಸಂಬಳ ಬಂದಿಲ್ಲ. ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಅತಿಥಿ ಶಿಕ್ಷಕರ ಸಂಘವು ಶಾಲಾ ಇಲಾಖೆ ಅಧಿಕಾರಿಗಳಿಗೆ ಮತ್ತು ಪ್ರಧಾನ ಕಾರ್ಯದರ್ಶಿಗೆ

ಸರ್ಕಾರಿ ಶಾಲೆಗಳ 51 ಸಾವಿರ ಅತಿಥಿ ಶಿಕ್ಷಕರಿಗೆ 4 ತಿಂಗಳಿನಿಂದ ವೇತನ ಪಾವತಿಸಿಲ್ಲ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಕುಕ್ಕೆಗೂ ತಟ್ಟಿದ ಗ್ಯಾಸ್ ಪೊರೈಕೆ ವ್ಯತ್ಯಯ ಬಿಸಿ – ಉಪಹಾರದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಮಾ.11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ

ಸುಳ್ಯ : ಕುಕ್ಕೆಗೂ ತಟ್ಟಿದ ಗ್ಯಾಸ್ ಪೊರೈಕೆ ವ್ಯತ್ಯಯ ಬಿಸಿ – ಉಪಹಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ಮಾ.11: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾಗಿದೆ ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು

ಉಳ್ಳಾಲ : ಕಣ್ಮರೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ

(ನ್ಯೂಸ್‌ ಕಡಬ) newskadaba.com,  ಮಾ.11: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮಾರ್ಚ್ 6ರಂದು ಮಧ್ಯಾಹ್ನ ಸುಮಾರು 1.20 ಗಂಟೆಯ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ

ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.11: ಇರಾನ್-ಇಸ್ರೇಲ್ ಹಾಗೂ ಅಮೆರಿಕ ಸಂಘರ್ಷದ ಹಿನ್ನೆಲೆ, ಚಿನ್ನ ಬೆಳ್ಳಿ ಸುರಕ್ಷಿತ ಹೂಡಿಕೆಯತ್ತ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನ ಬೆಳ್ಳಿ ದರ ಏರಿಕೆಯಾಗಿದೆ.ಮಾರ್ಚ್ 11, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 930 ರೂ ಏರಿಕೆ ಆಗಿ 1,63,310 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 93 ರೂ ಹೆಚ್ಚಳ ಕಂಡಿದ್ದು, 16,331 ರೂ ದಾಖಲಾಗಿದೆ. 22 ಕ್ಯಾರೆಟ್ 1 ಗ್ರಾಂ ಬೆಲೆ 85 ರೂ ಏರಿಕೆ ಆಗಿ 14,970

ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ

(ನ್ಯೂಸ್‌ ಕಡಬ) newskadaba.com,  ಮಾ.11: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 9ರ ರಾತ್ರಿ ಈ ದಾಳಿ ನಡೆಸಲಾಗಿದೆ.. ಜಗದೀಶ್ (35) ಎಂಬುವವರ ಮನೆಯ ಪಕ್ಕದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ತಲಾ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಮತ್ತು

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top