ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ. ಶಹೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ  ಟಿ.ಎಂ ಶಹೀದ್  ತೆಕ್ಕಿಲ್  ತಿಳಿಸಿದರು. ಅವರು ಶುಕ್ರವಾರದಂದು ಪದವಿನಂಗಡಿ ದೇವಿನಗರದಲ್ಲಿ ನಡೆದ  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ […]

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ. ಶಹೀದ್ Read More »

ಕರಾವಳಿ

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಫೆ.28:  ಸರ್ಕಾರಿ ನೌಕರರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡಲು, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಪ್ರಮುಖ ಅಂಶಗಳಾಗಿದೆ. ಇದು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಡಿಜಿಟಲ್ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಸರ್ಕಾರಿ ಕಚೇರಿಗಳ ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯನಿರ್ವಹಣೆಯನ್ನು ಸಕ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾಗುತ್ತದೆ. ಇಲ್ಲಿಯವರೆಗೆ ಪಠ್ಯಕ್ರಮವು ಪ್ರಾಥಮಿಕವಾಗಿ ವಿಂಡೋಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ

(ನ್ಯೂಸ್‌ ಕಡಬ) newskadaba.com,  ಫೆ.28 : ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ….ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಪ್ರಾರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ ಮೋಕ್ಷ ಬಳಿಕ ಮನೆಯನ್ನು ಮತ್ತು

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಇಂದು ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ- ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಇಂದು (ಫೆ.28) ‘ಪ್ರೇರಣಾ-2026’ ಉದ್ಯಮಶೀಲತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಪದವಿ ಕಾಲೇಜಿನಲ್ಲಿ ಈ ಸಮಾವೇಶ ನಡೆಯಲಿದ್ದು, ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ SC/ST ಯುವ ಸಮುದಾಯದಲ್ಲಿ ಸ್ವಂತ ಉದ್ಯಮ

ಮಂಗಳೂರಿನಲ್ಲಿ ಇಂದು ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ- ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್‌ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ Read More »

ಕರಾವಳಿ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ?

(ನ್ಯೂಸ್‌ ಕಡಬ) newskadaba.com,  ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ

(ನ್ಯೂಸ್‌ ಕಡಬ) newskadaba.com,  ಫೆ.28: ಬೆಂಕಿ  ಅವಘಡದಲ್ಲಿ ಖಾಸಗಿ ಅತಿಥಿ ಗೃಹ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಜೆ ಹೂಡೆಯಲ್ಲಿ ನಡೆದಿದೆ.ಬಾಡಿಗೆಗೆ ಪಡೆದಿದ್ದ ಅತಿಥಿಗಳು ಹೊರಗೆ ಇದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದು ಬೇಗನೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಮತ್ತು ಉಡುಪಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ನೆರೆಯ ಆಸ್ತಿಗಳಿಗೆ ಬೆಂಕಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು!

(ನ್ಯೂಸ್‌ ಕಡಬ) newskadaba.com,  ಫೆ.28: ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಇದೀಗ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್​ನಲ್ಲಿ ಅಂದರೆ ಮೂರನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ. 7.8ರಷ್ಟಾಗಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ. 6.2ರಷ್ಟಿತ್ತು. 2026ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಶೇ. 7.8ರಷ್ಟಿದ್ದು, ಈ

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು! Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.28: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ

(ನ್ಯೂಸ್‌ ಕಡಬ) newskadaba.com,ಫೆ.27 : ಪಾಕಿಸ್ತಾನದ ವಾಯುದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ನಡೆಸಿದ ಮಿಲಿಟರಿ ದಾಳಿಯಲ್ಲಿ 55 ಪಾಕಿಸ್ತಾನಿ ಸೈನಿಕರು ಹತ್ಯೆಗೀಡಾಗಿದ್ದು, 23 ಮಂದಿ ಜೀವಂತವಾಗಿ ಸೆರೆಹಿಡಿಯಲ್ಪಟ್ಟಿದ್ದಾರೆ. ಈ ದಾಳಿಗೆ ತಕ್ಷಣವೇ ಪಾಕಿಸ್ತಾನವು ಪ್ರತೀಕಾರ ವಾಯುದಾಳಿ ನಡೆಸಿದೆ. ಶುಕ್ರವಾರ ಬೆಳಗ್ಗೆ ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾ ಪ್ರಾಂತ್ಯಗಳ ಮೇಲೆ ನಡೆದ ಬಾಂಬ್ ದಾಳಿಗಳಲ್ಲಿ ಸಂಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ಡುರಾಂಡ್ ರೇಖೆಯ 2,611 ಕೀಮೀ ಉದ್ದದ ಗಡಿ ಮತ್ತು ಟೋರ್ಖಾಮ್ ಭಾಗದಲ್ಲಿ ಉಭಯ ದೇಶಗಳ ನಡುವೆ ಭಾರೀ ಗುಂಡಿನ ಚಕಮಕಿ

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top