ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ […]

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಮಾ. 05. ರಾಜ್ಯದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಹಾಗೂ ಮಾನವ ಸಂಘರ್ಷ ನಿಯಂತ್ರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಎಲಿಫಂಟ್ ಟಾಸ್ಕ್ ಫೋರ್ಸ್ ರಚನೆಗೆ ಆದೇಶ ಹೊರಡಿಸಿದೆ. ಅರಣ್ಯ ಪ್ರದೇಶಗಳಲ್ಲಿ ಕಾಡಾನೆಗಳ ಚಲನೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಮ ಪ್ರದೇಶಗಳಲ್ಲಿ ಬೆಳೆ ನಷ್ಟ ಹಾಗೂ ಮಾನವ ಜೀವಹಾನಿ ಸಂಭವಿಸುವ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ತಂಡವನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಪ್ರಕಾರ ಒಟ್ಟು 28 ಸಿಬ್ಬಂದಿಯನ್ನು ಒಳಗೊಂಡ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಇದರಲ್ಲಿ ಮುಖ್ಯವಾಗಿ

ಕಾಡಾನೆ ನಿಯಂತ್ರಣಕ್ಕೆ ಟಾಸ್ಪ್ ಫೋರ್ಸ್ ರಚಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು

(ನ್ಯೂಸ್‌ ಕಡಬ) newskadaba.com,  ಮಾ.05: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ ಒಂದು ಕೆಜಿ

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೆ ದಾಳಿ – ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 05. ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ಕೃಷಿ ನಾಶ ಪಡಿಸಿದ ಘಟನೆ ಅರಂತೋಡು ಗ್ರಾಮದ ಅಡ್ತಲೆಯ ನೆಕ್ಕರೆ ಎಂಬಲ್ಲಿಂದ ವರದಿಯಾಗಿದೆ.   ಇಲ್ಲಿಯ ದಾಸಪ್ಪ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ತೆಂಗಿನ ಮರಗಳನ್ನು ನಾಶ ಪಡಿಸಿದೆ ಎಂದು ತಿಳಿದು ಬಂದಿದೆ. ಅಡ್ತಲೆ ಭಾಗದಲ್ಲಿ ಇದು ಕಳೆದ ಅನೇಕ ಸಮಯಗಳಿಂದ ನಿರಂತರವಾಗಿ ಕಾಡಾನೆಗಳು ಕ್ರಷಿ ನಾಶ ಮಾಡಿ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ.

ಆನೆ ದಾಳಿ – ಅಪಾರ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕದ ಜೂಜಾಟ: ಪುತ್ತೂರು ಪೊಲೀಸರಿಂದ ಮೂವರ ಬಂಧನ, ಕೋಳಿಗಳ ವಶ

(ನ್ಯೂಸ್‌ ಕಡಬ) newskadaba.com,  ಮಾ.05: ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಉಪ್ಪಿನಂಗಡಿ ಪೊಲೀಸರು ಮಂಗಳವಾರ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ಕೊಯಿಲ ಗ್ರಾಮದ ಸಬಲೂರು ನಿವಾಸಿ ಸತೀಶ್ (38) ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನ ಮುರಳಿ (30), ಮತ್ತು ವಳಲು ಕುಡತ್ತಡ್ಕ ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಕೆ.ಪಿ ಮತ್ತು ಅವರ ತಂಡ ಮಾಣಿಕ್ಕಳ

ಕೋಳಿ ಅಂಕದ ಜೂಜಾಟ: ಪುತ್ತೂರು ಪೊಲೀಸರಿಂದ ಮೂವರ ಬಂಧನ, ಕೋಳಿಗಳ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ!

(ನ್ಯೂಸ್‌ ಕಡಬ) newskadaba.com,  ಮಾ.05: ಫರಂಗಿಪೇಟೆಯ 10 ನೇ ಮೈಲ್‌ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದ್ದು, ನಿವಾಸಿಗಳಲ್ಲಿ ಅನುಮಾನ , ಆತಂಕ ಸೃಷ್ಟಿಯಾಗಿದೆ.ವರದಿಗಳ ಪ್ರಕಾರ, ಮಂಗಳವಾರ ಸಂಜೆ, ಸ್ಥಳೀಯ ನಿವಾಸಿಯೊಬ್ಬರು ನದಿ ದಂಡೆಯಲ್ಲಿ ನೀರಿನಲ್ಲಿ ಹಲವಾರು ಆಧಾರ್ ಕಾರ್ಡ್‌ಗಳು ತೇಲುತ್ತಿರುವುದನ್ನು ಕಂಡು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ, ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ವಿದ್ಯುತ್‌ ದರ ಹೆಚ್ಚಳ- ಯುನಿಟ್‌ಗೆ 10ರಿಂದ 95 ಪೈಸೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.05: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗವು (ಕೆಇಆರ್‌ಸಿ) 2025-26ನೇ ಸಾಲಿಗೆ ಅನ್ವಯವಾಗುವಂತೆ ನಿಗದಿಪಡಿಸಿದ್ದ ವಿದ್ಯುತ್‌ ದರಗಳನ್ನು ಪರಿಷ್ಕರಿಸಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್‌ ದರವನ್ನು ಪ್ರತಿ ಯುನಿಟ್‌ಗೆ 10 ಪೈಸೆಯಿಂದ ಗರಿಷ್ಠ 95 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಬಳಸುವ ವಿದ್ಯುತ್‌ ದರವನ್ನು ಯೂನಿಟ್‌ಗೆ ಸರಾಸರಿ 95 ಪೈಸೆಯಷ್ಟು ಕಡಿಮೆ ಮಾಡಿದೆ. 2025-26ನೇ ಸಾಲಿಗೆ ಅನ್ವಯವಾಗುವಂತೆ ವಿದ್ಯುತ್‌ ದರ ಪರಿಷ್ಕರಣೆ ವೇಳೆ ಕೆಇಆರ್‌ಸಿಯು ಕೈಗಾರಿಕೆ, ವಾಣಿಜ್ಯ ಬಳಕೆಯ ವಿದ್ಯುತ್‌ಗೆ

ವಾಣಿಜ್ಯ ವಿದ್ಯುತ್‌ ದರ ಹೆಚ್ಚಳ- ಯುನಿಟ್‌ಗೆ 10ರಿಂದ 95 ಪೈಸೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.05: ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ

(ನ್ಯೂಸ್‌ ಕಡಬ) newskadaba.com,  ಮಾ.04 : ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಕಟ್ಟಡದ ಮೇಲ್ಭಾಗದಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಅಗ್ನಿಶಾಮಕ ಪಡೆತಕ್ಷಣ ನಿಯಂತ್ರಣಕ್ಕೆ ತಂದಿದೆ.ಘಟನೆಯ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದೃಢಪಡಿಸಿದ್ದಾರೆ. ಈ ದಾಳಿ ಮಧ್ಯಪ್ರಾಚ್ಯದಲ್ಲಿ ನಿರಂತರ ನಡೆಯುತ್ತಿರುವಇರಾನ್-ಇಸ್ರೇಲ್ ಸಂಘರ್ಷದ ದಾಳಿ-ಪ್ರತಿದಾಳಿ ಘಟನಾಕ್ರಮದ ಭಾಗವಾಗಿದೆ. ಇದಕ್ಕೂ ಮುನ್ನ ಇಸ್ರೇಲ್-ಅಮೆರಿಕದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಅಸ್ಪಷ್ಟತೆ ಹಾಗೂ ಕೋಪದಿಂದ,

ದುಬೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿತ್ತೂರು ಬಳಿ ಅಪಘಾತ; ರಾಜ್ಯದ 5 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.04 : ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ. ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಇಂದು ಬೆಳಿಗ್ಗೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದ

ಚಿತ್ತೂರು ಬಳಿ ಅಪಘಾತ; ರಾಜ್ಯದ 5 ಮಂದಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top