ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.05. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ‘ಈಕ್ವಲ್ ಅರ್ಥ್ ಪ್ರೊಜೆಕ್ಷನ್’ ಎಂಬ ನೂತನ ಭೂಪಟವನ್ನು ಅಳವಡಿಸಿಕೊಳ್ಳಲು ನಿರ್ಣಯ ಅಂಗೀಕರಿಸಿದೆ.ನಿರ್ಣಯದ ಪರವಾಗಿ ಭಾರತ ಸೇರಿದಂತೆ 164 ದೇಶಗಳು ಮತ ಚಲಾಯಿಸಿದರೆ, ಅಮೆರಿಕ ಮಾತ್ರ ವಿರುದ್ಧವಾಗಿ ಮತ ಹಾಕಿತು. 6 ದೇಶಗಳು ಮತದಾನದಿಂದ ದೂರ ಉಳಿದವು. 1569ರ ‘ಮೆರ್ಕೆಟರ್ ಪ್ರೊಜೆಕ್ಷನ್’ ಭೂಮಿಯ ನಿಜವಾದ ವಿಸ್ತೀರ್ಣಕ್ಕಿಂತ ಉತ್ತರ ಅಮೆರಿಕ ಹಾಗೂ ಯುರೋಪ್ ಖಂಡಗಳನ್ನು ದೊಡ್ಡದಾಗಿ ತೋರಿಸುತ್ತಿತ್ತು.ಹಳೆಯ ನಕ್ಷೆಯಲ್ಲಿ ಗ್ರೀನ್‌ಲ್ಯಾಂಡ್ ಮತ್ತು ಆಫ್ರಿಕಾ ಒಂದೇ ಗಾತ್ರದಲ್ಲಿ ಕಾಣಿಸುತ್ತಿದ್ದವು. ಆದರೆ ನೈಜವಾಗಿ […]

ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NITK ಸುರತ್ಕಲ್‌ನಲ್ಲಿ ಹಣ ದುರುಪಯೋಗ: ಇಬ್ಬರು ಬೋಧಕರು ಪೊಲೀಸ್ ವಶಕ್ಕೆ

  ಮಂಗಳೂರಿನ NITK ಸುರತ್ಕಲ್ ಸಂಸ್ಥೆಯ ಇಬ್ಬರು ಅಧ್ಯಾಪಕರು ಸಂಸ್ಥೆಯ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ನಡೆಸಿದ ಆಂತರಿಕ ವಿಚಾರಣೆಯಲ್ಲಿ ಹಣಕಾಸಿನ ಅಕ್ರಮ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೇಳಿಕೆಯಂತೆ, ಸಾರ್ವಜನಿಕ ಸೇವಕರ ನಂಬಿಕೆದ್ರೋಹ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರೂ ಬೋಧಕರನ್ನು ವಶಕ್ಕೆ ಪಡೆಯಲಾಗಿದೆ. ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ

NITK ಸುರತ್ಕಲ್‌ನಲ್ಲಿ ಹಣ ದುರುಪಯೋಗ: ಇಬ್ಬರು ಬೋಧಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ

(ನ್ಯೂಸ್‌ ಕಡಬ) newskadaba.com, ಸೆ.05. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಇತ್ತೀಚೆಗೆ ಕಳವು ಮಾಡಲಾಗಿತ್ತು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡು ನಿವಾಸಿ ಹಾಗೂ ಅಂತಾರಾಜ್ಯ ಕಳ್ಳ ಸತೀಶ್ (31) ಎಂಬಾತನನ್ನು ಬಂಧಿಸಿದ್ದಾರೆ. ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಅನುಮಾನಾಸ್ಪದ ಮೃತ್ಯು: ಕೊಲೆ ಶಂಕೆ

(ನ್ಯೂಸ್‌ ಕಡಬ) newskadaba.com, ಸೆ.05. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಹೊಸಂಗಡಿಯ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ (ಕ್ವಾರ್ಟರ್ಸ್) ಈ ಘಟನೆ ನಡೆದಿದೆ. ಕೆಲಸ ಮುಗಿಸಿ ಬಂದ ಇತರ ಕಾರ್ಮಿಕರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದ್ಯಪಾನದ ವೇಳೆ ನಡೆದ ಗಲಾಟೆಯೇ ಕೊಲೆಗೆ

ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಅನುಮಾನಾಸ್ಪದ ಮೃತ್ಯು: ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ: ‘ನಿಶಾನೆ ಆನೆ’ಯಾಗಿ ಅಭಿಮನ್ಯು ಕದನ ವಿರಾಮ!

(ನ್ಯೂಸ್‌ ಕಡಬ) newskadaba.com,  ಸೆ. 04  ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಪಾಲ್ಗೊಳ್ಳಲು ಸರ್ಕಾರ ಅಧಿಕೃತ ಸಮ್ಮತಿ ನೀಡಿದೆ.ಈ ಕುರಿತು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಇದುವರೆಗೆ 6 ಬಾರಿ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅಭಿಮನ್ಯು, ಈ ಬಾರಿಯ ಜಂಬೂಸವಾರಿಯಲ್ಲಿ ‘ನಿಶಾನೆ ಆನೆ’ಯಾಗಿ ಮುಂಚೂಣಿಯಲ್ಲಿ ಸಾಗಲಿದ್ದಾನೆ. ಪ್ರಸಿದ್ಧ ಆನೆ ಅಭಿಮನ್ಯು ದಸರೆಯಲ್ಲಿ ಪಾಲ್ಗೊಳ್ಳುತ್ತಿರುವುದು ಕೋಟ್ಯಂತರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.  

ಮೈಸೂರು ದಸರಾ: ‘ನಿಶಾನೆ ಆನೆ’ಯಾಗಿ ಅಭಿಮನ್ಯು ಕದನ ವಿರಾಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಕಳ್ಳತನ: ಉಪ್ಪಿನಂಗಡಿ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ. 04  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ನಿಲ್ಲಿಸಲಾಗಿದ್ದ ವಾಹನಗಳ ಡಿಸೆಲ್ ಟ್ಯಾಂಕ್‌ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳು.ಸೆಪ್ಟೆಂಬರ್ 3ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಬೊಲೆರೋ ಪಿಕ್‌ಅಪ್ ಹಾಗೂ 3 ಜನರನ್ನು ಗಮನಿಸಿ ತನಿಖೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಕಳ್ಳತನ: ಉಪ್ಪಿನಂಗಡಿ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಉಪನಗರ ರೈಲು ಯೋಜನೆಗೆ ಬಿಗ್ ಬೂಸ್ಟ್: K-RIDE ಹಾಗೂ ICF ನಡುವೆ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ಸೆ. 04  ಬೆಂಗಳೂರಿನ ಬಹುನಿರೀಕ್ಷಿತ ‘ಬೆಂಗಳೂರು ಉಪನಗರ ರೈಲು ಯೋಜನೆ’ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ಮತ್ತು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ ಬಿದ್ದಿದೆ. 3 ಬೋಗಿಗಳ ಸಾಮರ್ಥ್ಯದ ಒಟ್ಟು 51 ರೇಕ್ಸ್‌ಗಳನ್ನು ಪೂರೈಸಲು K-RIDE ಹಾಗೂ ICF ಅಧಿಕೃತ ಒಪ್ಪಂದ ಮಾಡಿಕೊಂಡಿವೆ.ಈ ಅತ್ಯಾಧುನಿಕ AC ಬೋಗಿಗಳನ್ನು ಯೋಜನೆಯ ಮಲ್ಲಿಗೆ ಮಾರ್ಗ ಮತ್ತು ಕನಕ ಮಾರ್ಗಗಳಲ್ಲಿ ಬಳಸಲಾಗುವುದು. ಅತ್ಯಾಧುನಿಕ ವಿನ್ಯಾಸ, ನಿರ್ಮಾಣ, RDSO

ಬೆಂಗಳೂರು ಉಪನಗರ ರೈಲು ಯೋಜನೆಗೆ ಬಿಗ್ ಬೂಸ್ಟ್: K-RIDE ಹಾಗೂ ICF ನಡುವೆ ಒಪ್ಪಂದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ

(ನ್ಯೂಸ್‌ ಕಡಬ) newskadaba.com,  ಸೆ. 04  ಗೇರುಕಟ್ಟೆ ಬಳಿಯ ಸಂಬೋಳ್ಯದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆತನ ಸಹೋದರ ಹಾಗೂ ಇಬ್ಬರು ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಸುಮಂತ್ ಸಹೋದರ ಸುದರ್ಶನ್ (ಆಗಸ್ಟ್ 28), ಚಿಕ್ಕಪ್ಪಂದಿರಾದ ರಾಧಾಕೃಷ್ಣ (ಆಗಸ್ಟ್ 29) ಹಾಗೂ ಲಕ್ಷ್ಮಿನಾರಾಯಣ (ಸೆಪ್ಟೆಂಬರ್ 1) ಅವರಿಗೆ ಬ್ರೈನ್ ಮ್ಯಾಪಿಂಗ್ ನಡೆಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿ ಸುದರ್ಶನ್ ಅವರನ್ನು ಸುಮಾರು 4 ಗಂಟೆ

ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಶಾಕ್: ಇಂದು ಮತ್ತೆ ಏರಿಕೆಯತ್ತ ಬಂಗಾರದ ಬೆಲೆ!

(ನ್ಯೂಸ್‌ ಕಡಬ) newskadaba.com,  ಸೆ. 04 ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ದರಗಳು ಅನುಕ್ರಮವಾಗಿ 120 ರೂ. ಮತ್ತು 131 ರೂ.ಗಳಷ್ಟು ಹೆಚ್ಚಾಗಿವೆ. 22 ಕ್ಯಾರಟ್ ಚಿನ್ನ: 1 ಗ್ರಾಂಗೆ 14,360 ರೂ. 8 ಗ್ರಾಂ:** 1,14,880 ರೂ.10 ಗ್ರಾಂ:** 1,43,600 ರೂ. ಹಾಗೂ 100 ಗ್ರಾಂ:** 14,36,000 ರೂ. 24 ಕ್ಯಾರಟ್ ಚಿನ್ನದ ಬೆಲೆ ; 1 ಗ್ರಾಂಗೆ  15,666 ರೂ.  8 ಗ್ರಾಂ:**

ಚಿನ್ನದ ಪ್ರಿಯರಿಗೆ ಶಾಕ್: ಇಂದು ಮತ್ತೆ ಏರಿಕೆಯತ್ತ ಬಂಗಾರದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನ ಅರ್ಜಿ ಮಂಜೂರು

(ನ್ಯೂಸ್‌ ಕಡಬ) newskadaba.com,  ಸೆ. 04 ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ 27 ವರ್ಷಗಳ ದಾಂಪತ್ಯ ಜೀವನಕ್ಕೆ ಕರ್ನಾಟಕ ಹೈಕೋರ್ಟ್ ಅಂತ್ಯಹಾಡಿದೆ. ಕ್ರೌರ್ಯದ ಆಧಾರದ ಮೇಲೆ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ. ಡಿ.ಕೆ. ಸಿಂಗ್ ಹಾಗೂ ನ್ಯಾ. ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ.ಪತ್ನಿ ನಾಗರತ್ನ ಅವರಿಗೆ ಒನ್‌ಟೈಮ್ ಸೆಟಲ್‌ಮೆಂಟ್ (ಏಕಕಾಲದ ಪರಿಹಾರ) ರೂಪದಲ್ಲಿ ₹2 ಕೋಟಿ ಜೀವನಾಂಶವನ್ನು

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನ ಅರ್ಜಿ ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top